ಕ್ರೀಡೆ

ಕ್ರಿಕೆಟ್‌ ವೃತ್ತಿ ಬದುಕಿಗೆ ವಿದಾಯ ಹೇಳಿದ ಶಾನ್‌ ಮಾರ್ಷ್‌!

ಆಸ್ಟ್ರೇಲಿಯಾದ ಎಡಗೈ ಆಟಗಾರ ಶಾನ್ ಮಾರ್ಷ್ ಅಂತರಾಷ್ಟ್ರೀಯ ಕ್ರಿಕೆಟ್‌ ಸೇರಿದಂತೆ ಎಲ್ಲಾ ಮಾದರಿ ಕ್ರಿಕೆಟ್​ನಿಂದ ನಿವೃತ್ತಿ ಘೋಷಿಸಿದ್ದಾರೆ.

ತಮ್ಮ 40ನೇ ವಯಸ್ಸಿನಲ್ಲಿ ಎಲ್ಲಾ ಮಾದರಿಯ ಕ್ರಿಕೆಟ್​ನಿಂದ ನಿವೃತ್ತಿ ಪಡೆಯಲು ನಿರ್ಧರಿಸಿದ್ದಾರೆ. ಜನವರಿ 17 ರಂದು ಸಿಡ್ನಿ ಥಂಡರ್ ವಿರುದ್ಧ ನಡೆಯಲಿರುವ ಪಂದ್ಯದ ಬಳಿಕ ಮಾರ್ಷ್ ವೃತ್ತಿ ಜೀವನಕ್ಕೆ ವಿದಾಯ ಹೇಳಲಿದ್ದಾರೆ.

ಆಸ್ಟ್ರೇಲಿಯಾ ತಂಡಕ್ಕೆ 2008 ರಲ್ಲಿ ಕಾಲಿಡುವ ಜೊತೆಗೆ ತಮ್ಮ ಅಂತರಾಷ್ಟ್ರೀಯ ಕ್ರಿಕೆಟ್‌ ಬದುಕನ್ನು ಆರಂಭಿಸಿದ್ದ ಮಾರ್ಷ್,​ 2019 ರಲ್ಲಿ ಕೊನೆಯ ಬಾರಿ ಆಸ್ಟ್ರೇಲಿಯಾ ತಂಡದ ಪರ ಕಣಕ್ಕಿಳಿದಿದ್ದರು.

ನಂತರ ಪ್ರಥಮ ದರ್ಜೆ ಕ್ರಿಕೆಟ್ ಹಾಗೂ ಫ್ರಾಂಚೈಸಿ ಲೀಗ್​ಗಳಲ್ಲಿ ತಮ್ಮ ಆಟ ಮುಂದುವರೆಸಿದ್ದರು. ಇದೀಗ ಬಿಗ್ ಬ್ಯಾಷ್ ಲೀಗ್‌ನಲ್ಲಿ ಅಂತಿಮ ಪಂದ್ಯ ಆಡುವ​ ಮೂಲಕ ಎಲ್ಲಾ ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಲು ನಿರ್ಧರಿಸಿದ್ದಾರೆ.

ಆಸಿಸ್‌ ಪರ 38 ಟೆಸ್ಟ್ ಪಂದ್ಯಗಳಲ್ಲಿ 6 ಶತಕ ಹಾಗೂ 10 ಅರ್ಧಶತಕಗಳೊಂದಿಗೆ ಒಟ್ಟು 2265 ರನ್, 73 ಏಕದಿನ ಪಂದ್ಯಗಳಲ್ಲಿ 7 ಶತಕ ಹಾಗೂ 15 ಅರ್ಧಶತಕಗಳ ಸಹಿತ 2773 ರನ್​ಗಳಿಸಿದ್ದಾರೆ. ಇನ್ನು 15 ಟಿ20 ಪಂದ್ಯಗಳಲ್ಲಿ ಆಸೀಸ್ ಪರ ಬ್ಯಾಟ್ ಬೀಸಿದ್ದ ಮಾರ್ಷ್ ಕೇವಲ 255 ರನ್​ ಕಲೆಹಾಕಿದ್ದಾರೆ.

ಆರೆಂಜ್‌ ಕ್ಯಾಪ್‌ ವಿನ್ನರ್‌: 2008ರಲ್ಲಿ ಉದ್ಘಾಟನೆಗೊಂಡ ಚೊಚ್ಚಲ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಆರೆಂಜ್ ಕ್ಯಾಪ್ ಗೆದ್ದ ದಾಖಲೆ ಶಾನ್ ಮಾರ್ಷ್ ಹೆಸರಿನಲ್ಲಿದೆ.

2008 ರಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ (ಈಗಿನ ಪಂಜಾಬ್ ಕಿಂಗ್ಸ್​) ಪರ 11 ಪಂದ್ಯಗಳನ್ನಾಡಿದ್ದ ಮಾರ್ಷ್ 1 ಶತಕ ಹಾಗೂ 5 ಅರ್ಧಶತಕಗಳೊಂದಿಗೆ ಒಟ್ಟು 616 ರನ್ ಬಾರಿಸಿ, ಮೊಲದ ಸೀಸನ್‌ನಲ್ಲೇ ಆರೆಂಜ್‌ ಕ್ಯಾಪ್‌ ವಿನ್ನರ್‌ ಆಗಿ ಹೊರಹೊಮ್ಮಿದ್ದರು.

ಐಪಿಎಲ್​ನಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ (ಪಂಜಾಬ್ ಕಿಂಗ್ಸ್​) ತಂಡದ ಪರ 9 ಸೀಸನ್​ನಲ್ಲಿ 71 ಪಂದ್ಯಗಳನ್ನಾಡಿದ್ದ ಎಡಗೈ ದಾಂಡಿಗ 1 ಶತಕ ಹಾಗೂ 20 ಅರ್ಧಶತಕಗಳೊಂದಿಗೆ 2477 ರನ್ ಕಲೆಹಾಕಿದ್ದಾರೆ.

2017 ರಲ್ಲಿ ಪಂಜಾಬ್ ಕಿಂಗ್ಸ್ ಫ್ರಾಂಚೈಸಿ ಶಾನ್ ಮಾರ್ಷ್ ಅವರನ್ನು ಪಂಜಾಬ್‌ ಕೈಬಿಟ್ಟಿತು. 2018 ರ ಹರಾಜಿನಲ್ಲಿ 1.5 ಕೋಟಿ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಮಾರ್ಷ್ ಅವರನ್ನು ಖರೀದಿಸಲು ಯಾವುದೇ ಫ್ರಾಂಚೈಸಿ ಮುಂದೆ ಬರಲಿಲ್ಲ. ಈಗ ಎಲ್ಲಾ ಮಾದರಿಯ ಕ್ರಿಕೆಟ್‌ನಿಂದ ಮಾರ್ಷ್‌ ನಿವೃತ್ತಿ ಪಡೆಯುತ್ತಿದ್ದಾರೆ.

andolanait

Recent Posts

ಚಾಮರಾಜನಗರದಲ್ಲಿ ಬೋನಿಗೆ ಬಿದ್ದ ಹುಲಿ

ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಹುಲಿಗಳ ಉಪಟಳ ಹೆಚ್ಚಾಗಿದ್ದು, ದೇಪಾಪುರ ಗ್ರಾಮದ ಹೊರವಲಯದಲ್ಲಿ ಹುಲಿಯೊಂದು ಬೋನಿಗೆ ಬಿದ್ದಿದೆ. ಹುಲಿಯನ್ನು ನೋಡಲು…

11 mins ago

ರಾಜ್ಯದಲ್ಲಿ ಬೆಳಗಿನ ವೇಳೆ ದಟ್ಟ ಮಂಜು: ಹವಾಮಾನ ತಜ್ಞರು ಹೇಳಿದ್ದಿಷ್ಟು.!

ಬೆಂಗಳೂರು: ರಾಜ್ಯದಲ್ಲಿ ತೀವ್ರ ಚಳಿ, ಶೀತಗಾಳಿಯ ಜೊತೆಗೆ ಬೆಳಗಿನ ವೇಳೆ ಕೆಲವೆಡೆ ದಟ್ಟವಾದ ಮಂಜು ಆವರಿಸುತ್ತಿದೆ. ಬೆಳಗಿನ ವೇಳೆಯಲ್ಲಿ ದಟ್ಟವಾದ…

19 mins ago

ಶಬರಿಮಲೆ ದೇವಸ್ಥಾನದ ಚಿನ್ನ ನಾಪತ್ತೆ ಪ್ರಕರಣ: ಸಿಎಂ ಪಿಣರಾಯಿ ವಿಜಯನ್‌ ಹೇಳಿದ್ದಿಷ್ಟು.!

ತಿರುವನಂತಪುರಂ: ಶಬರಿಮಲೆ ದೇವಸ್ಥಾನದ ಚಿನ್ನ ನಾಪತ್ತೆ ಪ್ರಕರಣದ ಆರೋಪಿಗಳ ಜೊತೆಗೆ ಸೋನಿಯಾ ಗಾಂಧಿ ನಂಟಿದೆ ಎಂದು ಸಿಎಂ ಪಿಣರಾಯಿ ವಿಜಯನ್‌…

1 hour ago

ಬಹುನಿರೀಕ್ಷಿತ ಮಾರ್ಕ್‌ ಹಾಗೂ 45 ಸಿನಿಮಾ ಬಿಡುಗಡೆ

ಸ್ಯಾಂಡಲ್‌ವುಡ್‌ನಲ್ಲಿ ಇಂದು ಕ್ರಿಸ್‌ಮಸ್‌ ಹಬ್ಬದ ಸಡಗರದ ನಡುವೆ ಎರಡು ಬಹುನಿರೀಕ್ಷಿತ ಸಿನಿಮಾಗಳು ಅಬ್ಬರದಿಂದ ತೆರೆಗೆ ಬಂದಿವೆ, ಹ್ಯಾಟ್ರಿಕ್‌ ಹೀರೋ ಶಿವರಾಜ್‌ಕುಮಾರ್‌,…

1 hour ago

ಕಾಡಾನೆಗಳು ಊರಿಗೆ ಬರದಂತೆ ಎಐ ಆಧಾರಿತ ಕ್ಯಾಮರಾ ಅಳವಡಿಕೆ

ಮೈಸೂರು: ಕಾಡಾನೆಗಳು ಊರಿಗೆ ಬರದಂತೆ ಅರಣ್ಯ ಇಲಾಖೆಯು ಎಐ ಆಧಾರಿರ ಕೂಗು ಕ್ಯಾಮರಾವನ್ನು ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅಳವಡಿಸಿದೆ.…

2 hours ago

ಚಿತ್ರದುರ್ಗದಲ್ಲಿ ಬಸ್‌ ಅಪಘಾತ ಪ್ರಕರಣ: ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹಿರಿಯೂರು ಬಳಿ ಸಂಭವಿಸಿದ ಭೀಕರ ಬಸ್‌ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 5 ಲಕ್ಷ ರೂ…

3 hours ago