ಕ್ರೀಡೆ

ಕ್ರಿಕೆಟ್‌ ವೃತ್ತಿ ಬದುಕಿಗೆ ವಿದಾಯ ಹೇಳಿದ ಶಾನ್‌ ಮಾರ್ಷ್‌!

ಆಸ್ಟ್ರೇಲಿಯಾದ ಎಡಗೈ ಆಟಗಾರ ಶಾನ್ ಮಾರ್ಷ್ ಅಂತರಾಷ್ಟ್ರೀಯ ಕ್ರಿಕೆಟ್‌ ಸೇರಿದಂತೆ ಎಲ್ಲಾ ಮಾದರಿ ಕ್ರಿಕೆಟ್​ನಿಂದ ನಿವೃತ್ತಿ ಘೋಷಿಸಿದ್ದಾರೆ.

ತಮ್ಮ 40ನೇ ವಯಸ್ಸಿನಲ್ಲಿ ಎಲ್ಲಾ ಮಾದರಿಯ ಕ್ರಿಕೆಟ್​ನಿಂದ ನಿವೃತ್ತಿ ಪಡೆಯಲು ನಿರ್ಧರಿಸಿದ್ದಾರೆ. ಜನವರಿ 17 ರಂದು ಸಿಡ್ನಿ ಥಂಡರ್ ವಿರುದ್ಧ ನಡೆಯಲಿರುವ ಪಂದ್ಯದ ಬಳಿಕ ಮಾರ್ಷ್ ವೃತ್ತಿ ಜೀವನಕ್ಕೆ ವಿದಾಯ ಹೇಳಲಿದ್ದಾರೆ.

ಆಸ್ಟ್ರೇಲಿಯಾ ತಂಡಕ್ಕೆ 2008 ರಲ್ಲಿ ಕಾಲಿಡುವ ಜೊತೆಗೆ ತಮ್ಮ ಅಂತರಾಷ್ಟ್ರೀಯ ಕ್ರಿಕೆಟ್‌ ಬದುಕನ್ನು ಆರಂಭಿಸಿದ್ದ ಮಾರ್ಷ್,​ 2019 ರಲ್ಲಿ ಕೊನೆಯ ಬಾರಿ ಆಸ್ಟ್ರೇಲಿಯಾ ತಂಡದ ಪರ ಕಣಕ್ಕಿಳಿದಿದ್ದರು.

ನಂತರ ಪ್ರಥಮ ದರ್ಜೆ ಕ್ರಿಕೆಟ್ ಹಾಗೂ ಫ್ರಾಂಚೈಸಿ ಲೀಗ್​ಗಳಲ್ಲಿ ತಮ್ಮ ಆಟ ಮುಂದುವರೆಸಿದ್ದರು. ಇದೀಗ ಬಿಗ್ ಬ್ಯಾಷ್ ಲೀಗ್‌ನಲ್ಲಿ ಅಂತಿಮ ಪಂದ್ಯ ಆಡುವ​ ಮೂಲಕ ಎಲ್ಲಾ ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಲು ನಿರ್ಧರಿಸಿದ್ದಾರೆ.

ಆಸಿಸ್‌ ಪರ 38 ಟೆಸ್ಟ್ ಪಂದ್ಯಗಳಲ್ಲಿ 6 ಶತಕ ಹಾಗೂ 10 ಅರ್ಧಶತಕಗಳೊಂದಿಗೆ ಒಟ್ಟು 2265 ರನ್, 73 ಏಕದಿನ ಪಂದ್ಯಗಳಲ್ಲಿ 7 ಶತಕ ಹಾಗೂ 15 ಅರ್ಧಶತಕಗಳ ಸಹಿತ 2773 ರನ್​ಗಳಿಸಿದ್ದಾರೆ. ಇನ್ನು 15 ಟಿ20 ಪಂದ್ಯಗಳಲ್ಲಿ ಆಸೀಸ್ ಪರ ಬ್ಯಾಟ್ ಬೀಸಿದ್ದ ಮಾರ್ಷ್ ಕೇವಲ 255 ರನ್​ ಕಲೆಹಾಕಿದ್ದಾರೆ.

ಆರೆಂಜ್‌ ಕ್ಯಾಪ್‌ ವಿನ್ನರ್‌: 2008ರಲ್ಲಿ ಉದ್ಘಾಟನೆಗೊಂಡ ಚೊಚ್ಚಲ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಆರೆಂಜ್ ಕ್ಯಾಪ್ ಗೆದ್ದ ದಾಖಲೆ ಶಾನ್ ಮಾರ್ಷ್ ಹೆಸರಿನಲ್ಲಿದೆ.

2008 ರಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ (ಈಗಿನ ಪಂಜಾಬ್ ಕಿಂಗ್ಸ್​) ಪರ 11 ಪಂದ್ಯಗಳನ್ನಾಡಿದ್ದ ಮಾರ್ಷ್ 1 ಶತಕ ಹಾಗೂ 5 ಅರ್ಧಶತಕಗಳೊಂದಿಗೆ ಒಟ್ಟು 616 ರನ್ ಬಾರಿಸಿ, ಮೊಲದ ಸೀಸನ್‌ನಲ್ಲೇ ಆರೆಂಜ್‌ ಕ್ಯಾಪ್‌ ವಿನ್ನರ್‌ ಆಗಿ ಹೊರಹೊಮ್ಮಿದ್ದರು.

ಐಪಿಎಲ್​ನಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ (ಪಂಜಾಬ್ ಕಿಂಗ್ಸ್​) ತಂಡದ ಪರ 9 ಸೀಸನ್​ನಲ್ಲಿ 71 ಪಂದ್ಯಗಳನ್ನಾಡಿದ್ದ ಎಡಗೈ ದಾಂಡಿಗ 1 ಶತಕ ಹಾಗೂ 20 ಅರ್ಧಶತಕಗಳೊಂದಿಗೆ 2477 ರನ್ ಕಲೆಹಾಕಿದ್ದಾರೆ.

2017 ರಲ್ಲಿ ಪಂಜಾಬ್ ಕಿಂಗ್ಸ್ ಫ್ರಾಂಚೈಸಿ ಶಾನ್ ಮಾರ್ಷ್ ಅವರನ್ನು ಪಂಜಾಬ್‌ ಕೈಬಿಟ್ಟಿತು. 2018 ರ ಹರಾಜಿನಲ್ಲಿ 1.5 ಕೋಟಿ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಮಾರ್ಷ್ ಅವರನ್ನು ಖರೀದಿಸಲು ಯಾವುದೇ ಫ್ರಾಂಚೈಸಿ ಮುಂದೆ ಬರಲಿಲ್ಲ. ಈಗ ಎಲ್ಲಾ ಮಾದರಿಯ ಕ್ರಿಕೆಟ್‌ನಿಂದ ಮಾರ್ಷ್‌ ನಿವೃತ್ತಿ ಪಡೆಯುತ್ತಿದ್ದಾರೆ.

andolanait

Recent Posts

ಡಿ.26ರಿಂದ ಕೊಡವ ಹಾಕಿ ಚಾಂಪಿಯನ್ ಟ್ರೋಫಿ

ಪುನೀತ್ ಕೊಡವ ಹಾಕಿ ಅಕಾಡೆಮಿ ಆಶ್ರಯದಲ್ಲಿ ಆಯೋಜನೆ; ವಿಜೇತ ತಂಡಕ್ಕೆ ೨ ಲಕ್ಷ ರೂ. ಬಹುಮಾನ ಮಡಿಕೇರಿ: ಕೊಡವ ಹಾಕಿ…

2 hours ago

ಡಿ.21ರಿಂದ ಅರಮನೆ ಅಂಗಳದಲ್ಲಿ ಫಲಪುಷ್ಪ ಪ್ರದರ್ಶನ

ಪ್ರತಿದಿನ ರಾತ್ರಿ ಅರಮನೆಗೆ ದೀಪಾಲಂಕಾರ ಹೂವಿನಿಂದ ಶೃಂಗೇರಿ ದೇವಸ್ಥಾನದ ಮಾದರಿ ನಿರ್ಮಾಣ ಪುಷ್ಪ ಪ್ರಿಯರ ಕಣ್ಮನ ಸೆಳೆಯಲಿರುವ ವಿವಿಧ ಮಾದರಿಗಳು…

2 hours ago

ಪುಕ್ಕಟೆ ಪಾರ್ಕಿಂಗ್ ಮಾಡಬೇಕೆ? ಇಲ್ಲಿಗೆ ಬನ್ನಿ!

ಎಸ್.ಎಸ್.ಭಟ್ ಹಾಗಂತ ಇಲ್ಲಿ ಫಲಕ ಹಾಕಿಲ್ಲ, ವಾಹನ ನಿಲ್ಲುವುದು ತಪ್ಪುತ್ತಿಲ್ಲ; ಇದು ನಂಜನಗೂಡಿನ ತಾಯಿ-ಮಕ್ಕಳ ಆಸ್ಪತ್ರೆ ಆವರಣದ ಸ್ಥಿತಿ ನಂಜನಗೂಡು:…

2 hours ago

ಮನ್ರೆಗಾ ಓಕೆ… ವಿಬಿ ಜೀ ರಾಮ್ ಜೀ ಯಾಕೆ?

ಮೈಸೂರು: ಕೇಂದ್ರದ ಯುಪಿಎ ಸರ್ಕಾರ ೨೦೦೫ರಲ್ಲಿ ಜಾರಿಗೆ ತಂದ ರಾಷ್ಟ್ರೀಯ ಉದ್ಯೋಗ ಖಾತರಿ ಕಾಯ್ದೆಯಡಿ ಗ್ರಾಮೀಣ ಕುಟುಂಬಗಳಲ್ಲಿ ಜೀವನೋಪಾಯಕ್ಕೆ ಭದ್ರತೆ…

2 hours ago

ಆಕಸ್ಮಿಕ ಬೆಂಕಿ : ಒಕ್ಕಣೆ ಕಣದ ರಾಗಿ ಫಸಲು ನಾಸ

ಹನೂರು : ತಾಲೂಕಿನ ಶೆಟ್ಟಳ್ಳಿ ಗ್ರಾಮದಲ್ಲಿ ಒಕ್ಕಣೆ ಕಣದಲ್ಲಿ ಹಾಕಲಾಗಿದ್ದ ರಾಗಿ ಫಸಲಿಗೆ ಬೆಂಕಿ ಬಿದ್ದು ಸುಮಾರು 30 ಕ್ವಿಂಟಾಲ್…

13 hours ago