ಕ್ರೀಡೆ

ಕ್ರಿಕೆಟ್‌ ವೃತ್ತಿ ಬದುಕಿಗೆ ವಿದಾಯ ಹೇಳಿದ ಶಾನ್‌ ಮಾರ್ಷ್‌!

ಆಸ್ಟ್ರೇಲಿಯಾದ ಎಡಗೈ ಆಟಗಾರ ಶಾನ್ ಮಾರ್ಷ್ ಅಂತರಾಷ್ಟ್ರೀಯ ಕ್ರಿಕೆಟ್‌ ಸೇರಿದಂತೆ ಎಲ್ಲಾ ಮಾದರಿ ಕ್ರಿಕೆಟ್​ನಿಂದ ನಿವೃತ್ತಿ ಘೋಷಿಸಿದ್ದಾರೆ.

ತಮ್ಮ 40ನೇ ವಯಸ್ಸಿನಲ್ಲಿ ಎಲ್ಲಾ ಮಾದರಿಯ ಕ್ರಿಕೆಟ್​ನಿಂದ ನಿವೃತ್ತಿ ಪಡೆಯಲು ನಿರ್ಧರಿಸಿದ್ದಾರೆ. ಜನವರಿ 17 ರಂದು ಸಿಡ್ನಿ ಥಂಡರ್ ವಿರುದ್ಧ ನಡೆಯಲಿರುವ ಪಂದ್ಯದ ಬಳಿಕ ಮಾರ್ಷ್ ವೃತ್ತಿ ಜೀವನಕ್ಕೆ ವಿದಾಯ ಹೇಳಲಿದ್ದಾರೆ.

ಆಸ್ಟ್ರೇಲಿಯಾ ತಂಡಕ್ಕೆ 2008 ರಲ್ಲಿ ಕಾಲಿಡುವ ಜೊತೆಗೆ ತಮ್ಮ ಅಂತರಾಷ್ಟ್ರೀಯ ಕ್ರಿಕೆಟ್‌ ಬದುಕನ್ನು ಆರಂಭಿಸಿದ್ದ ಮಾರ್ಷ್,​ 2019 ರಲ್ಲಿ ಕೊನೆಯ ಬಾರಿ ಆಸ್ಟ್ರೇಲಿಯಾ ತಂಡದ ಪರ ಕಣಕ್ಕಿಳಿದಿದ್ದರು.

ನಂತರ ಪ್ರಥಮ ದರ್ಜೆ ಕ್ರಿಕೆಟ್ ಹಾಗೂ ಫ್ರಾಂಚೈಸಿ ಲೀಗ್​ಗಳಲ್ಲಿ ತಮ್ಮ ಆಟ ಮುಂದುವರೆಸಿದ್ದರು. ಇದೀಗ ಬಿಗ್ ಬ್ಯಾಷ್ ಲೀಗ್‌ನಲ್ಲಿ ಅಂತಿಮ ಪಂದ್ಯ ಆಡುವ​ ಮೂಲಕ ಎಲ್ಲಾ ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಲು ನಿರ್ಧರಿಸಿದ್ದಾರೆ.

ಆಸಿಸ್‌ ಪರ 38 ಟೆಸ್ಟ್ ಪಂದ್ಯಗಳಲ್ಲಿ 6 ಶತಕ ಹಾಗೂ 10 ಅರ್ಧಶತಕಗಳೊಂದಿಗೆ ಒಟ್ಟು 2265 ರನ್, 73 ಏಕದಿನ ಪಂದ್ಯಗಳಲ್ಲಿ 7 ಶತಕ ಹಾಗೂ 15 ಅರ್ಧಶತಕಗಳ ಸಹಿತ 2773 ರನ್​ಗಳಿಸಿದ್ದಾರೆ. ಇನ್ನು 15 ಟಿ20 ಪಂದ್ಯಗಳಲ್ಲಿ ಆಸೀಸ್ ಪರ ಬ್ಯಾಟ್ ಬೀಸಿದ್ದ ಮಾರ್ಷ್ ಕೇವಲ 255 ರನ್​ ಕಲೆಹಾಕಿದ್ದಾರೆ.

ಆರೆಂಜ್‌ ಕ್ಯಾಪ್‌ ವಿನ್ನರ್‌: 2008ರಲ್ಲಿ ಉದ್ಘಾಟನೆಗೊಂಡ ಚೊಚ್ಚಲ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಆರೆಂಜ್ ಕ್ಯಾಪ್ ಗೆದ್ದ ದಾಖಲೆ ಶಾನ್ ಮಾರ್ಷ್ ಹೆಸರಿನಲ್ಲಿದೆ.

2008 ರಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ (ಈಗಿನ ಪಂಜಾಬ್ ಕಿಂಗ್ಸ್​) ಪರ 11 ಪಂದ್ಯಗಳನ್ನಾಡಿದ್ದ ಮಾರ್ಷ್ 1 ಶತಕ ಹಾಗೂ 5 ಅರ್ಧಶತಕಗಳೊಂದಿಗೆ ಒಟ್ಟು 616 ರನ್ ಬಾರಿಸಿ, ಮೊಲದ ಸೀಸನ್‌ನಲ್ಲೇ ಆರೆಂಜ್‌ ಕ್ಯಾಪ್‌ ವಿನ್ನರ್‌ ಆಗಿ ಹೊರಹೊಮ್ಮಿದ್ದರು.

ಐಪಿಎಲ್​ನಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ (ಪಂಜಾಬ್ ಕಿಂಗ್ಸ್​) ತಂಡದ ಪರ 9 ಸೀಸನ್​ನಲ್ಲಿ 71 ಪಂದ್ಯಗಳನ್ನಾಡಿದ್ದ ಎಡಗೈ ದಾಂಡಿಗ 1 ಶತಕ ಹಾಗೂ 20 ಅರ್ಧಶತಕಗಳೊಂದಿಗೆ 2477 ರನ್ ಕಲೆಹಾಕಿದ್ದಾರೆ.

2017 ರಲ್ಲಿ ಪಂಜಾಬ್ ಕಿಂಗ್ಸ್ ಫ್ರಾಂಚೈಸಿ ಶಾನ್ ಮಾರ್ಷ್ ಅವರನ್ನು ಪಂಜಾಬ್‌ ಕೈಬಿಟ್ಟಿತು. 2018 ರ ಹರಾಜಿನಲ್ಲಿ 1.5 ಕೋಟಿ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಮಾರ್ಷ್ ಅವರನ್ನು ಖರೀದಿಸಲು ಯಾವುದೇ ಫ್ರಾಂಚೈಸಿ ಮುಂದೆ ಬರಲಿಲ್ಲ. ಈಗ ಎಲ್ಲಾ ಮಾದರಿಯ ಕ್ರಿಕೆಟ್‌ನಿಂದ ಮಾರ್ಷ್‌ ನಿವೃತ್ತಿ ಪಡೆಯುತ್ತಿದ್ದಾರೆ.

andolanait

Recent Posts

ರಾಜ್ಯ ಬಜೆಟ್; ಕೊಡಗು ಜಿಲ್ಲೆಯಲ್ಲಿವೆ ಹತ್ತಾರು ನಿರೀಕ್ಷೆ

ನವೀನ್ ಡಿಸೋಜ ಮಡಿಕೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಮಾ.೬ರಂದು ರಾಜ್ಯ ಬಜೆಟ್ ಮಂಡನೆ ಮಾಡಲಿದ್ದಾರೆ. ಸಹಜವಾಗಿಯೇ ಕೊಡಗು ಜಿಲ್ಲೆಯಲ್ಲಿಯೂ ಹತ್ತಾರು ನಿರೀಕ್ಷೆಗಳಿದ್ದು,…

3 hours ago

ರಾಜಕೀಯದಿಂದ ದೂರವಾಗಿ ಕೃಷಿಯಲ್ಲಿ ಸಾಧಿಸಿದ ರೈತ

ಮಹೇಂದ್ರ ಹಸಗೂಲಿ ಸೂರ್ಯಕಾಂತಿ, ಬಾಳೆ, ಆಲೂಗಡ್ಡೆ ಅರಿಶಿನ, ಈರುಳ್ಳಿ ಬೆಳೆದು ಸೂರ್ತಿಯಾದ ಎಚ್.ಎಂ.ನಂದೀಶ್ ಗುಂಡ್ಲುಪೇಟೆ: ತಾಲ್ಲೂಕಿನ ಹಂಗಳ ಗ್ರಾಮದ ಎಚ್.…

3 hours ago

ಬಜೆಟ್; ಚಾಮರಾಜನಗರ ಜಿಲ್ಲೆಯ ಜನರಿಗಿದೆ ಬಹಳಷ್ಟು ನಿರೀಕ್ಷೆ

ಪ್ರಸಾದ್ ಲಕ್ಕೂರು ಚಾ.ನಗರ ಜಿಲ್ಲೆಗೆ ವಿಶೇಷ ಪ್ಯಾಕೇಜ್ ಘೋಷಣೆ, ಎಂಸಿಡಿಸಿಸಿ ಬ್ಯಾಂಕ್ ರಚನೆ ಸೇರಿ ಹಲವು ಆಶಾಭಾವನೆ ಚಾಮರಾಜನಗರ: ರಾಜ್ಯ…

3 hours ago

ಕ್ರೀಡಾಂಗಣ ಓಕೆ.. ಕೆಎಸ್‌ಐಸಿ ಜಾಗವೇ ಯಾಕೆ?

ಜಾಗದ ವಿಚಾರವಾಗಿ ಅಭಿಪ್ರಾಯ ಹಂಚಿಕೊಂಡ ಸಾರ್ವಜನಿಕರು, ರೈತರು, ಮುಖಂಡರು ಕೆ.ಎಸ್.ಚಂದ್ರಶೇಖರ್ ಮೂರ್ತಿ ಮೈಸೂರು: ತಿ.ನರಸೀಪುರ ಪಟ್ಟಣದಲ್ಲಿ ಕೆಎಸ್‌ಐಸಿಗೆ ಸೇರಿದ ಜಾಗದಲ್ಲಿ…

3 hours ago

ಖಮೇನಿ ಹತ್ಯೆಯಿಂದ ಮಧ್ಯಪ್ರಾಚ್ಯದಲ್ಲಿ ಅರಾಜಕತೆ?

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಹತರಾಗಿದ್ದಾರೆ. ಶನಿವಾರ ನಡೆದ ದಾಳಿಯಲ್ಲಿ ಎಂಬತ್ತಾರು ವರ್ಷದ…

3 hours ago

ಭಾರತದ ಎದುರಿಗಿರುವ ಮೂರು ಸಂಕಟಗಳು

ಮಾಧ್ಯಮ ತಜ್ಞ ಶೇಷಾದ್ರಿ ಗಂಜೂರು ವಿಶ್ಲೇಷಣೆ ಇತ್ತೀಚೆಗೆ ನ್ಯೂಸ್ ಚಾನಲ್‌ಗಳನ್ನು ನೋಡುತ್ತಿದ್ದರೆ ಮಿಡ್ಲ್ ಈಸ್ಟ್ ಅಂದರೆ ಮಧ್ಯ ಪ್ರಾಚ್ಯದ ಗಲಾಟೆಗಳೇ ಕಾಣ್ತಿವೆ.…

4 hours ago