ಆಸ್ಟ್ರೇಲಿಯಾದ ಎಡಗೈ ಆಟಗಾರ ಶಾನ್ ಮಾರ್ಷ್ ಅಂತರಾಷ್ಟ್ರೀಯ ಕ್ರಿಕೆಟ್ ಸೇರಿದಂತೆ ಎಲ್ಲಾ ಮಾದರಿ ಕ್ರಿಕೆಟ್ನಿಂದ ನಿವೃತ್ತಿ ಘೋಷಿಸಿದ್ದಾರೆ.
ತಮ್ಮ 40ನೇ ವಯಸ್ಸಿನಲ್ಲಿ ಎಲ್ಲಾ ಮಾದರಿಯ ಕ್ರಿಕೆಟ್ನಿಂದ ನಿವೃತ್ತಿ ಪಡೆಯಲು ನಿರ್ಧರಿಸಿದ್ದಾರೆ. ಜನವರಿ 17 ರಂದು ಸಿಡ್ನಿ ಥಂಡರ್ ವಿರುದ್ಧ ನಡೆಯಲಿರುವ ಪಂದ್ಯದ ಬಳಿಕ ಮಾರ್ಷ್ ವೃತ್ತಿ ಜೀವನಕ್ಕೆ ವಿದಾಯ ಹೇಳಲಿದ್ದಾರೆ.
ಆಸ್ಟ್ರೇಲಿಯಾ ತಂಡಕ್ಕೆ 2008 ರಲ್ಲಿ ಕಾಲಿಡುವ ಜೊತೆಗೆ ತಮ್ಮ ಅಂತರಾಷ್ಟ್ರೀಯ ಕ್ರಿಕೆಟ್ ಬದುಕನ್ನು ಆರಂಭಿಸಿದ್ದ ಮಾರ್ಷ್, 2019 ರಲ್ಲಿ ಕೊನೆಯ ಬಾರಿ ಆಸ್ಟ್ರೇಲಿಯಾ ತಂಡದ ಪರ ಕಣಕ್ಕಿಳಿದಿದ್ದರು.
ನಂತರ ಪ್ರಥಮ ದರ್ಜೆ ಕ್ರಿಕೆಟ್ ಹಾಗೂ ಫ್ರಾಂಚೈಸಿ ಲೀಗ್ಗಳಲ್ಲಿ ತಮ್ಮ ಆಟ ಮುಂದುವರೆಸಿದ್ದರು. ಇದೀಗ ಬಿಗ್ ಬ್ಯಾಷ್ ಲೀಗ್ನಲ್ಲಿ ಅಂತಿಮ ಪಂದ್ಯ ಆಡುವ ಮೂಲಕ ಎಲ್ಲಾ ಮಾದರಿಯ ಕ್ರಿಕೆಟ್ಗೆ ವಿದಾಯ ಹೇಳಲು ನಿರ್ಧರಿಸಿದ್ದಾರೆ.
ಆಸಿಸ್ ಪರ 38 ಟೆಸ್ಟ್ ಪಂದ್ಯಗಳಲ್ಲಿ 6 ಶತಕ ಹಾಗೂ 10 ಅರ್ಧಶತಕಗಳೊಂದಿಗೆ ಒಟ್ಟು 2265 ರನ್, 73 ಏಕದಿನ ಪಂದ್ಯಗಳಲ್ಲಿ 7 ಶತಕ ಹಾಗೂ 15 ಅರ್ಧಶತಕಗಳ ಸಹಿತ 2773 ರನ್ಗಳಿಸಿದ್ದಾರೆ. ಇನ್ನು 15 ಟಿ20 ಪಂದ್ಯಗಳಲ್ಲಿ ಆಸೀಸ್ ಪರ ಬ್ಯಾಟ್ ಬೀಸಿದ್ದ ಮಾರ್ಷ್ ಕೇವಲ 255 ರನ್ ಕಲೆಹಾಕಿದ್ದಾರೆ.
ಆರೆಂಜ್ ಕ್ಯಾಪ್ ವಿನ್ನರ್: 2008ರಲ್ಲಿ ಉದ್ಘಾಟನೆಗೊಂಡ ಚೊಚ್ಚಲ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಆರೆಂಜ್ ಕ್ಯಾಪ್ ಗೆದ್ದ ದಾಖಲೆ ಶಾನ್ ಮಾರ್ಷ್ ಹೆಸರಿನಲ್ಲಿದೆ.
2008 ರಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ (ಈಗಿನ ಪಂಜಾಬ್ ಕಿಂಗ್ಸ್) ಪರ 11 ಪಂದ್ಯಗಳನ್ನಾಡಿದ್ದ ಮಾರ್ಷ್ 1 ಶತಕ ಹಾಗೂ 5 ಅರ್ಧಶತಕಗಳೊಂದಿಗೆ ಒಟ್ಟು 616 ರನ್ ಬಾರಿಸಿ, ಮೊಲದ ಸೀಸನ್ನಲ್ಲೇ ಆರೆಂಜ್ ಕ್ಯಾಪ್ ವಿನ್ನರ್ ಆಗಿ ಹೊರಹೊಮ್ಮಿದ್ದರು.
ಐಪಿಎಲ್ನಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ (ಪಂಜಾಬ್ ಕಿಂಗ್ಸ್) ತಂಡದ ಪರ 9 ಸೀಸನ್ನಲ್ಲಿ 71 ಪಂದ್ಯಗಳನ್ನಾಡಿದ್ದ ಎಡಗೈ ದಾಂಡಿಗ 1 ಶತಕ ಹಾಗೂ 20 ಅರ್ಧಶತಕಗಳೊಂದಿಗೆ 2477 ರನ್ ಕಲೆಹಾಕಿದ್ದಾರೆ.
2017 ರಲ್ಲಿ ಪಂಜಾಬ್ ಕಿಂಗ್ಸ್ ಫ್ರಾಂಚೈಸಿ ಶಾನ್ ಮಾರ್ಷ್ ಅವರನ್ನು ಪಂಜಾಬ್ ಕೈಬಿಟ್ಟಿತು. 2018 ರ ಹರಾಜಿನಲ್ಲಿ 1.5 ಕೋಟಿ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಮಾರ್ಷ್ ಅವರನ್ನು ಖರೀದಿಸಲು ಯಾವುದೇ ಫ್ರಾಂಚೈಸಿ ಮುಂದೆ ಬರಲಿಲ್ಲ. ಈಗ ಎಲ್ಲಾ ಮಾದರಿಯ ಕ್ರಿಕೆಟ್ನಿಂದ ಮಾರ್ಷ್ ನಿವೃತ್ತಿ ಪಡೆಯುತ್ತಿದ್ದಾರೆ.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…