ಕ್ರೀಡೆ

ಕ್ರಿಕೆಟ್‌ ವೃತ್ತಿ ಬದುಕಿಗೆ ವಿದಾಯ ಹೇಳಿದ ಶಾನ್‌ ಮಾರ್ಷ್‌!

ಆಸ್ಟ್ರೇಲಿಯಾದ ಎಡಗೈ ಆಟಗಾರ ಶಾನ್ ಮಾರ್ಷ್ ಅಂತರಾಷ್ಟ್ರೀಯ ಕ್ರಿಕೆಟ್‌ ಸೇರಿದಂತೆ ಎಲ್ಲಾ ಮಾದರಿ ಕ್ರಿಕೆಟ್​ನಿಂದ ನಿವೃತ್ತಿ ಘೋಷಿಸಿದ್ದಾರೆ.

ತಮ್ಮ 40ನೇ ವಯಸ್ಸಿನಲ್ಲಿ ಎಲ್ಲಾ ಮಾದರಿಯ ಕ್ರಿಕೆಟ್​ನಿಂದ ನಿವೃತ್ತಿ ಪಡೆಯಲು ನಿರ್ಧರಿಸಿದ್ದಾರೆ. ಜನವರಿ 17 ರಂದು ಸಿಡ್ನಿ ಥಂಡರ್ ವಿರುದ್ಧ ನಡೆಯಲಿರುವ ಪಂದ್ಯದ ಬಳಿಕ ಮಾರ್ಷ್ ವೃತ್ತಿ ಜೀವನಕ್ಕೆ ವಿದಾಯ ಹೇಳಲಿದ್ದಾರೆ.

ಆಸ್ಟ್ರೇಲಿಯಾ ತಂಡಕ್ಕೆ 2008 ರಲ್ಲಿ ಕಾಲಿಡುವ ಜೊತೆಗೆ ತಮ್ಮ ಅಂತರಾಷ್ಟ್ರೀಯ ಕ್ರಿಕೆಟ್‌ ಬದುಕನ್ನು ಆರಂಭಿಸಿದ್ದ ಮಾರ್ಷ್,​ 2019 ರಲ್ಲಿ ಕೊನೆಯ ಬಾರಿ ಆಸ್ಟ್ರೇಲಿಯಾ ತಂಡದ ಪರ ಕಣಕ್ಕಿಳಿದಿದ್ದರು.

ನಂತರ ಪ್ರಥಮ ದರ್ಜೆ ಕ್ರಿಕೆಟ್ ಹಾಗೂ ಫ್ರಾಂಚೈಸಿ ಲೀಗ್​ಗಳಲ್ಲಿ ತಮ್ಮ ಆಟ ಮುಂದುವರೆಸಿದ್ದರು. ಇದೀಗ ಬಿಗ್ ಬ್ಯಾಷ್ ಲೀಗ್‌ನಲ್ಲಿ ಅಂತಿಮ ಪಂದ್ಯ ಆಡುವ​ ಮೂಲಕ ಎಲ್ಲಾ ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಲು ನಿರ್ಧರಿಸಿದ್ದಾರೆ.

ಆಸಿಸ್‌ ಪರ 38 ಟೆಸ್ಟ್ ಪಂದ್ಯಗಳಲ್ಲಿ 6 ಶತಕ ಹಾಗೂ 10 ಅರ್ಧಶತಕಗಳೊಂದಿಗೆ ಒಟ್ಟು 2265 ರನ್, 73 ಏಕದಿನ ಪಂದ್ಯಗಳಲ್ಲಿ 7 ಶತಕ ಹಾಗೂ 15 ಅರ್ಧಶತಕಗಳ ಸಹಿತ 2773 ರನ್​ಗಳಿಸಿದ್ದಾರೆ. ಇನ್ನು 15 ಟಿ20 ಪಂದ್ಯಗಳಲ್ಲಿ ಆಸೀಸ್ ಪರ ಬ್ಯಾಟ್ ಬೀಸಿದ್ದ ಮಾರ್ಷ್ ಕೇವಲ 255 ರನ್​ ಕಲೆಹಾಕಿದ್ದಾರೆ.

ಆರೆಂಜ್‌ ಕ್ಯಾಪ್‌ ವಿನ್ನರ್‌: 2008ರಲ್ಲಿ ಉದ್ಘಾಟನೆಗೊಂಡ ಚೊಚ್ಚಲ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಆರೆಂಜ್ ಕ್ಯಾಪ್ ಗೆದ್ದ ದಾಖಲೆ ಶಾನ್ ಮಾರ್ಷ್ ಹೆಸರಿನಲ್ಲಿದೆ.

2008 ರಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ (ಈಗಿನ ಪಂಜಾಬ್ ಕಿಂಗ್ಸ್​) ಪರ 11 ಪಂದ್ಯಗಳನ್ನಾಡಿದ್ದ ಮಾರ್ಷ್ 1 ಶತಕ ಹಾಗೂ 5 ಅರ್ಧಶತಕಗಳೊಂದಿಗೆ ಒಟ್ಟು 616 ರನ್ ಬಾರಿಸಿ, ಮೊಲದ ಸೀಸನ್‌ನಲ್ಲೇ ಆರೆಂಜ್‌ ಕ್ಯಾಪ್‌ ವಿನ್ನರ್‌ ಆಗಿ ಹೊರಹೊಮ್ಮಿದ್ದರು.

ಐಪಿಎಲ್​ನಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ (ಪಂಜಾಬ್ ಕಿಂಗ್ಸ್​) ತಂಡದ ಪರ 9 ಸೀಸನ್​ನಲ್ಲಿ 71 ಪಂದ್ಯಗಳನ್ನಾಡಿದ್ದ ಎಡಗೈ ದಾಂಡಿಗ 1 ಶತಕ ಹಾಗೂ 20 ಅರ್ಧಶತಕಗಳೊಂದಿಗೆ 2477 ರನ್ ಕಲೆಹಾಕಿದ್ದಾರೆ.

2017 ರಲ್ಲಿ ಪಂಜಾಬ್ ಕಿಂಗ್ಸ್ ಫ್ರಾಂಚೈಸಿ ಶಾನ್ ಮಾರ್ಷ್ ಅವರನ್ನು ಪಂಜಾಬ್‌ ಕೈಬಿಟ್ಟಿತು. 2018 ರ ಹರಾಜಿನಲ್ಲಿ 1.5 ಕೋಟಿ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಮಾರ್ಷ್ ಅವರನ್ನು ಖರೀದಿಸಲು ಯಾವುದೇ ಫ್ರಾಂಚೈಸಿ ಮುಂದೆ ಬರಲಿಲ್ಲ. ಈಗ ಎಲ್ಲಾ ಮಾದರಿಯ ಕ್ರಿಕೆಟ್‌ನಿಂದ ಮಾರ್ಷ್‌ ನಿವೃತ್ತಿ ಪಡೆಯುತ್ತಿದ್ದಾರೆ.

andolanait

Recent Posts

ಎಸ್‌ಸಿ, ಎಸ್‌ಟಿಗಳ ಹಕ್ಕು ರಕ್ಷಣೆಗೆ ಕ್ರಮ : ಡಾ.ಮೂರ್ತಿ

ಮೈಸೂರು : ಆದಿವಾಸಿ ಸಮುದಾಯಗಳ ಮೇಲಿನ ದೌರ್ಜನ್ಯ, ಸಾಮಾಜಿಕ ಬಹಿಷ್ಕಾರ ಹಾಗೂ ಮೈಸೂರು ಭಾಗದಲ್ಲಿ ದಾಖಲಾಗಿರುವ 134 ಪೋಕ್ಸೊ ಪ್ರಕರಣಗಳು…

10 hours ago

ಬೆಂಕಿ ಅವಘಡ | ಅಬಕಾರಿ ಡಿಸಿ ಅಮಾನತಿಗೆ ಶಿಫಾರಸ್ಸು ಮಾಡಲು ಸೂಚನೆ ಕೊಟ್ಟ ಯತೀಂದ್ರ ಸಿದ್ದರಾಮಯ್ಯ!

ಮೈಸೂರು : ಸೋಮವಾರ ಪಬ್‌ನಲ್ಲಿ ಸಂಭವಿಸಿದ್ದ ಬೆಂಕಿ ಅವಘಡದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ತವ್ಯ ಲೋಪದ ಕಾರಣಕ್ಕಾಗಿ ಅಬಕಾರಿ…

11 hours ago

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ತಮಿಳುನಾಡು ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ರೈತರಿಗೆ ಸಿಎಂ ವಿಜಯ್‌ ಬಂಪರ್‌ ಕೊಡುಗೆ ನೀಡಿದ್ದಾರೆ. ವಿವಿಧ ಸಹಕಾರಿ ಬ್ಯಾಂಕುಗಳಲ್ಲಿ ರೈತರು ಪಡೆದಿರುವ 75,000 ರೂ…

15 hours ago

ಮುಂಗಾರು ಕೊರತೆ: ಹಾರಂಗಿ ಜಲಾಶಯದ ಒಳಹರಿವು ತೀವ್ರ ಕುಸಿತ

ಮಡಿಕೇರಿ: ಮುಂಗಾರು ಮಳೆ ಕೊರತೆಯಿಂದ ಹಾರಂಗಿ ಜಲಾಶಯಕ್ಕೆ ಒಳಹರಿವು ತೀವ್ರವಾಗಿ ಕುಸಿದಿದ್ದು, ರೈತರಲ್ಲಿ ಆತಂಕ ಹೆಚ್ಚಾಗಿದೆ. ಮಳೆಗಾಲವಾದರೂ ಜಿಲ್ಲೆಯಲ್ಲಿ ಮಳೆ…

17 hours ago

ಮೆಡಿಕಲ್‌ನಲ್ಲಿ ಇನ್ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್‌ ಖರೀದಿ ಮಾಡುವಂತಿಲ್ಲ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಮೆಡಿಕಲ್‌ ಶಾಪ್‌ಗಳಲ್ಲಿ ಇನ್ಮು ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್‌ ಖರೀದಿ ಮಾಡುವಂತಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಆದೇಶ…

17 hours ago

ನಟ ವಿಜಯ್‌ ರಾಘವೇಂದ್ರ, ಶ್ರೀಮುರಳಿಗೆ ಮಾತೃ ವಿಯೋಗ

ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಸಿದ್ಧ ನಿರ್ಮಾಪಕರಾದ ಎಸ್.ಎ.ಚಿನ್ನೇಗೌಡ ಅವರ ಪತ್ನಿ ಹಾಗೂ ನಟರಾದ ವಿಜಯ್‌ ರಾಘವೇಂದ್ರ, ಶ್ರೀಮುರಳಿ ಅವರ ತಾಯಿ…

18 hours ago