ಕ್ರೀಡೆ

ಕ್ರಿಕೆಟ್‌ ವೃತ್ತಿ ಬದುಕಿಗೆ ವಿದಾಯ ಹೇಳಿದ ಶಾನ್‌ ಮಾರ್ಷ್‌!

ಆಸ್ಟ್ರೇಲಿಯಾದ ಎಡಗೈ ಆಟಗಾರ ಶಾನ್ ಮಾರ್ಷ್ ಅಂತರಾಷ್ಟ್ರೀಯ ಕ್ರಿಕೆಟ್‌ ಸೇರಿದಂತೆ ಎಲ್ಲಾ ಮಾದರಿ ಕ್ರಿಕೆಟ್​ನಿಂದ ನಿವೃತ್ತಿ ಘೋಷಿಸಿದ್ದಾರೆ.

ತಮ್ಮ 40ನೇ ವಯಸ್ಸಿನಲ್ಲಿ ಎಲ್ಲಾ ಮಾದರಿಯ ಕ್ರಿಕೆಟ್​ನಿಂದ ನಿವೃತ್ತಿ ಪಡೆಯಲು ನಿರ್ಧರಿಸಿದ್ದಾರೆ. ಜನವರಿ 17 ರಂದು ಸಿಡ್ನಿ ಥಂಡರ್ ವಿರುದ್ಧ ನಡೆಯಲಿರುವ ಪಂದ್ಯದ ಬಳಿಕ ಮಾರ್ಷ್ ವೃತ್ತಿ ಜೀವನಕ್ಕೆ ವಿದಾಯ ಹೇಳಲಿದ್ದಾರೆ.

ಆಸ್ಟ್ರೇಲಿಯಾ ತಂಡಕ್ಕೆ 2008 ರಲ್ಲಿ ಕಾಲಿಡುವ ಜೊತೆಗೆ ತಮ್ಮ ಅಂತರಾಷ್ಟ್ರೀಯ ಕ್ರಿಕೆಟ್‌ ಬದುಕನ್ನು ಆರಂಭಿಸಿದ್ದ ಮಾರ್ಷ್,​ 2019 ರಲ್ಲಿ ಕೊನೆಯ ಬಾರಿ ಆಸ್ಟ್ರೇಲಿಯಾ ತಂಡದ ಪರ ಕಣಕ್ಕಿಳಿದಿದ್ದರು.

ನಂತರ ಪ್ರಥಮ ದರ್ಜೆ ಕ್ರಿಕೆಟ್ ಹಾಗೂ ಫ್ರಾಂಚೈಸಿ ಲೀಗ್​ಗಳಲ್ಲಿ ತಮ್ಮ ಆಟ ಮುಂದುವರೆಸಿದ್ದರು. ಇದೀಗ ಬಿಗ್ ಬ್ಯಾಷ್ ಲೀಗ್‌ನಲ್ಲಿ ಅಂತಿಮ ಪಂದ್ಯ ಆಡುವ​ ಮೂಲಕ ಎಲ್ಲಾ ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಲು ನಿರ್ಧರಿಸಿದ್ದಾರೆ.

ಆಸಿಸ್‌ ಪರ 38 ಟೆಸ್ಟ್ ಪಂದ್ಯಗಳಲ್ಲಿ 6 ಶತಕ ಹಾಗೂ 10 ಅರ್ಧಶತಕಗಳೊಂದಿಗೆ ಒಟ್ಟು 2265 ರನ್, 73 ಏಕದಿನ ಪಂದ್ಯಗಳಲ್ಲಿ 7 ಶತಕ ಹಾಗೂ 15 ಅರ್ಧಶತಕಗಳ ಸಹಿತ 2773 ರನ್​ಗಳಿಸಿದ್ದಾರೆ. ಇನ್ನು 15 ಟಿ20 ಪಂದ್ಯಗಳಲ್ಲಿ ಆಸೀಸ್ ಪರ ಬ್ಯಾಟ್ ಬೀಸಿದ್ದ ಮಾರ್ಷ್ ಕೇವಲ 255 ರನ್​ ಕಲೆಹಾಕಿದ್ದಾರೆ.

ಆರೆಂಜ್‌ ಕ್ಯಾಪ್‌ ವಿನ್ನರ್‌: 2008ರಲ್ಲಿ ಉದ್ಘಾಟನೆಗೊಂಡ ಚೊಚ್ಚಲ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಆರೆಂಜ್ ಕ್ಯಾಪ್ ಗೆದ್ದ ದಾಖಲೆ ಶಾನ್ ಮಾರ್ಷ್ ಹೆಸರಿನಲ್ಲಿದೆ.

2008 ರಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ (ಈಗಿನ ಪಂಜಾಬ್ ಕಿಂಗ್ಸ್​) ಪರ 11 ಪಂದ್ಯಗಳನ್ನಾಡಿದ್ದ ಮಾರ್ಷ್ 1 ಶತಕ ಹಾಗೂ 5 ಅರ್ಧಶತಕಗಳೊಂದಿಗೆ ಒಟ್ಟು 616 ರನ್ ಬಾರಿಸಿ, ಮೊಲದ ಸೀಸನ್‌ನಲ್ಲೇ ಆರೆಂಜ್‌ ಕ್ಯಾಪ್‌ ವಿನ್ನರ್‌ ಆಗಿ ಹೊರಹೊಮ್ಮಿದ್ದರು.

ಐಪಿಎಲ್​ನಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ (ಪಂಜಾಬ್ ಕಿಂಗ್ಸ್​) ತಂಡದ ಪರ 9 ಸೀಸನ್​ನಲ್ಲಿ 71 ಪಂದ್ಯಗಳನ್ನಾಡಿದ್ದ ಎಡಗೈ ದಾಂಡಿಗ 1 ಶತಕ ಹಾಗೂ 20 ಅರ್ಧಶತಕಗಳೊಂದಿಗೆ 2477 ರನ್ ಕಲೆಹಾಕಿದ್ದಾರೆ.

2017 ರಲ್ಲಿ ಪಂಜಾಬ್ ಕಿಂಗ್ಸ್ ಫ್ರಾಂಚೈಸಿ ಶಾನ್ ಮಾರ್ಷ್ ಅವರನ್ನು ಪಂಜಾಬ್‌ ಕೈಬಿಟ್ಟಿತು. 2018 ರ ಹರಾಜಿನಲ್ಲಿ 1.5 ಕೋಟಿ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಮಾರ್ಷ್ ಅವರನ್ನು ಖರೀದಿಸಲು ಯಾವುದೇ ಫ್ರಾಂಚೈಸಿ ಮುಂದೆ ಬರಲಿಲ್ಲ. ಈಗ ಎಲ್ಲಾ ಮಾದರಿಯ ಕ್ರಿಕೆಟ್‌ನಿಂದ ಮಾರ್ಷ್‌ ನಿವೃತ್ತಿ ಪಡೆಯುತ್ತಿದ್ದಾರೆ.

andolanait

Recent Posts

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

6 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

6 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

6 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

6 hours ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

6 hours ago

ಕೊಡಗಿನಲ್ಲಿ1,20,874 ಮಕ್ಕಳಿಗೆ ಮಾತ್ರೆ ವಿತರಣೆ ಗುರಿ

ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…

6 hours ago