ಕ್ರೀಡೆ

ಜಯದೊಂದಿಗೆ ನಿರ್ಗಮಿಸಿದ ಶಿವಮೊಗ್ಗ ಸ್ಟ್ರೈಕರ್ಸ್‌

ಬೆಂಗಳೂರು: ಮಳೆಯಿಂದ ಅಡ್ಡಿಯಾದ ಕೊನೆಯ ಲೀಗ್‌ ಪಂದ್ಯದಲ್ಲಿ ಗುಲ್ಬರ್ಗ ಮಿಸ್ಟಿಕ್ಸ್‌ ವಿರುದ್ಧದ ಪಂದ್ಯದಲ್ಲಿ 6 ವಿಕೆಟ್‌ ಅಂತರದಲ್ಲಿ ಜಯ ಗಳಿಸಿದ ಶಿವಮೊಗ್ಗ ಸ್ಟ್ರೈಕರ್ಸ್‌ ತಂಡ ಮಹಾರಾಜ ಟ್ರೋಫಿಯಲ್ಲಿ ಜಯದೊಂದಿಗೆ ನಿರ್ಗಮಿಸಿದೆ.
ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಮನೀಶ್‌ ಪಾಂಡೆ ನಾಯಕತ್ವದ ಗುಲ್ಬರ್ಗ ಮಿಸ್ಟಿಕ್ಸ್‌ 9 ವಿಕೆಟ್‌ ನಷ್ಟಕ್ಕೆ 118 ರನ್‌ ಗಳಿಸಿತ್ತು. ಅಲ್ಪ ಮೊತ್ತವನ್ನು ಬೆಂಬತ್ತಿದ ಶಿವಮೊಗ್ಗ ತಂಡ ಲಗುಬಗನೆ ವಿಕೆಟ್‌ ಕಳೆದುಕೊಂಡಿತ್ತು. 15 ರನ್‌ ಗಳಿಸುವಷ್ಟರಲ್ಲಿಯೇ 2 ವಿಕೆಟ್‌ ಕಳೆದುಕೊಂಡಿತ್ತು, ಆಗ ಪಂದ್ಯಕ್ಕೆ ಮಳೆ ಅಡ್ಡಿಯಾಯಿತು. ನಂತರ ಶಿವಮೊಗ್ಗಕ್ಕೆ 54 ರನ್‌ ಗುರಿ ನೀಡಲಾಯಿತು. ಶಿವಮೊಗ್ಗ 6.3 ಓವರ್‌ಗಳಲ್ಲಿ 4 ವಿಕೆಟ್‌ ಕಳೆದುಕೊಂಡು 54 ರನ್‌ ಗುರಿ ತಲುಪಿತು. ಗುಲ್ಬರ್ಗ ಮಿಸ್ಟಿಕ್ಸ್‌ ಈಗಾಗಲೇ ಪ್ಲೇ ಆಫ್‌ ತಲುಪಿದ್ದರಿಂದ ಈ ಸೋಲು ತಂಡದ ಮೇಲೆ ಯಾವುದೇ ಪರಿಣಾಮ ಬೀರಲಿಲ್ಲ.

ಶಿವಮೊಗ್ಗಕ್ಕೆ ಸಾಧಾರಣ ಗುರಿ ನೀಡಿದ ಗುಲ್ಬರ್ಗ:
ಒಂದು ತಂಡ ಈಗಾಗಲೇ ಪ್ಲೇ ಆಫ್‌ ಹಂತ ತಲುಪಿದೆ. ಇನ್ನೊಂದು ತಂಡ ಗೆದ್ದರೂ ಪ್ರಯೋಜವಿಲ್ಲವೆಂಬ ಸ್ಥಿತಿಯಲ್ಲಿದೆ. ಆದ್ದರಿಂದ ಗುಲ್ಬರ್ಗ ಮಿಸ್ಟಿಕ್ಸ್‌ ಹಾಗೂ ಶಿವಮೊಗ್ಗ ಸ್ಟ್ರೈಕರ್ಸ್‌ ನಡುವಿನ ಪಂದ್ಯದ ಫಲಿತಾಂಶದ ಬಗ್ಗೆ ವೀಕ್ಷಕರಿಗೆ ಕುತೂಹಲ ಇಲ್ಲದಿಂದದ್ದರೂ ಆಟದ ಬಗ್ಗೆ ಕುತೂಹಲ ಇದ್ದೇ ಇರುತ್ತದೆ.
ಟಾಸ್‌ ಗೆದ್ದು ಫೀಲ್ಡಿಂಗ್‌ ಆಯ್ದುಕೊಂಡ ಕೆ. ಗೌತಮ್‌ ನಾಯಕತ್ವದ ಶಿವಮೊಗ್ಗ ಸ್ಟ್ರೈಕರ್ಸ್‌ನ ಬೌಲರ್‌ಗಳು ಇದುವರೆಗೂ ನೀಡಿರದ ಉತ್ತಮ ಪ್ರದರ್ಶನ ನೀಡಿದರು. ಪ್ರತಿಯೊಂದು ಪಂದ್ಯದಲ್ಲೂ ಮಿಂಚಿದ್ದ ಗುಲ್ಬರ್ಗದ ಬ್ಯಾಟ್ಸ್‌ಮನ್‌ಗಳು ಶಿವಮೊಗ್ಗದ ಬೌಲಿಂಗ್‌ ದಾಳಿಯನ್ನು ಸಮರ್ಥವಾಗಿ ಎದುರಿಸುವಲ್ಲಿ ವಿಫಲರಾದರು. ಜಸ್ವತ್‌ ಆಚಾರ್ಯ (22) ಮತ್ತು ರಿತೇಶ್‌ ಭಟ್ಕಳ್‌ (38) ಗುಲ್ಬರ್ಗ ಸ್ಟ್ರೈಕರ್ಸ್‌ ಪರ ದಾಖಲಾದ ಗರಿಷ್ಠ ರನ್‌. 17 ಓವರ್‌ಗೆ 83 ರನ್‌ ಗಳಿಸಿ 8 ವಿಕೆಟ್‌ ಕಳೆದುಕೊಂಡಿದ್ದ ಗುಲ್ಬರ್ಗಕ್ಕೆ ಚೇತರಿಸುವಂತೆ ಬ್ಯಾಟಿಂಗ್‌ ಮಾಡಿದ್ದು ರಿತೇಶ್‌ ಭಟ್ಕಳ್‌. 24 ಎಸೆತಗಳನ್ನೆದುರಿಸಿದ ರಿತೇಶ್‌ 3 ಸಿಕ್ಸರ್‌ ಹಾಗೂ 1 ಬೌಂಡರಿ ನೆರವಿನಿಂದ 38 ರನ್‌ ಸಿಡಿಸಿ ಸಾಧಾರಣ ಮೊತ್ತದಲ್ಲಿ ಗರಿಷ್ಠ ರನ್‌ ಗಳಿಸಿದ ಬ್ಯಾಟ್ಸ್‌ಮನ್‌ ಎನಿಸಿದರು. ಅಂತಿಮವಾಗಿ ಗುಲ್ಬರ್ಗ ಮಿಸ್ಟಿಕ್ಸ್‌ 20 ಓವರ್‌ಗಳಲ್ಲಿ 9 ವಿಕೆಟ್‌ಗೆ 118 ರನ್‌ ಗಳಿಸಿತು.
ನಾಯಕ ಕೃಷ್ಣಪ್ಪ ಗೌತಮ್‌ 4 ಓವರ್‌ಗಳಲ್ಲಿ ಕೇವಲ 17 ರನ್‌ ನೀಡಿ 1 ವಿಕೆಟ್‌ ಗಳಿಸಿದರು, ಉತ್ತಮ್‌ ಅಯ್ಯಪ್ಪ ಹಾಗೂ ಕೆ.ಸಿ, ಕಾರಿಯಪ್ಪ ತಲಾ 2 ವಿಕೆಟ್‌ ಗಳಿಸಿದರೆ. ಡಿ. ಅವಿನಾಶ್‌ 24 ರನ್‌ಗೆ 3 ವಿಕೆಟ್‌ ಗಳಿಸಿ ಯಶಸ್ವಿ ಬೌಲರ್‌ ಎನಿಸಿದರು.

ಸಂಕ್ಷಿಪ್ತ ಸ್ಕೋರ್‌ :
ಗುಲ್ಬರ್ಗ ಮಿಸ್ಟಿಕ್ಸ್‌: 20 ಓವರ್‌ಗಳಲ್ಲಿ 9 ವಿಕೆಟ್‌ಗೆ 118 (ಜಸ್ವತ್‌ ಆಚಾರ್ಯ 22, ರಿತೇಶ್‌ ಭಟ್ಕಳ್‌ 38, ಅವಿನಾಶ್‌ 24ಕ್ಕೆ 3, ಉತ್ತಮ್‌ ಅಯ್ಯಪ್ಪ 23ಕ್ಕೆ 2, ಕೆ.ಸಿ. ಕಾರಿಯಪ್ಪ 22ಕ್ಕೆ 2)ಶಿವಮೊಗ್ಗ ಸ್ಟ್ರೈಕರ್ಸ್‌: 6.3 ಓವರ್‌ಗಳಲ್ಲಿ 4 ವಿಕೆಟ್‌ಗೆ 54 (ಕೆ. ಸಿದ್ಧಾರ್ಥ್‌ 18, ಡಿ, ಅವಿನಾಶ್‌ 11* ವಿದ್ವತ್‌ ಕಾವೇರಪ್ಪ 22ಕ್ಕೆ 1)

andolanait

Recent Posts

ವಿಧಾನಸೌಧಕ್ಕೆ ಮತ್ತೆ ಬರೋದು ಭಗವಂತನ ಇಚ್ಛೆ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಮರಳಿ ವಿಧಾನಸೌಧ ಪ್ರವೇಶ ಮಾಡುವ ಬಗ್ಗೆ ಜನರ ಆಶೀರ್ವಾದ ಮತ್ತು ಭಗವಂತನ ಇಚ್ಛೆ ನಿರ್ಧರಿಸುತ್ತದೆ ಎಂದು ಕೇಂದ್ರದ ಬೃಹತ್…

2 hours ago

ಜುಲೈ.3ರಿಂದ ವಾರ್ಷಿಕ ಅಮರನಾಥ ಯಾತ್ರೆ ಆರಂಭ

ಶ್ರೀನಗರ: ಹಿಂದೂಗಳ ಪವಿತ್ರ ಯಾತ್ರಾ ಸ್ಥಳವಾದ ಅಮರನಾಥ ಗುಹೆಗೆ ವಾರ್ಷಿಕ ತೀರ್ಥಯಾತ್ರೆ ಈ ವರ್ಷ ಜುಲೈ 3ರಂದು ಆರಂಭವಾಗಲಿದೆ. ಕೇಂದ್ರಾಡಳಿತ…

3 hours ago

ಪ್ರಧಾನಿ ಮೋದಿಗೆಂದೇ ಮೈಸೂರು ಮಹಾರಾಜರು ಧರಿಸುತ್ತಿದ್ದ ಮಾದರಿಯ ಪೇಟ ತಯಾರು

ಮೈಸೂರು: ಇದೇ ಏಪ್ರಿಲ್.15ರಂದು ನಾಗಮಂಗಲದ ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಠಕ್ಕೆ ಪ್ರಧಾನಿ ಮೋದಿ ಭೇಟಿ ನೀಡಲಿದ್ದಾರೆ. ಅಂದು ಪ್ರಧಾನಿ ನರೇಂದ್ರ…

3 hours ago

ಬಸವ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಸ್‌ಗೆ ಬಿಗ್‌ ಟ್ವಿಸ್ಟ್‌

ಬೆಂಗಳೂರು: ಬಾಗಲಕೋಟೆ ಜಿಲ್ಲೆ ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ದೌರ್ಜನ್ಯ ಮತ್ತು ಬ್ಲಾಕ್‌ಮೇಲ್‌ ಆರೋಪ…

3 hours ago

ಹೈಕಮಾಂಡ್‌ ಹೇಳಿದರೆ ಸಚಿವ ಸ್ಥಾನ ಬಿಡಲು ಸಿದ್ಧ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಹೈಕಮಾಂಡ್‌ ಹೇಳಿದರೆ ನಾನು ಸಚಿವ ಸ್ಥಾನ ಬಿಡಲು ಸಿದ್ಧನಿದ್ದೇನೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಹಿರಿಯ ಶಾಸಕರು…

4 hours ago

ರಾಜ್ಯದಲ್ಲಿ ಮುಂದಿನ 5 ದಿನ ತಾಪಮಾನ ಭಾರೀ ಏರಿಕೆ: ಹವಾಮಾನ ಇಲಾಖೆ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯ ಬಿಸಿಲ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮುಂದಿನ ಐದು ದಿನಗಳ ಕಾಲ ತಾಪಮಾನ ಗಣನೀಯವಾಗಿ ಏರಿಕೆಯಾಗಲಿದೆ…

5 hours ago