ಕ್ರೀಡೆ

ಏಷ್ಯನ್ ಗೇಮ್ಸ್ ನಲ್ಲಿ ಭಾರತಕ್ಕೆ ಮೊದಲ ಸ್ವರ್ಣ ತಂದುಕೊಟ್ಟ ಶೂಟರ್ಸ್‌

ಹಾಂಗ್‌ಝೌ: ಚೀನಾದ ಹಾಂಗ್‌ಝೌನಲ್ಲಿ ನಡೆಯುತ್ತಿರುವ 19ನೇ ಏಷ್ಯಾನ್ ಗೇಮ್ಸ್ ನ ದ್ವಿತೀಯ ದಿನವೇ ಅತ್ಯಮೋಘ ಪ್ರದರ್ಶನ ತೋರಿಸಿದ ಭಾರತದ ಪುರುಷ ಶೂಟರ್ ಗಳು ವಿಶ್ವ ದಾಖಲೆ ನಿರ್ಮಿಸುವುದರೊಂದಿಗೆ ದೇಶಕ್ಕೆ ಮೊದಲ ಚಿನ್ನದ ಪದಕ ಗೆದ್ದು ಕೊಟ್ಟಿದ್ದಾರೆ.

ಪುರುಷರ 10 ಮೀಟರ್ ಏರ್ ರೈಫಲ್ ವಿಭಾಗದ ಫೈನಲ್ ಪಂದ್ಯದಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದ ಐಶ್ವರಿ ಪ್ರತಾಪ್ ಸಿಂಗ್ ತೋಮರ್, ದಿವ್ಯಾಂಶ್ ಸಿಂಗ್ ಪನ್ವಾರ್ ಹಾಗೂ ರುದ್ರಂಕ್ಷ್ ಪಾಟೀಲ್ ಅವರು ವಿಶ್ವದಾಖಲೆ ನಿರ್ಮಿಸಿದ್ದಲ್ಲದೆ ಚಿನ್ನದ ಪದಕಕ್ಕೆ ಮುತ್ತಿಕ್ಕಿದ್ದಾರೆ.

ಭಾರತದ ತ್ರಿವಳಿ ಶೂಟರ್ ಗಳು ತಮ್ಮ ಉತ್ತಮವಾದ ಗುರಿಯಿಂದ 1893.7 ಪಾಯಿಂಟ್ಸ್ ಕಲೆ ಹಾಕುವ ಮೂಲಕ ಬಾಕುವಿನಲ್ಲಿ ಚೀನಾದ ಶೂಟರ್ ಗಳು 2022 ನೇ ಸಾಲಿನ ವಿಶ್ವ ಚಾಂಪಿಯನ್ ಶಿಪ್ ನಲ್ಲಿ ನಿರ್ಮಿಸಿದ್ದ ದಾಖಲೆಯನ್ನು ಮುರಿದು ವಿಶ್ವದಾಖಲೆ ನಿರ್ಮಿಸಿದೆ.

1893.7 ಪಾಯಿಂಟ್ಸ್ ಸಂಗ್ರಹ
ಫೈನಲ್ ಪಂದ್ಯದ ಮೊದಲ ಸುತ್ತಿನಲ್ಲಿ ಭಾರತದ ದಿವ್ಯಾಂಶ್ ಸಿಂಗ್ ಪನ್ವಾರ್ ಹಾಗೂ ರುದ್ರಂಕ್ಷ್ ಪಾಟೀಲ್ ತಲಾ 104.8 ಅಂಕಗಳನ್ನು ಕಲೆ ಹಾಕಿದರೆ, ಐಶ್ವರಿ ಪ್ರತಾಪ್ ಸಿಂಗ್ ತೋಮರ್ 104.1 ಅಂಕ ಸಂಗ್ರಹಿಸಿದ್ದರು‌. ನಂತರದ ಸುತ್ತುಗಳಲ್ಲಿ ತಮ್ಮ ಗುರಿಯ ಮಟ್ಟವನ್ನು ಹೆಚ್ಚಿಸಿಕೊಂಡ ಭಾರತದ ತ್ರಿವಳಿ ಶೂಟರ್ ಗಳು 6ನೇ ಸೀರಿಸ್ ವೇಳೆಗೆ‌ 1893.7 ಪಾಯಿಂಟ್ಸ್ ಸಂಗ್ರಹಿಸಿ ವಿಶ್ವದಾಖಲೆ ನಿರ್ಮಿಸಿತು.

ಭಾರತಕ್ಕೆ ಮೊದಲ ಚಿನ್ನದ ಪದಕ
ಪುರುಷರ 10 ಮೀಟರ್ ಏರ್ ರೈಫಲ್ ಫೈನಲ್ ಸ್ಪರ್ಧೆಯಲ್ಲಿ ಟಾಪ್ 1 ಸ್ಥಾನ ಪಡೆದ ಭಾರತದ ತ್ರಿವಳಿ ಶೂಟರ್ ಗಳು 2023ನೇ ಸಾಲಿನ ಏಷ್ಯನ್ ಗೇಮ್ಸ್ ನಲ್ಲಿ ದೇಶಕ್ಕೆ ಮೊದಲ ಚಿನ್ನದ ಪದಕ ಗೆದ್ದು ಕೊಟ್ಟರು. ದಕ್ಷಿಣ ಕೊರಿಯಾ (1890.1 ಅಂಕ) ಬೆಳ್ಳಿ ಪದಕ ಗೆದ್ದರೆ,ಚೀನಾ (1888.2 ಅಂಕ) ಕಂಚಿನ ಪದಕ ಗೆದ್ದು ಸಂಭ್ರಮಿಸಿತು. ಭಾರತದ ಪದಕ ಸಾಧನೆ: ಕ್ರೀಡಾಕೂಟದ ಮೊದಲ ದಿನ ಭಾರತ 3 ಬೆಳ್ಳಿ ಹಾಗೂ 2 ಕಂಚಿನ ಪದಕ ಗೆದ್ದು ಸಂಭ್ರಮಿಸಿತ್ತು.

andolanait

Recent Posts

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

28 mins ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

34 mins ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

43 mins ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

1 hour ago

ಮುಡಾ ಮೇಲೆ ಇ.ಡಿ.ದಾಳಿ: ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ: ಡಿಸಿಎಂ ʼಡಿಕೆಶಿʼ

ಬೆಂಗಳೂರು: ಮುಡಾ ಕಚೇರಿ ಮೇಲೆ ಇ.ಡಿ. ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲಿಸಿದ್ದಾರೆ. ಕಚೇರಿಯಲ್ಲಿಯೇ ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ…

2 hours ago

ಮುಡಾ ಕಚೇರಿ ಮೇಲೆ ಇ.ಡಿ.ದಾಳಿ: ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…

2 hours ago