ಕ್ರೀಡೆ

ಏಷ್ಯನ್ ಗೇಮ್ಸ್ ನಲ್ಲಿ ಭಾರತಕ್ಕೆ ಮೊದಲ ಸ್ವರ್ಣ ತಂದುಕೊಟ್ಟ ಶೂಟರ್ಸ್‌

ಹಾಂಗ್‌ಝೌ: ಚೀನಾದ ಹಾಂಗ್‌ಝೌನಲ್ಲಿ ನಡೆಯುತ್ತಿರುವ 19ನೇ ಏಷ್ಯಾನ್ ಗೇಮ್ಸ್ ನ ದ್ವಿತೀಯ ದಿನವೇ ಅತ್ಯಮೋಘ ಪ್ರದರ್ಶನ ತೋರಿಸಿದ ಭಾರತದ ಪುರುಷ ಶೂಟರ್ ಗಳು ವಿಶ್ವ ದಾಖಲೆ ನಿರ್ಮಿಸುವುದರೊಂದಿಗೆ ದೇಶಕ್ಕೆ ಮೊದಲ ಚಿನ್ನದ ಪದಕ ಗೆದ್ದು ಕೊಟ್ಟಿದ್ದಾರೆ.

ಪುರುಷರ 10 ಮೀಟರ್ ಏರ್ ರೈಫಲ್ ವಿಭಾಗದ ಫೈನಲ್ ಪಂದ್ಯದಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದ ಐಶ್ವರಿ ಪ್ರತಾಪ್ ಸಿಂಗ್ ತೋಮರ್, ದಿವ್ಯಾಂಶ್ ಸಿಂಗ್ ಪನ್ವಾರ್ ಹಾಗೂ ರುದ್ರಂಕ್ಷ್ ಪಾಟೀಲ್ ಅವರು ವಿಶ್ವದಾಖಲೆ ನಿರ್ಮಿಸಿದ್ದಲ್ಲದೆ ಚಿನ್ನದ ಪದಕಕ್ಕೆ ಮುತ್ತಿಕ್ಕಿದ್ದಾರೆ.

ಭಾರತದ ತ್ರಿವಳಿ ಶೂಟರ್ ಗಳು ತಮ್ಮ ಉತ್ತಮವಾದ ಗುರಿಯಿಂದ 1893.7 ಪಾಯಿಂಟ್ಸ್ ಕಲೆ ಹಾಕುವ ಮೂಲಕ ಬಾಕುವಿನಲ್ಲಿ ಚೀನಾದ ಶೂಟರ್ ಗಳು 2022 ನೇ ಸಾಲಿನ ವಿಶ್ವ ಚಾಂಪಿಯನ್ ಶಿಪ್ ನಲ್ಲಿ ನಿರ್ಮಿಸಿದ್ದ ದಾಖಲೆಯನ್ನು ಮುರಿದು ವಿಶ್ವದಾಖಲೆ ನಿರ್ಮಿಸಿದೆ.

1893.7 ಪಾಯಿಂಟ್ಸ್ ಸಂಗ್ರಹ
ಫೈನಲ್ ಪಂದ್ಯದ ಮೊದಲ ಸುತ್ತಿನಲ್ಲಿ ಭಾರತದ ದಿವ್ಯಾಂಶ್ ಸಿಂಗ್ ಪನ್ವಾರ್ ಹಾಗೂ ರುದ್ರಂಕ್ಷ್ ಪಾಟೀಲ್ ತಲಾ 104.8 ಅಂಕಗಳನ್ನು ಕಲೆ ಹಾಕಿದರೆ, ಐಶ್ವರಿ ಪ್ರತಾಪ್ ಸಿಂಗ್ ತೋಮರ್ 104.1 ಅಂಕ ಸಂಗ್ರಹಿಸಿದ್ದರು‌. ನಂತರದ ಸುತ್ತುಗಳಲ್ಲಿ ತಮ್ಮ ಗುರಿಯ ಮಟ್ಟವನ್ನು ಹೆಚ್ಚಿಸಿಕೊಂಡ ಭಾರತದ ತ್ರಿವಳಿ ಶೂಟರ್ ಗಳು 6ನೇ ಸೀರಿಸ್ ವೇಳೆಗೆ‌ 1893.7 ಪಾಯಿಂಟ್ಸ್ ಸಂಗ್ರಹಿಸಿ ವಿಶ್ವದಾಖಲೆ ನಿರ್ಮಿಸಿತು.

ಭಾರತಕ್ಕೆ ಮೊದಲ ಚಿನ್ನದ ಪದಕ
ಪುರುಷರ 10 ಮೀಟರ್ ಏರ್ ರೈಫಲ್ ಫೈನಲ್ ಸ್ಪರ್ಧೆಯಲ್ಲಿ ಟಾಪ್ 1 ಸ್ಥಾನ ಪಡೆದ ಭಾರತದ ತ್ರಿವಳಿ ಶೂಟರ್ ಗಳು 2023ನೇ ಸಾಲಿನ ಏಷ್ಯನ್ ಗೇಮ್ಸ್ ನಲ್ಲಿ ದೇಶಕ್ಕೆ ಮೊದಲ ಚಿನ್ನದ ಪದಕ ಗೆದ್ದು ಕೊಟ್ಟರು. ದಕ್ಷಿಣ ಕೊರಿಯಾ (1890.1 ಅಂಕ) ಬೆಳ್ಳಿ ಪದಕ ಗೆದ್ದರೆ,ಚೀನಾ (1888.2 ಅಂಕ) ಕಂಚಿನ ಪದಕ ಗೆದ್ದು ಸಂಭ್ರಮಿಸಿತು. ಭಾರತದ ಪದಕ ಸಾಧನೆ: ಕ್ರೀಡಾಕೂಟದ ಮೊದಲ ದಿನ ಭಾರತ 3 ಬೆಳ್ಳಿ ಹಾಗೂ 2 ಕಂಚಿನ ಪದಕ ಗೆದ್ದು ಸಂಭ್ರಮಿಸಿತ್ತು.

andolanait

Recent Posts

ಮಹಿಳಾ ಮೀಸಲಾತಿ ಬಂದರೆ ಮಗಳನ್ನೇ ಚುನಾವಣೆಗೆ ನಿಲ್ಲಿಸುತ್ತೇನೆ: ಕೆ.ಎನ್‌.ರಾಜಣ್ಣ

ಬೆಂಗಳೂರು: ಮುಂದಿನ ಸಲ ಮಹಿಳಾ ಮೀಸಲಾತಿ ಬಂದರೆ ಮಗಳನ್ನೇ ಚುನಾವಣೆಗೆ ನಿಲ್ಲಿಸುತ್ತೇನೆ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಈ…

1 hour ago

ರಾಜ್ಯ ರಾಜಕಾರಣಕ್ಕೆ ವಾಪಸ್‌ ಆಗುವ ಚಿಂತನೆ ಇಲ್ಲ: ವಿ.ಸೋಮಣ್ಣ

ಬೆಂಗಳೂರು: ನಾನು ರಾಜ್ಯ ರಾಜಕಾರಣಕ್ಕೆ ಬರುವ ಯೋಚನೆ ಇಲ್ಲ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು…

1 hour ago

ಮೈಸೂರು ಮುಡಾ ಹಗರಣ: ಹೊಸ ಬಾಂಬ್‌ ಸಿಡಿಸಿದ ಸ್ನೇಹಮಯಿ ಕೃಷ್ಣ

ಬೆಂಗಳೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮತ್ತೊಂದು ಹೊಸ ಬಾಂಬ್‌ ಸಿಡಿಸಿದ್ದಾರೆ. ರಾಜ್ಯ ಮುಖ್ಯ…

2 hours ago

ಗುಂಡಾಲ್‌ ಜಲಾಶಯದಲ್ಲಿ ಹುಲಿ ಶವ ಪತ್ತೆ ಪ್ರಕರಣ: ಸ್ಕೂಟರ್‌ ಕ್ಲಚ್‌ ವೈರ್‌ ಉರುಳಿಗೆ ವ್ಯಾಘ್ರ ಬಲಿ?

ಹನೂರು: ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ ಹುಲಿಯೊಂದು ಮೃತಪಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇಲ್ನೋಟಕ್ಕೆ…

2 hours ago

ಫೆ.25-26ರಂದು ಪ್ರಧಾನಿ ಮೋದಿ ಇಸ್ರೇಲ್‌ಗೆ ಭೇಟಿ: ನೆತನ್ಯಾಹು ಘೋಷಣೆ

ಟೆಲ್‌ ಅವಿವ್:‌ ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿ.25 ರಿಂದ 26ರವರೆಗೆ ಎರಡು ದಿನಗಳ ಭೇಟಿಗಾಗಿ ಇಸ್ರೇಲ್‌ಗೆ ಪ್ರಯಾಣಿಸಲಿದ್ದಾರೆ ಎಂದು…

2 hours ago

ಹಲವು ಕಾಂಗ್ರೆಸ್‌ ಶಾಸಕರ ವಿದೇಶ ಪ್ರವಾಸ ದಿಢೀರ್‌ ರದ್ದು?

ಬೆಂಗಳೂರು: ಕರ್ನಾಟಕದ ಕಾಂಗ್ರೆಸ್‌ ಶಾಸಕರ ವಿದೇಶ ಪ್ರವಾಸ. ಸದ್ಯ ರಾಜ್ಯ ರಾಜಕೀಯದಲ್ಲಿ ಬಹಳ ಚರ್ಚೆಯ ವಿಚಾರ. ಶಾಸಕರು ಸರ್ಕಾರಿ ಖರ್ಚಿನಲ್ಲಿ…

3 hours ago