ಕ್ರೀಡೆ

ಏಷ್ಯನ್ ಗೇಮ್ಸ್ ನಲ್ಲಿ ಭಾರತಕ್ಕೆ ಮೊದಲ ಸ್ವರ್ಣ ತಂದುಕೊಟ್ಟ ಶೂಟರ್ಸ್‌

ಹಾಂಗ್‌ಝೌ: ಚೀನಾದ ಹಾಂಗ್‌ಝೌನಲ್ಲಿ ನಡೆಯುತ್ತಿರುವ 19ನೇ ಏಷ್ಯಾನ್ ಗೇಮ್ಸ್ ನ ದ್ವಿತೀಯ ದಿನವೇ ಅತ್ಯಮೋಘ ಪ್ರದರ್ಶನ ತೋರಿಸಿದ ಭಾರತದ ಪುರುಷ ಶೂಟರ್ ಗಳು ವಿಶ್ವ ದಾಖಲೆ ನಿರ್ಮಿಸುವುದರೊಂದಿಗೆ ದೇಶಕ್ಕೆ ಮೊದಲ ಚಿನ್ನದ ಪದಕ ಗೆದ್ದು ಕೊಟ್ಟಿದ್ದಾರೆ.

ಪುರುಷರ 10 ಮೀಟರ್ ಏರ್ ರೈಫಲ್ ವಿಭಾಗದ ಫೈನಲ್ ಪಂದ್ಯದಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದ ಐಶ್ವರಿ ಪ್ರತಾಪ್ ಸಿಂಗ್ ತೋಮರ್, ದಿವ್ಯಾಂಶ್ ಸಿಂಗ್ ಪನ್ವಾರ್ ಹಾಗೂ ರುದ್ರಂಕ್ಷ್ ಪಾಟೀಲ್ ಅವರು ವಿಶ್ವದಾಖಲೆ ನಿರ್ಮಿಸಿದ್ದಲ್ಲದೆ ಚಿನ್ನದ ಪದಕಕ್ಕೆ ಮುತ್ತಿಕ್ಕಿದ್ದಾರೆ.

ಭಾರತದ ತ್ರಿವಳಿ ಶೂಟರ್ ಗಳು ತಮ್ಮ ಉತ್ತಮವಾದ ಗುರಿಯಿಂದ 1893.7 ಪಾಯಿಂಟ್ಸ್ ಕಲೆ ಹಾಕುವ ಮೂಲಕ ಬಾಕುವಿನಲ್ಲಿ ಚೀನಾದ ಶೂಟರ್ ಗಳು 2022 ನೇ ಸಾಲಿನ ವಿಶ್ವ ಚಾಂಪಿಯನ್ ಶಿಪ್ ನಲ್ಲಿ ನಿರ್ಮಿಸಿದ್ದ ದಾಖಲೆಯನ್ನು ಮುರಿದು ವಿಶ್ವದಾಖಲೆ ನಿರ್ಮಿಸಿದೆ.

1893.7 ಪಾಯಿಂಟ್ಸ್ ಸಂಗ್ರಹ
ಫೈನಲ್ ಪಂದ್ಯದ ಮೊದಲ ಸುತ್ತಿನಲ್ಲಿ ಭಾರತದ ದಿವ್ಯಾಂಶ್ ಸಿಂಗ್ ಪನ್ವಾರ್ ಹಾಗೂ ರುದ್ರಂಕ್ಷ್ ಪಾಟೀಲ್ ತಲಾ 104.8 ಅಂಕಗಳನ್ನು ಕಲೆ ಹಾಕಿದರೆ, ಐಶ್ವರಿ ಪ್ರತಾಪ್ ಸಿಂಗ್ ತೋಮರ್ 104.1 ಅಂಕ ಸಂಗ್ರಹಿಸಿದ್ದರು‌. ನಂತರದ ಸುತ್ತುಗಳಲ್ಲಿ ತಮ್ಮ ಗುರಿಯ ಮಟ್ಟವನ್ನು ಹೆಚ್ಚಿಸಿಕೊಂಡ ಭಾರತದ ತ್ರಿವಳಿ ಶೂಟರ್ ಗಳು 6ನೇ ಸೀರಿಸ್ ವೇಳೆಗೆ‌ 1893.7 ಪಾಯಿಂಟ್ಸ್ ಸಂಗ್ರಹಿಸಿ ವಿಶ್ವದಾಖಲೆ ನಿರ್ಮಿಸಿತು.

ಭಾರತಕ್ಕೆ ಮೊದಲ ಚಿನ್ನದ ಪದಕ
ಪುರುಷರ 10 ಮೀಟರ್ ಏರ್ ರೈಫಲ್ ಫೈನಲ್ ಸ್ಪರ್ಧೆಯಲ್ಲಿ ಟಾಪ್ 1 ಸ್ಥಾನ ಪಡೆದ ಭಾರತದ ತ್ರಿವಳಿ ಶೂಟರ್ ಗಳು 2023ನೇ ಸಾಲಿನ ಏಷ್ಯನ್ ಗೇಮ್ಸ್ ನಲ್ಲಿ ದೇಶಕ್ಕೆ ಮೊದಲ ಚಿನ್ನದ ಪದಕ ಗೆದ್ದು ಕೊಟ್ಟರು. ದಕ್ಷಿಣ ಕೊರಿಯಾ (1890.1 ಅಂಕ) ಬೆಳ್ಳಿ ಪದಕ ಗೆದ್ದರೆ,ಚೀನಾ (1888.2 ಅಂಕ) ಕಂಚಿನ ಪದಕ ಗೆದ್ದು ಸಂಭ್ರಮಿಸಿತು. ಭಾರತದ ಪದಕ ಸಾಧನೆ: ಕ್ರೀಡಾಕೂಟದ ಮೊದಲ ದಿನ ಭಾರತ 3 ಬೆಳ್ಳಿ ಹಾಗೂ 2 ಕಂಚಿನ ಪದಕ ಗೆದ್ದು ಸಂಭ್ರಮಿಸಿತ್ತು.

andolanait

Recent Posts

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿ ಭತ್ಯೆ ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…

8 hours ago

ಮೇ.13ರಂದು ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್:‌ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್‌ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…

8 hours ago

ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಒಡೆಯರ್‌ ಭೇಟಿ

ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಂದು ಭೇಟಿ ನೀಡಿ…

9 hours ago

ಪಂಚಭೂತಗಳಲ್ಲಿ ಲೀನರಾದ ಸಚಿವ ಡಿ.ಸುಧಾಕರ್‌

ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್‌ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್‌ ಅವರ…

9 hours ago

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ: ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…

9 hours ago

ಎಂ.ಕೆ.ಸ್ಟಾಲಿನ್‌ ಭೇಟಿಯಾದ ತಮಿಳುನಾಡು ನೂತನ ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್‌ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್‌ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…

10 hours ago