ಕ್ರೀಡೆ

ಏಷ್ಯನ್ ಗೇಮ್ಸ್ ನಲ್ಲಿ ಭಾರತಕ್ಕೆ ಮೊದಲ ಸ್ವರ್ಣ ತಂದುಕೊಟ್ಟ ಶೂಟರ್ಸ್‌

ಹಾಂಗ್‌ಝೌ: ಚೀನಾದ ಹಾಂಗ್‌ಝೌನಲ್ಲಿ ನಡೆಯುತ್ತಿರುವ 19ನೇ ಏಷ್ಯಾನ್ ಗೇಮ್ಸ್ ನ ದ್ವಿತೀಯ ದಿನವೇ ಅತ್ಯಮೋಘ ಪ್ರದರ್ಶನ ತೋರಿಸಿದ ಭಾರತದ ಪುರುಷ ಶೂಟರ್ ಗಳು ವಿಶ್ವ ದಾಖಲೆ ನಿರ್ಮಿಸುವುದರೊಂದಿಗೆ ದೇಶಕ್ಕೆ ಮೊದಲ ಚಿನ್ನದ ಪದಕ ಗೆದ್ದು ಕೊಟ್ಟಿದ್ದಾರೆ.

ಪುರುಷರ 10 ಮೀಟರ್ ಏರ್ ರೈಫಲ್ ವಿಭಾಗದ ಫೈನಲ್ ಪಂದ್ಯದಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದ ಐಶ್ವರಿ ಪ್ರತಾಪ್ ಸಿಂಗ್ ತೋಮರ್, ದಿವ್ಯಾಂಶ್ ಸಿಂಗ್ ಪನ್ವಾರ್ ಹಾಗೂ ರುದ್ರಂಕ್ಷ್ ಪಾಟೀಲ್ ಅವರು ವಿಶ್ವದಾಖಲೆ ನಿರ್ಮಿಸಿದ್ದಲ್ಲದೆ ಚಿನ್ನದ ಪದಕಕ್ಕೆ ಮುತ್ತಿಕ್ಕಿದ್ದಾರೆ.

ಭಾರತದ ತ್ರಿವಳಿ ಶೂಟರ್ ಗಳು ತಮ್ಮ ಉತ್ತಮವಾದ ಗುರಿಯಿಂದ 1893.7 ಪಾಯಿಂಟ್ಸ್ ಕಲೆ ಹಾಕುವ ಮೂಲಕ ಬಾಕುವಿನಲ್ಲಿ ಚೀನಾದ ಶೂಟರ್ ಗಳು 2022 ನೇ ಸಾಲಿನ ವಿಶ್ವ ಚಾಂಪಿಯನ್ ಶಿಪ್ ನಲ್ಲಿ ನಿರ್ಮಿಸಿದ್ದ ದಾಖಲೆಯನ್ನು ಮುರಿದು ವಿಶ್ವದಾಖಲೆ ನಿರ್ಮಿಸಿದೆ.

1893.7 ಪಾಯಿಂಟ್ಸ್ ಸಂಗ್ರಹ
ಫೈನಲ್ ಪಂದ್ಯದ ಮೊದಲ ಸುತ್ತಿನಲ್ಲಿ ಭಾರತದ ದಿವ್ಯಾಂಶ್ ಸಿಂಗ್ ಪನ್ವಾರ್ ಹಾಗೂ ರುದ್ರಂಕ್ಷ್ ಪಾಟೀಲ್ ತಲಾ 104.8 ಅಂಕಗಳನ್ನು ಕಲೆ ಹಾಕಿದರೆ, ಐಶ್ವರಿ ಪ್ರತಾಪ್ ಸಿಂಗ್ ತೋಮರ್ 104.1 ಅಂಕ ಸಂಗ್ರಹಿಸಿದ್ದರು‌. ನಂತರದ ಸುತ್ತುಗಳಲ್ಲಿ ತಮ್ಮ ಗುರಿಯ ಮಟ್ಟವನ್ನು ಹೆಚ್ಚಿಸಿಕೊಂಡ ಭಾರತದ ತ್ರಿವಳಿ ಶೂಟರ್ ಗಳು 6ನೇ ಸೀರಿಸ್ ವೇಳೆಗೆ‌ 1893.7 ಪಾಯಿಂಟ್ಸ್ ಸಂಗ್ರಹಿಸಿ ವಿಶ್ವದಾಖಲೆ ನಿರ್ಮಿಸಿತು.

ಭಾರತಕ್ಕೆ ಮೊದಲ ಚಿನ್ನದ ಪದಕ
ಪುರುಷರ 10 ಮೀಟರ್ ಏರ್ ರೈಫಲ್ ಫೈನಲ್ ಸ್ಪರ್ಧೆಯಲ್ಲಿ ಟಾಪ್ 1 ಸ್ಥಾನ ಪಡೆದ ಭಾರತದ ತ್ರಿವಳಿ ಶೂಟರ್ ಗಳು 2023ನೇ ಸಾಲಿನ ಏಷ್ಯನ್ ಗೇಮ್ಸ್ ನಲ್ಲಿ ದೇಶಕ್ಕೆ ಮೊದಲ ಚಿನ್ನದ ಪದಕ ಗೆದ್ದು ಕೊಟ್ಟರು. ದಕ್ಷಿಣ ಕೊರಿಯಾ (1890.1 ಅಂಕ) ಬೆಳ್ಳಿ ಪದಕ ಗೆದ್ದರೆ,ಚೀನಾ (1888.2 ಅಂಕ) ಕಂಚಿನ ಪದಕ ಗೆದ್ದು ಸಂಭ್ರಮಿಸಿತು. ಭಾರತದ ಪದಕ ಸಾಧನೆ: ಕ್ರೀಡಾಕೂಟದ ಮೊದಲ ದಿನ ಭಾರತ 3 ಬೆಳ್ಳಿ ಹಾಗೂ 2 ಕಂಚಿನ ಪದಕ ಗೆದ್ದು ಸಂಭ್ರಮಿಸಿತ್ತು.

andolanait

Recent Posts

ಬ್ರಿಡ್ಜ್‌ ಮ್ಯಾನ್‌ ಖ್ಯಾತಿಯ ಪದ್ಮಶ್ರೀ ಡಾ.ಗಿರೀಶ್‌ ಭಾರದ್ವಾಜ್‌ ನಿಧನ

ಮಂಗಳೂರು: ತೂಗುಸೇತುವೆಗಳ ಸರದಾರ, ಸುಳ್ಯದ ವಿಶ್ವೇಶ್ವರಯ್ಯ ಎಂದೇ ಖ್ಯಾತರಾಗಿದ್ದ ಪದ್ಮಶ್ರೀ ಪುರಸ್ಕೃತ ಎಂಜಿನಿಯರ್‌ ಡಾ.ಗಿರೀಶ್‌ ಭಾರದ್ವಾಜ್‌ ಅವರು ಇಂದು ನಿಧನರಾಗಿದ್ದಾರೆ.…

6 mins ago

ಕೊಡಗು: ಕಾಫಿ ತೋಟದಲ್ಲಿ ಕಾಡಾನೆ ಮೃತದೇಹ ಪತ್ತೆ

ಕೊಡಗು: ಕಾಫಿ ತೋಟದಲ್ಲಿ ಕಾಡಾನೆ ಮೃತದೇಹ ಪತ್ತೆಯಾಗಿದೆ. ಕುಂಜಿಲ-ಕಕ್ಕಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಲಡಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಪರದಂಡ…

2 hours ago

ಪೊಲೀಸ್ ಠಾಣೆ ಕೂಗಳತೆ ದೂರದಲ್ಲಿ ಯುವಕನ ಭೀಕರ ಕೊಲೆ

ಶ್ರೀರಂಗಪಟ್ಟಣ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್ ಗ್ರಾಮದಲ್ಲಿ ತಡರಾತ್ರಿ ಭೀಕರ ಕೊಲೆ ನಡೆದಿದ್ದು, ಯುವಕನೊಬ್ಬನನ್ನು ದುಷ್ಕರ್ಮಿಗಳು ಅತ್ಯಂತ ಬರ್ಬರವಾಗಿ…

3 hours ago

ಮಲ್ಲಯ್ಯನಪುರ ಗುಡ್ಡದಲ್ಲಿ ಥೋರಿಯಂ ಖನಿಜ ನಿಕ್ಷೇಪ ಪತ್ತೆ

ಗುಂಡ್ಲುಪೇಟೆ: ಪಟ್ಟಣ ಮತ್ತು ಮಲ್ಲಯ್ಯನಪುರ ನಡುವಿನ ಅನ್ಗಲ್ ಗುಡ್ಡದ ತಪ್ಪಲಿನ ಪ್ರದೇಶದಲ್ಲಿ ಅಪರೂಪದ ಥೋರಿಯಂ ನಿಕ್ಷೇಪ ಪತ್ತೆಯಾಗಿದೆ. ಹಿಂದಿನ ವರ್ಷ…

8 hours ago

ಓದುಗರ ಪತ್ರ: ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖೆ ಸ್ಥಳಾಂತರಿಸಿ

ಹೆಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದ ಮೈಸೂರು -ಮಾನಂದವಾಡಿ ಮುಖ್ಯ ರಸ್ತೆಯಲ್ಲಿರುವ ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖೆ ಖಾಸಗಿ ಕಟ್ಟಡದ ಎರಡನೇ…

8 hours ago

ಓದುಗರ ಪತ್ರ: ಕಾಣಿಕೆ ದುರುಪಯೋಗ ತಡೆಗೆ ಸರ್ಕಾರ ಮುಂದಾಗಲಿ

ಅಯೋಧ್ಯೆಯ ರಾಮ ಮಂದಿರವೂ ಸೇರಿದಂತೆ ದೇಶದ ವಿವಿಧ ದೇವಾಲಯಗಳಲ್ಲಿ ಕಾಣಿಕೆ ಹಣ, ದೇವರಿಗೆ ಭಕ್ತರು ಕಾಣಿಕೆ ರೂಪದಲ್ಲಿ ಸಲ್ಲಿಸುವ ಚಿನ್ನಾಭರಣಗಳು…

8 hours ago