ಕ್ರೀಡೆ

ಏಷ್ಯನ್ ಗೇಮ್ಸ್ ನಲ್ಲಿ ಭಾರತಕ್ಕೆ ಮೊದಲ ಸ್ವರ್ಣ ತಂದುಕೊಟ್ಟ ಶೂಟರ್ಸ್‌

ಹಾಂಗ್‌ಝೌ: ಚೀನಾದ ಹಾಂಗ್‌ಝೌನಲ್ಲಿ ನಡೆಯುತ್ತಿರುವ 19ನೇ ಏಷ್ಯಾನ್ ಗೇಮ್ಸ್ ನ ದ್ವಿತೀಯ ದಿನವೇ ಅತ್ಯಮೋಘ ಪ್ರದರ್ಶನ ತೋರಿಸಿದ ಭಾರತದ ಪುರುಷ ಶೂಟರ್ ಗಳು ವಿಶ್ವ ದಾಖಲೆ ನಿರ್ಮಿಸುವುದರೊಂದಿಗೆ ದೇಶಕ್ಕೆ ಮೊದಲ ಚಿನ್ನದ ಪದಕ ಗೆದ್ದು ಕೊಟ್ಟಿದ್ದಾರೆ.

ಪುರುಷರ 10 ಮೀಟರ್ ಏರ್ ರೈಫಲ್ ವಿಭಾಗದ ಫೈನಲ್ ಪಂದ್ಯದಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದ ಐಶ್ವರಿ ಪ್ರತಾಪ್ ಸಿಂಗ್ ತೋಮರ್, ದಿವ್ಯಾಂಶ್ ಸಿಂಗ್ ಪನ್ವಾರ್ ಹಾಗೂ ರುದ್ರಂಕ್ಷ್ ಪಾಟೀಲ್ ಅವರು ವಿಶ್ವದಾಖಲೆ ನಿರ್ಮಿಸಿದ್ದಲ್ಲದೆ ಚಿನ್ನದ ಪದಕಕ್ಕೆ ಮುತ್ತಿಕ್ಕಿದ್ದಾರೆ.

ಭಾರತದ ತ್ರಿವಳಿ ಶೂಟರ್ ಗಳು ತಮ್ಮ ಉತ್ತಮವಾದ ಗುರಿಯಿಂದ 1893.7 ಪಾಯಿಂಟ್ಸ್ ಕಲೆ ಹಾಕುವ ಮೂಲಕ ಬಾಕುವಿನಲ್ಲಿ ಚೀನಾದ ಶೂಟರ್ ಗಳು 2022 ನೇ ಸಾಲಿನ ವಿಶ್ವ ಚಾಂಪಿಯನ್ ಶಿಪ್ ನಲ್ಲಿ ನಿರ್ಮಿಸಿದ್ದ ದಾಖಲೆಯನ್ನು ಮುರಿದು ವಿಶ್ವದಾಖಲೆ ನಿರ್ಮಿಸಿದೆ.

1893.7 ಪಾಯಿಂಟ್ಸ್ ಸಂಗ್ರಹ
ಫೈನಲ್ ಪಂದ್ಯದ ಮೊದಲ ಸುತ್ತಿನಲ್ಲಿ ಭಾರತದ ದಿವ್ಯಾಂಶ್ ಸಿಂಗ್ ಪನ್ವಾರ್ ಹಾಗೂ ರುದ್ರಂಕ್ಷ್ ಪಾಟೀಲ್ ತಲಾ 104.8 ಅಂಕಗಳನ್ನು ಕಲೆ ಹಾಕಿದರೆ, ಐಶ್ವರಿ ಪ್ರತಾಪ್ ಸಿಂಗ್ ತೋಮರ್ 104.1 ಅಂಕ ಸಂಗ್ರಹಿಸಿದ್ದರು‌. ನಂತರದ ಸುತ್ತುಗಳಲ್ಲಿ ತಮ್ಮ ಗುರಿಯ ಮಟ್ಟವನ್ನು ಹೆಚ್ಚಿಸಿಕೊಂಡ ಭಾರತದ ತ್ರಿವಳಿ ಶೂಟರ್ ಗಳು 6ನೇ ಸೀರಿಸ್ ವೇಳೆಗೆ‌ 1893.7 ಪಾಯಿಂಟ್ಸ್ ಸಂಗ್ರಹಿಸಿ ವಿಶ್ವದಾಖಲೆ ನಿರ್ಮಿಸಿತು.

ಭಾರತಕ್ಕೆ ಮೊದಲ ಚಿನ್ನದ ಪದಕ
ಪುರುಷರ 10 ಮೀಟರ್ ಏರ್ ರೈಫಲ್ ಫೈನಲ್ ಸ್ಪರ್ಧೆಯಲ್ಲಿ ಟಾಪ್ 1 ಸ್ಥಾನ ಪಡೆದ ಭಾರತದ ತ್ರಿವಳಿ ಶೂಟರ್ ಗಳು 2023ನೇ ಸಾಲಿನ ಏಷ್ಯನ್ ಗೇಮ್ಸ್ ನಲ್ಲಿ ದೇಶಕ್ಕೆ ಮೊದಲ ಚಿನ್ನದ ಪದಕ ಗೆದ್ದು ಕೊಟ್ಟರು. ದಕ್ಷಿಣ ಕೊರಿಯಾ (1890.1 ಅಂಕ) ಬೆಳ್ಳಿ ಪದಕ ಗೆದ್ದರೆ,ಚೀನಾ (1888.2 ಅಂಕ) ಕಂಚಿನ ಪದಕ ಗೆದ್ದು ಸಂಭ್ರಮಿಸಿತು. ಭಾರತದ ಪದಕ ಸಾಧನೆ: ಕ್ರೀಡಾಕೂಟದ ಮೊದಲ ದಿನ ಭಾರತ 3 ಬೆಳ್ಳಿ ಹಾಗೂ 2 ಕಂಚಿನ ಪದಕ ಗೆದ್ದು ಸಂಭ್ರಮಿಸಿತ್ತು.

andolanait

Recent Posts

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

9 hours ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

12 hours ago

ಶೂಟೌಟ್‌ ಪ್ರಕರಣ ; ಮೃತರು ಬೇಟೆಗಾರರು ಎಂಬುದಕ್ಕೆ ಮತ್ತಷ್ಟು ಸಾಕ್ಷ್ಯ ಬಿಡುಗಡೆ ಮಾಡಿದ ಅರಣ್ಯ ಇಲಾಖೆ

ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್​​ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…

13 hours ago

ನಕಲಿ ಔಷಧ ಜಾಲ ಪತ್ತೆ ಪ್ರಕರಣ ; ಎಸ್‌ಐಟಿ ತನಿಖೆಗೆ ಆದೇಶ

ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…

14 hours ago

ಮುಡಾ ಬದಲಿ ನಿವೇಶನಗಳ ಹಂಚಿಕೆ ಆದೇಶ ರದ್ದು ; ಮುಯ್ಯಿಗೆ ಮುಯ್ಯಿ ತೀರಿಸಿಕೊಂಡ ಸಚಿವ ಯತೀಂದ್ರ

ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್‌ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…

14 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ

ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ   72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…

15 hours ago