ನವದೆಹಲಿ: ಭಾರತ ಹಾಕಿ ತಂಡದ ಗೋಲ್ ಕೀಪರ್ ಕೇರಳದ ಶ್ರೀಜೇಶ್ ಅವರಿಗೆ ಹಾಕಿ ಇಂಡಿಯಾ ಉನ್ನತ ಹುದ್ದೆ ನೀಡಿ ಗೌರವಿಸಿದೆ.
ಪ್ಯಾರಿಸ್ ಒಲಂಪಿಕ್ಸ್ನಲ್ಲಿ ಕಂಚಿನ ಪಂದ್ಯಕ್ಕಾಗಿ ಸ್ಪೇನ್ ವಿರುದ್ಧ ನಡೆದ ಪಂದ್ಯದಲ್ಲಿ ಉತ್ತಮವಾಗಿ ಗೋಲ್ ಕೀಪಿಂಗ್ ಮಾಡಿ ಭಾರತ ಗೆಲುವಿಗೆ ಪ್ರಮುಖ ಪಾತ್ರ ವಹಿಸಿದ್ದ ಓಲ್ ಕೀಪರ್ ಪಿಜೆ ಶ್ರೀಜೇಶ್ ಅವರು ಒಲಂಪಿಕ್ಸ್ನಲ್ಲಿ ಕಂಚಿನ ಪದಕ ಗೆಲ್ಲುವ ಮೂಲಕ ತಮ್ಮ ಅಂತರಾಷ್ಟ್ರೀಯ ಹಾಕಿಗೆ ನಿವೃತ್ತಿ ಘೋಷಿಸಿದ್ದರು. ಇನ್ನು ಈ ಪಂದ್ಯದಲ್ಲಿ ಭಾರತ 2-1ರ ಅಂತರಿಂದ ಸ್ಪೇನ್ ಸೋಲಿಸಿ ಕಂಚಿನ ಪದಕ್ಕೆ ಕೊರಳೊಡ್ಡಿತ್ತು.
ಪ್ಯಾರಿಸ್ನಲ್ಲಿ ಆಡಿದ ಪಂದ್ಯದೊಂದಿಗೆ ತಾವು ವಿದಾಯ ಘೋಷಿಸುತ್ತಿರುವುದಾಗಿ ಹೇಳಿದ ಶ್ರೀಜೇಶ್ ಅವರಿಗೆ ಹಾಕಿ ಇಂಡಿಯಾ ಬಿಗ್ ಸರ್ಪ್ರೈಸ್ ನೀಡಿದೆ.
ಭಾರತ ಪರವಾಗಿ ಒಟ್ಟು ನಾಲ್ಕು ಒಲಂಪಿಕ್ಸ್ ಆಡಿರುವ ಶ್ರೀಜೇಶ್ ಒಟ್ಟು ಎರಡು ಕಂಚಿನ ಪದಕವನ್ನು ಗೆದ್ದಿದ್ದಾರೆ. ಈ ಎಲ್ಲಾ ದಾಖಲೆ ಮಾಡಿರುವ ಶ್ರೀಜೇಶ್ ಅವರಿಗೆ ಜೂನಿಯರ್ ಪುರುಷರ ಹಾಕಿ ತಂಡ ಮುಖ್ಯ ಕೋಚ್ ಆಗಿ ನೇಮಿಸಿ ಹಾಕಿ ಇಂಡಿಯಾ ಘೋಷಿಸಿದೆ.
ಪ್ಯಾರಿಸ್ ಒಲಪಿಕ್ಸ್ನ ಮುಕ್ತಾಯ ಸಮಾರಂಭದಲ್ಲಿ ಧ್ವಜಧಾರಿಯಾಗಿ ಶ್ರೀಜೇಶ್ ಮುಂದೆ ಸಾಗಲಿದ್ದಾರೆ.
ಹೊಸದಿಲ್ಲಿ : ಇಂಡಿಗೋ ವಿಮಾನಗಳ ರದ್ದತಿ ಮತ್ತು ವಿಳಂಬದ ಕುರಿತು ತುರ್ತು ವಿಚಾರಣೆ ನಡೆಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ಆಲಿಸಲು…
ಬೆಳಗಾವಿ : ಮುಂಬರುವ ಜನವರಿಯಿಂದ ಹೆಚ್ಚುವರಿ 5 ಕೆ.ಜಿ ಅಕ್ಕಿ ಬದಲಿಗೆ ರಾಜ್ಯಾದ್ಯಂತ ಇಂದಿರಾ ಕಿಟ್ಗಳನ್ನು ವಿತರಣೆ ಮಾಡಲಾಗುವುದು ಎಂದು…
ಬೆಂಗಳೂರು: ನಟ ದುನಿಯಾ ವಿಜಯ್ ಅಭಿನಯದ ಲ್ಯಾಂಡ್ ಲಾರ್ಡ್ ಚಿತ್ರದಲ್ಲಿ ನಟ ರಾಜ್ ಬಿ ಶೆಟ್ಟಿ ನಟಿಸುತ್ತಿದ್ದು, ಇಂದು ಸಿನಿಮಾದ…
ಬೆಳಗಾವಿ: ಶಿಕ್ಷಕರ ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆಯ ಸಮಸ್ಯೆ ಇಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಪ್ರಾಥಮಿಕ…
ನವದೆಹಲಿ: ಕುಮಾರಸ್ವಾಮಿ ಮಂಡ್ಯಕ್ಕೆ ಏನು ಕೊಟ್ಟಿದ್ದಾರೆ ಎಂದು ಕೇಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತೀಕ್ಷ್ಣವಾಗಿ ತಿರುಗೇಟು ಕೊಟ್ಟಿರುವ ಕೇಂದ್ರ ಸಚಿವ…
ಬೆಳಗಾವಿ: ಅನ್ನಭಾಗ್ಯ ಅಕ್ಕಿ ವಿದೇಶಕ್ಕೆ ರಫ್ತಾಗುತ್ತಿದ್ದು, ಕಾಳಸಂತೆಯಲ್ಲಿ ಮಾರಾಟವಾಗುತ್ತಿದೆ. ಅಕ್ರಮ ಪತ್ತೆಗೆ ಎಸ್ಐಟಿ ರಚಿಸುವಂತೆ ಎಂಎಲ್ಸಿ ಸಿ.ಟಿ.ರವಿ ಆಗ್ರಹಿಸಿದರು. ಇಂದು…