ನವದೆಹಲಿ: ಭಾರತ ಹಾಕಿ ತಂಡದ ಗೋಲ್ ಕೀಪರ್ ಕೇರಳದ ಶ್ರೀಜೇಶ್ ಅವರಿಗೆ ಹಾಕಿ ಇಂಡಿಯಾ ಉನ್ನತ ಹುದ್ದೆ ನೀಡಿ ಗೌರವಿಸಿದೆ.
ಪ್ಯಾರಿಸ್ ಒಲಂಪಿಕ್ಸ್ನಲ್ಲಿ ಕಂಚಿನ ಪಂದ್ಯಕ್ಕಾಗಿ ಸ್ಪೇನ್ ವಿರುದ್ಧ ನಡೆದ ಪಂದ್ಯದಲ್ಲಿ ಉತ್ತಮವಾಗಿ ಗೋಲ್ ಕೀಪಿಂಗ್ ಮಾಡಿ ಭಾರತ ಗೆಲುವಿಗೆ ಪ್ರಮುಖ ಪಾತ್ರ ವಹಿಸಿದ್ದ ಓಲ್ ಕೀಪರ್ ಪಿಜೆ ಶ್ರೀಜೇಶ್ ಅವರು ಒಲಂಪಿಕ್ಸ್ನಲ್ಲಿ ಕಂಚಿನ ಪದಕ ಗೆಲ್ಲುವ ಮೂಲಕ ತಮ್ಮ ಅಂತರಾಷ್ಟ್ರೀಯ ಹಾಕಿಗೆ ನಿವೃತ್ತಿ ಘೋಷಿಸಿದ್ದರು. ಇನ್ನು ಈ ಪಂದ್ಯದಲ್ಲಿ ಭಾರತ 2-1ರ ಅಂತರಿಂದ ಸ್ಪೇನ್ ಸೋಲಿಸಿ ಕಂಚಿನ ಪದಕ್ಕೆ ಕೊರಳೊಡ್ಡಿತ್ತು.
ಪ್ಯಾರಿಸ್ನಲ್ಲಿ ಆಡಿದ ಪಂದ್ಯದೊಂದಿಗೆ ತಾವು ವಿದಾಯ ಘೋಷಿಸುತ್ತಿರುವುದಾಗಿ ಹೇಳಿದ ಶ್ರೀಜೇಶ್ ಅವರಿಗೆ ಹಾಕಿ ಇಂಡಿಯಾ ಬಿಗ್ ಸರ್ಪ್ರೈಸ್ ನೀಡಿದೆ.
ಭಾರತ ಪರವಾಗಿ ಒಟ್ಟು ನಾಲ್ಕು ಒಲಂಪಿಕ್ಸ್ ಆಡಿರುವ ಶ್ರೀಜೇಶ್ ಒಟ್ಟು ಎರಡು ಕಂಚಿನ ಪದಕವನ್ನು ಗೆದ್ದಿದ್ದಾರೆ. ಈ ಎಲ್ಲಾ ದಾಖಲೆ ಮಾಡಿರುವ ಶ್ರೀಜೇಶ್ ಅವರಿಗೆ ಜೂನಿಯರ್ ಪುರುಷರ ಹಾಕಿ ತಂಡ ಮುಖ್ಯ ಕೋಚ್ ಆಗಿ ನೇಮಿಸಿ ಹಾಕಿ ಇಂಡಿಯಾ ಘೋಷಿಸಿದೆ.
ಪ್ಯಾರಿಸ್ ಒಲಪಿಕ್ಸ್ನ ಮುಕ್ತಾಯ ಸಮಾರಂಭದಲ್ಲಿ ಧ್ವಜಧಾರಿಯಾಗಿ ಶ್ರೀಜೇಶ್ ಮುಂದೆ ಸಾಗಲಿದ್ದಾರೆ.
ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…
ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…
ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…
ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…
ಮೋಹಿತ್ ಎಸ್ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…
ರೇಣುಕಾ ನಿಡಗುಂದಿ ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…