ಕ್ರೀಡೆ

ಶ್ರೇಯಂಕಾ, ಮನ್ನತ್ ಸ್ಪಿನ್ ಮ್ಯಾಜಿಕ್‌: ಭಾರತದ ಮಡಿಲಿಗೆ ಎಮರ್ಜಿಂಗ್ ಏಷ್ಯಾ ಕಪ್ ಪಟ್ಟ

ಮಾಂಗ್ ಕಾಕ್: ಎಸಿಸಿ ಮಹಿಳಾ ಉದಯೋನ್ಮುಖ ತಂಡಗಳ ಏಷ್ಯಾ ಕಪ್ 2023 ಕೂಟದಲ್ಲಿ ಭಾರತ ಎ ತಂಡವು ಫೈನಲ್ ನಲ್ಲಿ ಬಾಂಗ್ಲಾದೇಶವನ್ನು 31 ರನ್‌ ಗಳಿಂದ ಮಣಿಸಿ ಚಾಂಪಿಯನ್ಸ್ ಪಟ್ಟವನ್ನು ಅಲಂಕರಿಸಿದೆ.

ಮೊದಲು ಬ್ಯಾಟ್‌ ಮಾಡಿದ ಭಾರತ 20 ಓವರ್‌ ಗಳಲ್ಲಿ 7 ವಿಕೆಟ್‌ ಗಳನ್ನು ಕಳೆದುಕೊಂಡು 127 ರನ್‌ ಗಳಿಸಿತ್ತು. ಕನಿಷ್ಠ ಮೊತ್ತವನ್ನು ದಾಖಲಿಸಿದ ಟೀಮ್‌ ಇಂಡಿಯಾ ಬೌಲಿಂಗ್‌ ವಿಭಾಗದಲ್ಲಿ ಬಲಿಷ್ಠ ಆಟವನ್ನಾಡಿ ಚಾಂಪಿಯನ್ಸ್‌ ಪಟ್ಟವನ್ನು ತನ್ನದಾಗಿಸಿಕೊಂಡಿದೆ.

ಟೀಮ್‌ ಇಂಡಿಯಾದ ಪರವಾಗಿ ವೃಂದಾ ದಿನೇಶ್ 36 ರನ್‌ ಗಳಿಸಿದರೆ, ಕನಿಕಾ ಅಹುಜಾ 30 ರನ್‌ ಗಳಿಸಿದರು. ಉಳಿದ ಆಟಗಾರರು ಹೆಚ್ಚು ಹೊತ್ತು ಕ್ರಿಸ್‌ ನಲ್ಲಿ ನಿಲ್ಲದೆ ಎರಡಂಕಿ ರನ್ ಗಳಿಸಿ ಔಟಾದರು.‌

ಅಲ್ಪ ಮೊತ್ತದ ಸವಾಲು ಬೆನ್ನಟ್ಟಲು ಬ್ಯಾಟಿಂಗ್‌ ಗಿಳಿದ ಬಾಂಗ್ಲಾ ಆಟಗಾರರು ಆರಂಭದಲ್ಲೇ ಭಾರತದ ಸ್ಪಿನ್ ಜಾಲದಲ್ಲಿ ಸಿಲುಕಿಕೊಂಡು ವಿಕೆಟ್‌ ಒಪ್ಪಿಸಿದರು. ಸೋಭಾನ ಮೊಸ್ತರಿ (16 ರನ್‌), ಸತಿ ರಾಣಿ ‌ (13 ರನ್) ತಂಡದ ಪರವಾಗಿ ಹೆಚ್ಚು ರನ್‌ ಗಳಿಸಿದರು. ನಹಿದಾ ಆಕ್ತರ್ 17 ರನ್‌ ಗಳಿಸಿ ಕೊನೆಯವರೆಗೂ ಇದ್ದರೂ ಉಳಿದ ಆಟಗಾರರು ಅವರಿಗೆ ಸಾಥ್‌ ನೀಡಲು ಆಗಿಲ್ಲ. ಅಂತಿಮವಾಗಿ ಬಾಂಗ್ಲಾ 19.2 ಓವರ್‌ ಗಳಲ್ಲಿ 96 ರನ್‌ ಗಳಿಸಿ ಸರ್ವಪತನವಾಯಿತು.

ಭಾರತದ ಪರವಾಗಿ ಕನ್ನಡತಿ ಶ್ರೇಯಾಂಕಾ ಪಾಟೀಲ್ 4 ವಿಕೆಟ್‌ ಗಳನ್ನು ಪಡೆದು ಮಿಂಚಿದರೆ, ಮನ್ನತ್ ಕಶ್ಯಪ್ 3 ಮಹತ್ವದ ವಿಕೆಟ್‌ ಗಳನ್ನು ಪಡೆದರು. ಇನ್ನು ಕನಿಕಾ ಅಹುಜಾ 2 ವಿಕೆಟ್‌ ಗಳನ್ನು ಪಡೆದರು.

ಒಂದು ಪಂದ್ಯ ಆಡಿ ಫೈನಲ್‌ ಗೆ ಬಂದಿದ್ದ ಭಾರತ: ಎಸಿಸಿ ಮಹಿಳಾ ಉದಯೋನ್ಮುಖ ತಂಡಗಳ ಏಷ್ಯಾ ಕಪ್ ನ ಬಹುತೇಕ ಪಂದ್ಯಗಳಿಗೆ ಮಳೆ ಅಡ್ಡಿ ಆಗಿತ್ತು. ಇದರಿಂದ ಕೆಲ ಪಂದ್ಯಗಳು ರದ್ದುಗೊಂಡಿತ್ತು. ಭಾರತ ಮೊದಲು ಹಾಂಕಾಂಗ್‌ ತಂಡದ ವಿರುದ್ಧ ಭರ್ಜರಿ ಜಯ ಸಾಧಿಸಿತ್ತು. ಆ ಬಳಿಕ ಪಾಕಿಸ್ತಾನ, ನೇಪಾಳ ವಿರುದ್ಧದ ಭಾರತದ ಪಂದ್ಯಗಳು ರದ್ದಾಗಿದ್ದವು. ಶ್ರೀಲಂಕಾ ಎ ತಂಡದ ವಿರುದ್ಧದ ಸೆಮಿ ಫೈನಲ್ ಪಂದ್ಯವೂ ಮಳೆಯಿಂದ ರದ್ದಾದ ಕಾರಣ ಉತ್ತಮ ರನ್ ರೇಟ್ ಹೊಂದಿದ್ದ ಭಾರತವು ಫೈನಲ್ ಗೆ ಅರ್ಹತೆ ಪಡೆದಿತ್ತು.

andolanait

Recent Posts

ಈಶಾ ಫೌಂಡೇಶನ್‌ ಬಳಿ ಅರಣ್ಯ ಪ್ರದೇಶದಲ್ಲಿ ಬೆಂಕಿ ಅವಘಡ

ಚಿಕ್ಕಬಳ್ಳಾಪುರ: ಮಹಾಶಿವರಾತ್ರಿ ಸಂಭ್ರಮದ ಹಿನ್ನೆಲೆಯಲ್ಲಿ ಲಕ್ಷಾಂತರ ಭಕ್ತರು ಚಿಕ್ಕಬಳ್ಳಾಪುರದ ಈಶಾ ಫೌಂಡೇಶನ್‌ಗೆ ಆಗಮಿಸಿದ್ದರು. ಎಲ್ಲೆಡೆ ಶಿವನಾಮ ಸ್ಮರಣೆ ಕೇಳಿಬರುತ್ತಿದೆ. ಈ…

2 hours ago

ಕೇಂದ್ರದ ವಿರುದ್ಧ ರಾಹುಲ್‌ ಗಾಂಧಿ ಮತ್ತೆ ವಾಗ್ದಾಳಿ

ನವದೆಹಲಿ: ಭಾರತ-ಅಮೇರಿಕಾ ಮಧ್ಯಂತರ ವ್ಯಾಪಾರ ಒಪ್ಪಂದ ಕುರಿತು ಕೇಂದ್ರ ಸರ್ಕಾರದ ಒಪ್ಪಂದ ಕುರಿತು ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ನಾಯಕ…

2 hours ago

ಬಾಂಗ್ಲಾ ನೂತನ ಪ್ರಧಾನಿ ಪ್ರಮಾಣ ವಚನಕ್ಕೆ ಭಾರತದ ಪ್ರತಿನಿಧಿಯಾಗಿ ಸ್ಪೀಕರ್‌ ಓಂ ಬಿರ್ಲಾ

ನವದೆಹಲಿ: ಬಾಂಗ್ಲಾದೇಶದ ನೂತನ ಸರ್ಕಾರದ ಪ್ರಧಾನಿಯಾಗಿ ತಾರಿಕ್‌ ರೆಹಮಾನ್‌ ಅವರು ಪ್ರಮಾಣವಚನ ಸ್ವೀಕರಿಸಲಿರುವ ಕಾರ್ಯಕ್ರಮದಲ್ಲಿ ಭಾರತದ ಪರವಾಗಿ ಲೋಕಸಭಾ ಸ್ಪೀಕರ್‌…

3 hours ago

ಕೆನಡಾದಲ್ಲಿ ಹತ್ಯೆಯಾಗಿದ್ದ ಐಟಿ ಉದ್ಯೋಗಿ ಚಂದನ್‌ ಮೃತದೇಹ ಸ್ವಗ್ರಾಮಕ್ಕೆ

ಬೆಂಗಳೂರು: ಕೆನಡಾದಲ್ಲಿ ಐಟಿ ಉದ್ಯೋಗಿ ಚಂದನ್‌ ಕುಮಾರ್‌ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ರಾತ್ರಿ ಸ್ವಗ್ರಾಮ ತ್ಯಾಮಗೊಂಡ್ಲುಗೆ ಚಂದನ್‌…

3 hours ago

ಕೋಲಾರದಲ್ಲಿ ನಾಳೆ ಟಾಟಾ ಹೆಲಿಕಾಪ್ಟರ್‌ ಘಟಕ ಉದ್ಘಾಟಿಸಲಿರುವ ಪ್ರಧಾನಿ ಮೋದಿ

ನವದೆಹಲಿ: ಕೋಲಾರ ಜಿಲ್ಲೆಯ ವೇಮಗಲ್‌ನಲ್ಲಿ ಟಾಟಾ ಏರ್‌ಬಸ್‌ ಲಘು ಹೆಲಿಕಾಪ್ಟರ್‌ ಅಂತಿಮ ಜೋಡಣೆ ಘಟಕವನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ…

3 hours ago

ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್‌ಆರ್‌ಟಿಸಿ ಬಸ್: ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

ಮೈಸೂರು: ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್‌ಆರ್‌ಟಿಸಿ ಬಸ್ಸೊಂದು ಏಕಾಏಕಿ ಮುಂದೆ ಚಲಿಸುತ್ತಿದ್ದ ಮತ್ತೊಂದು ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದಿರುವ…

12 hours ago