ಕ್ರೀಡೆ

ಶ್ರೇಯಂಕಾ, ಮನ್ನತ್ ಸ್ಪಿನ್ ಮ್ಯಾಜಿಕ್‌: ಭಾರತದ ಮಡಿಲಿಗೆ ಎಮರ್ಜಿಂಗ್ ಏಷ್ಯಾ ಕಪ್ ಪಟ್ಟ

ಮಾಂಗ್ ಕಾಕ್: ಎಸಿಸಿ ಮಹಿಳಾ ಉದಯೋನ್ಮುಖ ತಂಡಗಳ ಏಷ್ಯಾ ಕಪ್ 2023 ಕೂಟದಲ್ಲಿ ಭಾರತ ಎ ತಂಡವು ಫೈನಲ್ ನಲ್ಲಿ ಬಾಂಗ್ಲಾದೇಶವನ್ನು 31 ರನ್‌ ಗಳಿಂದ ಮಣಿಸಿ ಚಾಂಪಿಯನ್ಸ್ ಪಟ್ಟವನ್ನು ಅಲಂಕರಿಸಿದೆ.

ಮೊದಲು ಬ್ಯಾಟ್‌ ಮಾಡಿದ ಭಾರತ 20 ಓವರ್‌ ಗಳಲ್ಲಿ 7 ವಿಕೆಟ್‌ ಗಳನ್ನು ಕಳೆದುಕೊಂಡು 127 ರನ್‌ ಗಳಿಸಿತ್ತು. ಕನಿಷ್ಠ ಮೊತ್ತವನ್ನು ದಾಖಲಿಸಿದ ಟೀಮ್‌ ಇಂಡಿಯಾ ಬೌಲಿಂಗ್‌ ವಿಭಾಗದಲ್ಲಿ ಬಲಿಷ್ಠ ಆಟವನ್ನಾಡಿ ಚಾಂಪಿಯನ್ಸ್‌ ಪಟ್ಟವನ್ನು ತನ್ನದಾಗಿಸಿಕೊಂಡಿದೆ.

ಟೀಮ್‌ ಇಂಡಿಯಾದ ಪರವಾಗಿ ವೃಂದಾ ದಿನೇಶ್ 36 ರನ್‌ ಗಳಿಸಿದರೆ, ಕನಿಕಾ ಅಹುಜಾ 30 ರನ್‌ ಗಳಿಸಿದರು. ಉಳಿದ ಆಟಗಾರರು ಹೆಚ್ಚು ಹೊತ್ತು ಕ್ರಿಸ್‌ ನಲ್ಲಿ ನಿಲ್ಲದೆ ಎರಡಂಕಿ ರನ್ ಗಳಿಸಿ ಔಟಾದರು.‌

ಅಲ್ಪ ಮೊತ್ತದ ಸವಾಲು ಬೆನ್ನಟ್ಟಲು ಬ್ಯಾಟಿಂಗ್‌ ಗಿಳಿದ ಬಾಂಗ್ಲಾ ಆಟಗಾರರು ಆರಂಭದಲ್ಲೇ ಭಾರತದ ಸ್ಪಿನ್ ಜಾಲದಲ್ಲಿ ಸಿಲುಕಿಕೊಂಡು ವಿಕೆಟ್‌ ಒಪ್ಪಿಸಿದರು. ಸೋಭಾನ ಮೊಸ್ತರಿ (16 ರನ್‌), ಸತಿ ರಾಣಿ ‌ (13 ರನ್) ತಂಡದ ಪರವಾಗಿ ಹೆಚ್ಚು ರನ್‌ ಗಳಿಸಿದರು. ನಹಿದಾ ಆಕ್ತರ್ 17 ರನ್‌ ಗಳಿಸಿ ಕೊನೆಯವರೆಗೂ ಇದ್ದರೂ ಉಳಿದ ಆಟಗಾರರು ಅವರಿಗೆ ಸಾಥ್‌ ನೀಡಲು ಆಗಿಲ್ಲ. ಅಂತಿಮವಾಗಿ ಬಾಂಗ್ಲಾ 19.2 ಓವರ್‌ ಗಳಲ್ಲಿ 96 ರನ್‌ ಗಳಿಸಿ ಸರ್ವಪತನವಾಯಿತು.

ಭಾರತದ ಪರವಾಗಿ ಕನ್ನಡತಿ ಶ್ರೇಯಾಂಕಾ ಪಾಟೀಲ್ 4 ವಿಕೆಟ್‌ ಗಳನ್ನು ಪಡೆದು ಮಿಂಚಿದರೆ, ಮನ್ನತ್ ಕಶ್ಯಪ್ 3 ಮಹತ್ವದ ವಿಕೆಟ್‌ ಗಳನ್ನು ಪಡೆದರು. ಇನ್ನು ಕನಿಕಾ ಅಹುಜಾ 2 ವಿಕೆಟ್‌ ಗಳನ್ನು ಪಡೆದರು.

ಒಂದು ಪಂದ್ಯ ಆಡಿ ಫೈನಲ್‌ ಗೆ ಬಂದಿದ್ದ ಭಾರತ: ಎಸಿಸಿ ಮಹಿಳಾ ಉದಯೋನ್ಮುಖ ತಂಡಗಳ ಏಷ್ಯಾ ಕಪ್ ನ ಬಹುತೇಕ ಪಂದ್ಯಗಳಿಗೆ ಮಳೆ ಅಡ್ಡಿ ಆಗಿತ್ತು. ಇದರಿಂದ ಕೆಲ ಪಂದ್ಯಗಳು ರದ್ದುಗೊಂಡಿತ್ತು. ಭಾರತ ಮೊದಲು ಹಾಂಕಾಂಗ್‌ ತಂಡದ ವಿರುದ್ಧ ಭರ್ಜರಿ ಜಯ ಸಾಧಿಸಿತ್ತು. ಆ ಬಳಿಕ ಪಾಕಿಸ್ತಾನ, ನೇಪಾಳ ವಿರುದ್ಧದ ಭಾರತದ ಪಂದ್ಯಗಳು ರದ್ದಾಗಿದ್ದವು. ಶ್ರೀಲಂಕಾ ಎ ತಂಡದ ವಿರುದ್ಧದ ಸೆಮಿ ಫೈನಲ್ ಪಂದ್ಯವೂ ಮಳೆಯಿಂದ ರದ್ದಾದ ಕಾರಣ ಉತ್ತಮ ರನ್ ರೇಟ್ ಹೊಂದಿದ್ದ ಭಾರತವು ಫೈನಲ್ ಗೆ ಅರ್ಹತೆ ಪಡೆದಿತ್ತು.

andolanait

Recent Posts

ರಾಷ್ಟ್ರಪಿತನ ‘ಸತ್ಯಾನ್ವೇಷಣೆ’ಗೆ ನೂರು ವರುಷ

ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ಬೆಂಗಳೂರಿನ ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಸಹಭಾಗಿತ್ವದಲಿ ಎಳೆಯ ಮಕಳ ಅಂಗಳಕೆ…

2 mins ago

ಡಿಜಿಟಲ್ ವೇದಿಕೆಗಳಲ್ಲಿ ಅಶ್ಲೀಲತೆಯ ಆರ್ಭಟ

ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳು ಸೃಜನಶೀಲತೆಯ ವೇದಿಕೆಗಳಾಗುವ ಬದಲು ಹಣದಾಸೆಗಾಗಿ ಅಶ್ಲೀಲತೆಯನ್ನು ಪ್ರದರ್ಶಿಸುವ ಮಾರುಕಟ್ಟೆಗಳಾಗುತ್ತಿರುವುದು ಆತಂಕಕಾರಿ ವಿದ್ಯಮಾನ. ಪ್ರಭಾವಿ ವ್ಯಕ್ತಿಗಳು…

8 mins ago

ಮೆದಗನಾಣೆ ಗ್ರಾಮಕ್ಕೆ ಕೊನೆಗೂ ವಿದ್ಯುತ್ ಸಂಪರ್ಕ

೮ ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ಆದಿವಾಸಿ ಹೋರಾಟ ಸಮಿತಿ ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯಮೆದಗನಾಣೆ…

11 mins ago

ಚಾರಣಕ್ಕೆ ನೇಚರ್ ಗೈಡ್ ಕಡ್ಡಾಯ

ಜಿಪಿಎಸ್ ವಾಕಿಟಾಕಿ ಇಲ್ಲದೆ ಚಾರಣಕ್ಕೆ ಅವಕಾಶವಿಲ್ಲ ಎಸ್‌ಒಪಿ ಬಿಡುಗಡೆ ಮಾಡಿದ ಸಚಿವ ಈಶ್ವರ್‌ ಖಂಡ್ರೆ  ಬೆಂಗಳೂರು: ರಾಜ್ಯದಲ್ಲಿ ಅರಣ್ಯ ಇಲಾಖೆ…

16 mins ago

ಮೇ-1ರಿಂದ ಮೈಸೂರು-ಹೈದರಾಬಾದ್‌ಗೆ ಮತ್ತೊಂದು ವಿಮಾನ ಸಂಚಾರ: ಯದುವೀರ್

ಮೈಸೂರು : ಸಾಂಸ್ಕ ತಿಕ ನಗರಿಯ ಜನತೆಯ ಅನುಕೂಲಕ್ಕಾಗಿ ಮೈಸೂರಿನಿಂದ ಮುತ್ತಿನ ನಗರಿ ಹೈದರಾಬಾದ್‌ಗೆ ಮತ್ತೊಂದು ವಿಮಾನ ಸಂಚಾರ ಅತಿ…

10 hours ago