ಕ್ರೀಡೆ

ಶ್ರೇಯಂಕಾ, ಮನ್ನತ್ ಸ್ಪಿನ್ ಮ್ಯಾಜಿಕ್‌: ಭಾರತದ ಮಡಿಲಿಗೆ ಎಮರ್ಜಿಂಗ್ ಏಷ್ಯಾ ಕಪ್ ಪಟ್ಟ

ಮಾಂಗ್ ಕಾಕ್: ಎಸಿಸಿ ಮಹಿಳಾ ಉದಯೋನ್ಮುಖ ತಂಡಗಳ ಏಷ್ಯಾ ಕಪ್ 2023 ಕೂಟದಲ್ಲಿ ಭಾರತ ಎ ತಂಡವು ಫೈನಲ್ ನಲ್ಲಿ ಬಾಂಗ್ಲಾದೇಶವನ್ನು 31 ರನ್‌ ಗಳಿಂದ ಮಣಿಸಿ ಚಾಂಪಿಯನ್ಸ್ ಪಟ್ಟವನ್ನು ಅಲಂಕರಿಸಿದೆ.

ಮೊದಲು ಬ್ಯಾಟ್‌ ಮಾಡಿದ ಭಾರತ 20 ಓವರ್‌ ಗಳಲ್ಲಿ 7 ವಿಕೆಟ್‌ ಗಳನ್ನು ಕಳೆದುಕೊಂಡು 127 ರನ್‌ ಗಳಿಸಿತ್ತು. ಕನಿಷ್ಠ ಮೊತ್ತವನ್ನು ದಾಖಲಿಸಿದ ಟೀಮ್‌ ಇಂಡಿಯಾ ಬೌಲಿಂಗ್‌ ವಿಭಾಗದಲ್ಲಿ ಬಲಿಷ್ಠ ಆಟವನ್ನಾಡಿ ಚಾಂಪಿಯನ್ಸ್‌ ಪಟ್ಟವನ್ನು ತನ್ನದಾಗಿಸಿಕೊಂಡಿದೆ.

ಟೀಮ್‌ ಇಂಡಿಯಾದ ಪರವಾಗಿ ವೃಂದಾ ದಿನೇಶ್ 36 ರನ್‌ ಗಳಿಸಿದರೆ, ಕನಿಕಾ ಅಹುಜಾ 30 ರನ್‌ ಗಳಿಸಿದರು. ಉಳಿದ ಆಟಗಾರರು ಹೆಚ್ಚು ಹೊತ್ತು ಕ್ರಿಸ್‌ ನಲ್ಲಿ ನಿಲ್ಲದೆ ಎರಡಂಕಿ ರನ್ ಗಳಿಸಿ ಔಟಾದರು.‌

ಅಲ್ಪ ಮೊತ್ತದ ಸವಾಲು ಬೆನ್ನಟ್ಟಲು ಬ್ಯಾಟಿಂಗ್‌ ಗಿಳಿದ ಬಾಂಗ್ಲಾ ಆಟಗಾರರು ಆರಂಭದಲ್ಲೇ ಭಾರತದ ಸ್ಪಿನ್ ಜಾಲದಲ್ಲಿ ಸಿಲುಕಿಕೊಂಡು ವಿಕೆಟ್‌ ಒಪ್ಪಿಸಿದರು. ಸೋಭಾನ ಮೊಸ್ತರಿ (16 ರನ್‌), ಸತಿ ರಾಣಿ ‌ (13 ರನ್) ತಂಡದ ಪರವಾಗಿ ಹೆಚ್ಚು ರನ್‌ ಗಳಿಸಿದರು. ನಹಿದಾ ಆಕ್ತರ್ 17 ರನ್‌ ಗಳಿಸಿ ಕೊನೆಯವರೆಗೂ ಇದ್ದರೂ ಉಳಿದ ಆಟಗಾರರು ಅವರಿಗೆ ಸಾಥ್‌ ನೀಡಲು ಆಗಿಲ್ಲ. ಅಂತಿಮವಾಗಿ ಬಾಂಗ್ಲಾ 19.2 ಓವರ್‌ ಗಳಲ್ಲಿ 96 ರನ್‌ ಗಳಿಸಿ ಸರ್ವಪತನವಾಯಿತು.

ಭಾರತದ ಪರವಾಗಿ ಕನ್ನಡತಿ ಶ್ರೇಯಾಂಕಾ ಪಾಟೀಲ್ 4 ವಿಕೆಟ್‌ ಗಳನ್ನು ಪಡೆದು ಮಿಂಚಿದರೆ, ಮನ್ನತ್ ಕಶ್ಯಪ್ 3 ಮಹತ್ವದ ವಿಕೆಟ್‌ ಗಳನ್ನು ಪಡೆದರು. ಇನ್ನು ಕನಿಕಾ ಅಹುಜಾ 2 ವಿಕೆಟ್‌ ಗಳನ್ನು ಪಡೆದರು.

ಒಂದು ಪಂದ್ಯ ಆಡಿ ಫೈನಲ್‌ ಗೆ ಬಂದಿದ್ದ ಭಾರತ: ಎಸಿಸಿ ಮಹಿಳಾ ಉದಯೋನ್ಮುಖ ತಂಡಗಳ ಏಷ್ಯಾ ಕಪ್ ನ ಬಹುತೇಕ ಪಂದ್ಯಗಳಿಗೆ ಮಳೆ ಅಡ್ಡಿ ಆಗಿತ್ತು. ಇದರಿಂದ ಕೆಲ ಪಂದ್ಯಗಳು ರದ್ದುಗೊಂಡಿತ್ತು. ಭಾರತ ಮೊದಲು ಹಾಂಕಾಂಗ್‌ ತಂಡದ ವಿರುದ್ಧ ಭರ್ಜರಿ ಜಯ ಸಾಧಿಸಿತ್ತು. ಆ ಬಳಿಕ ಪಾಕಿಸ್ತಾನ, ನೇಪಾಳ ವಿರುದ್ಧದ ಭಾರತದ ಪಂದ್ಯಗಳು ರದ್ದಾಗಿದ್ದವು. ಶ್ರೀಲಂಕಾ ಎ ತಂಡದ ವಿರುದ್ಧದ ಸೆಮಿ ಫೈನಲ್ ಪಂದ್ಯವೂ ಮಳೆಯಿಂದ ರದ್ದಾದ ಕಾರಣ ಉತ್ತಮ ರನ್ ರೇಟ್ ಹೊಂದಿದ್ದ ಭಾರತವು ಫೈನಲ್ ಗೆ ಅರ್ಹತೆ ಪಡೆದಿತ್ತು.

andolanait

Recent Posts

ಅರಮನೆ ಬಳಿ ಹೀಲಿಯಂ ಸ್ಫೋಟ ಪ್ರಕರಣ: ಎನ್‌ಐಎ ತನಿಖೆಗೆ ಪ್ರಮೋದ್‌ ಮುತಾಲಿಕ್‌ ಆಗ್ರಹ

ಮೈಸೂರು: ಅರಮನೆ ಬಳಿ ಹೀಲಿಯಂ ಸಿಲಿಂಡರ್‌ ಸ್ಫೋಟ ಸಂಭವಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್‌ ಮುತಾಲಿಕ್‌ ಪ್ರತಿಕ್ರಿಯೆ ನೀಡಿದ್ದು,…

14 mins ago

ಚಿತ್ರದುರ್ಗ ಮುರುಘಾ ಶರಣರ ವಿರುದ್ಧ ಮತ್ತೊಂದು ಗಂಭೀರ ಆರೋಪ

ಚಿತ್ರದುರ್ಗ: ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿ ಬಂದಿದೆ. ನ್ಯಾಯಾಲಯದ ಆದೇಶವನ್ನು ಮೀರಿ…

38 mins ago

ಹೊಗೇನಕಲ್ ಜಲಪಾತ ವೀಕ್ಷಣೆಗೆ ಪ್ರವಾಸಿಗರ ಲಗ್ಗೆ: ಪ್ರಕೃತಿ ಸೌಂದರ್ಯಕ್ಕೆ ಮನಸೋತ ಜನತೆ

ಹನೂರು: ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಬರುತ್ತಿದ್ದು, ಇಂದು…

55 mins ago

ಕಾಡುಹಂದಿ ಬೇಟೆಗಾಗಿ ಮನೆಯಲ್ಲಿ ಸಂಗ್ರಹಿಸಿದ್ದ ಸಿಡಿಮದ್ದು ಸಿಡಿದು ವ್ಯಕ್ತಿಗೆ ಗಂಭೀರ ಗಾಯ

ಚಾಮರಾಜನಗರ: ತಾಲ್ಲೂಕಿನ ಅಮಚವಾಡಿ ಗ್ರಾಮದಲ್ಲಿ ಸಿಡಿಮದ್ದು ಸಿಡಿದು ವ್ಯಕ್ತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಸಿಡಿಮದ್ದು ಸಿಡಿದು ಪೆದ್ದಿ ಅಲಿಯಾಸ್‌…

1 hour ago

ಓದುಗರ ಪತ್ರ:  ತಡೆಗೋಡೆ ನಿರ್ಮಿಸಿ

ಎಚ್.ಡಿ.ಕೋಟೆ -ಗದ್ದಿಗೆ ಮುಖ್ಯ ರಸ್ತೆಯಲ್ಲಿರುವ ಪೈಲ್ವಾನ್ ಕಾಲೋನಿ ಗ್ರಾಮದಲ್ಲಿರುವ ನೀರು ಕಾಲುವೆಗೆ ತಡೆಗೋಡೆ ಇಲ್ಲಿದೇ ತೀವ್ರ ತೊಂದರೆಯಾಗಿದೆ. ಎಚ್.ಡಿ.ಕೋಟೆ ಮತ್ತು…

2 hours ago

ಓದುಗರ ಪತ್ರ:  ಗಂಗೋತ್ರಿ ವಿದ್ಯಾರ್ಥಿನಿಲಯಗಳಿಗೆ ಮೂಲ ಸೌಕರ್ಯ ಬೇಕಿದೆ

ಮೈಸೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಮತ್ತು ಸಂಶೋಧಕರ ಪುರುಷ ಮತ್ತು ಮಹಿಳಾ ವಿದ್ಯಾರ್ಥಿ ನಿಲಯಗಳಲ್ಲಿ, ಶುದ್ಧ ಕುಡಿಯುವ ನೀರಿನ ಫಿಲ್ಟರ್, ಬಿಸಿನೀರಿನ…

2 hours ago