ಕ್ರೀಡೆ

ಶ್ರೇಯಂಕಾ, ಮನ್ನತ್ ಸ್ಪಿನ್ ಮ್ಯಾಜಿಕ್‌: ಭಾರತದ ಮಡಿಲಿಗೆ ಎಮರ್ಜಿಂಗ್ ಏಷ್ಯಾ ಕಪ್ ಪಟ್ಟ

ಮಾಂಗ್ ಕಾಕ್: ಎಸಿಸಿ ಮಹಿಳಾ ಉದಯೋನ್ಮುಖ ತಂಡಗಳ ಏಷ್ಯಾ ಕಪ್ 2023 ಕೂಟದಲ್ಲಿ ಭಾರತ ಎ ತಂಡವು ಫೈನಲ್ ನಲ್ಲಿ ಬಾಂಗ್ಲಾದೇಶವನ್ನು 31 ರನ್‌ ಗಳಿಂದ ಮಣಿಸಿ ಚಾಂಪಿಯನ್ಸ್ ಪಟ್ಟವನ್ನು ಅಲಂಕರಿಸಿದೆ.

ಮೊದಲು ಬ್ಯಾಟ್‌ ಮಾಡಿದ ಭಾರತ 20 ಓವರ್‌ ಗಳಲ್ಲಿ 7 ವಿಕೆಟ್‌ ಗಳನ್ನು ಕಳೆದುಕೊಂಡು 127 ರನ್‌ ಗಳಿಸಿತ್ತು. ಕನಿಷ್ಠ ಮೊತ್ತವನ್ನು ದಾಖಲಿಸಿದ ಟೀಮ್‌ ಇಂಡಿಯಾ ಬೌಲಿಂಗ್‌ ವಿಭಾಗದಲ್ಲಿ ಬಲಿಷ್ಠ ಆಟವನ್ನಾಡಿ ಚಾಂಪಿಯನ್ಸ್‌ ಪಟ್ಟವನ್ನು ತನ್ನದಾಗಿಸಿಕೊಂಡಿದೆ.

ಟೀಮ್‌ ಇಂಡಿಯಾದ ಪರವಾಗಿ ವೃಂದಾ ದಿನೇಶ್ 36 ರನ್‌ ಗಳಿಸಿದರೆ, ಕನಿಕಾ ಅಹುಜಾ 30 ರನ್‌ ಗಳಿಸಿದರು. ಉಳಿದ ಆಟಗಾರರು ಹೆಚ್ಚು ಹೊತ್ತು ಕ್ರಿಸ್‌ ನಲ್ಲಿ ನಿಲ್ಲದೆ ಎರಡಂಕಿ ರನ್ ಗಳಿಸಿ ಔಟಾದರು.‌

ಅಲ್ಪ ಮೊತ್ತದ ಸವಾಲು ಬೆನ್ನಟ್ಟಲು ಬ್ಯಾಟಿಂಗ್‌ ಗಿಳಿದ ಬಾಂಗ್ಲಾ ಆಟಗಾರರು ಆರಂಭದಲ್ಲೇ ಭಾರತದ ಸ್ಪಿನ್ ಜಾಲದಲ್ಲಿ ಸಿಲುಕಿಕೊಂಡು ವಿಕೆಟ್‌ ಒಪ್ಪಿಸಿದರು. ಸೋಭಾನ ಮೊಸ್ತರಿ (16 ರನ್‌), ಸತಿ ರಾಣಿ ‌ (13 ರನ್) ತಂಡದ ಪರವಾಗಿ ಹೆಚ್ಚು ರನ್‌ ಗಳಿಸಿದರು. ನಹಿದಾ ಆಕ್ತರ್ 17 ರನ್‌ ಗಳಿಸಿ ಕೊನೆಯವರೆಗೂ ಇದ್ದರೂ ಉಳಿದ ಆಟಗಾರರು ಅವರಿಗೆ ಸಾಥ್‌ ನೀಡಲು ಆಗಿಲ್ಲ. ಅಂತಿಮವಾಗಿ ಬಾಂಗ್ಲಾ 19.2 ಓವರ್‌ ಗಳಲ್ಲಿ 96 ರನ್‌ ಗಳಿಸಿ ಸರ್ವಪತನವಾಯಿತು.

ಭಾರತದ ಪರವಾಗಿ ಕನ್ನಡತಿ ಶ್ರೇಯಾಂಕಾ ಪಾಟೀಲ್ 4 ವಿಕೆಟ್‌ ಗಳನ್ನು ಪಡೆದು ಮಿಂಚಿದರೆ, ಮನ್ನತ್ ಕಶ್ಯಪ್ 3 ಮಹತ್ವದ ವಿಕೆಟ್‌ ಗಳನ್ನು ಪಡೆದರು. ಇನ್ನು ಕನಿಕಾ ಅಹುಜಾ 2 ವಿಕೆಟ್‌ ಗಳನ್ನು ಪಡೆದರು.

ಒಂದು ಪಂದ್ಯ ಆಡಿ ಫೈನಲ್‌ ಗೆ ಬಂದಿದ್ದ ಭಾರತ: ಎಸಿಸಿ ಮಹಿಳಾ ಉದಯೋನ್ಮುಖ ತಂಡಗಳ ಏಷ್ಯಾ ಕಪ್ ನ ಬಹುತೇಕ ಪಂದ್ಯಗಳಿಗೆ ಮಳೆ ಅಡ್ಡಿ ಆಗಿತ್ತು. ಇದರಿಂದ ಕೆಲ ಪಂದ್ಯಗಳು ರದ್ದುಗೊಂಡಿತ್ತು. ಭಾರತ ಮೊದಲು ಹಾಂಕಾಂಗ್‌ ತಂಡದ ವಿರುದ್ಧ ಭರ್ಜರಿ ಜಯ ಸಾಧಿಸಿತ್ತು. ಆ ಬಳಿಕ ಪಾಕಿಸ್ತಾನ, ನೇಪಾಳ ವಿರುದ್ಧದ ಭಾರತದ ಪಂದ್ಯಗಳು ರದ್ದಾಗಿದ್ದವು. ಶ್ರೀಲಂಕಾ ಎ ತಂಡದ ವಿರುದ್ಧದ ಸೆಮಿ ಫೈನಲ್ ಪಂದ್ಯವೂ ಮಳೆಯಿಂದ ರದ್ದಾದ ಕಾರಣ ಉತ್ತಮ ರನ್ ರೇಟ್ ಹೊಂದಿದ್ದ ಭಾರತವು ಫೈನಲ್ ಗೆ ಅರ್ಹತೆ ಪಡೆದಿತ್ತು.

andolanait

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

11 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

11 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

12 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

14 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

17 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

17 hours ago