ಕ್ರೀಡೆ

ಶ್ರೇಯಂಕಾ, ಮನ್ನತ್ ಸ್ಪಿನ್ ಮ್ಯಾಜಿಕ್‌: ಭಾರತದ ಮಡಿಲಿಗೆ ಎಮರ್ಜಿಂಗ್ ಏಷ್ಯಾ ಕಪ್ ಪಟ್ಟ

ಮಾಂಗ್ ಕಾಕ್: ಎಸಿಸಿ ಮಹಿಳಾ ಉದಯೋನ್ಮುಖ ತಂಡಗಳ ಏಷ್ಯಾ ಕಪ್ 2023 ಕೂಟದಲ್ಲಿ ಭಾರತ ಎ ತಂಡವು ಫೈನಲ್ ನಲ್ಲಿ ಬಾಂಗ್ಲಾದೇಶವನ್ನು 31 ರನ್‌ ಗಳಿಂದ ಮಣಿಸಿ ಚಾಂಪಿಯನ್ಸ್ ಪಟ್ಟವನ್ನು ಅಲಂಕರಿಸಿದೆ.

ಮೊದಲು ಬ್ಯಾಟ್‌ ಮಾಡಿದ ಭಾರತ 20 ಓವರ್‌ ಗಳಲ್ಲಿ 7 ವಿಕೆಟ್‌ ಗಳನ್ನು ಕಳೆದುಕೊಂಡು 127 ರನ್‌ ಗಳಿಸಿತ್ತು. ಕನಿಷ್ಠ ಮೊತ್ತವನ್ನು ದಾಖಲಿಸಿದ ಟೀಮ್‌ ಇಂಡಿಯಾ ಬೌಲಿಂಗ್‌ ವಿಭಾಗದಲ್ಲಿ ಬಲಿಷ್ಠ ಆಟವನ್ನಾಡಿ ಚಾಂಪಿಯನ್ಸ್‌ ಪಟ್ಟವನ್ನು ತನ್ನದಾಗಿಸಿಕೊಂಡಿದೆ.

ಟೀಮ್‌ ಇಂಡಿಯಾದ ಪರವಾಗಿ ವೃಂದಾ ದಿನೇಶ್ 36 ರನ್‌ ಗಳಿಸಿದರೆ, ಕನಿಕಾ ಅಹುಜಾ 30 ರನ್‌ ಗಳಿಸಿದರು. ಉಳಿದ ಆಟಗಾರರು ಹೆಚ್ಚು ಹೊತ್ತು ಕ್ರಿಸ್‌ ನಲ್ಲಿ ನಿಲ್ಲದೆ ಎರಡಂಕಿ ರನ್ ಗಳಿಸಿ ಔಟಾದರು.‌

ಅಲ್ಪ ಮೊತ್ತದ ಸವಾಲು ಬೆನ್ನಟ್ಟಲು ಬ್ಯಾಟಿಂಗ್‌ ಗಿಳಿದ ಬಾಂಗ್ಲಾ ಆಟಗಾರರು ಆರಂಭದಲ್ಲೇ ಭಾರತದ ಸ್ಪಿನ್ ಜಾಲದಲ್ಲಿ ಸಿಲುಕಿಕೊಂಡು ವಿಕೆಟ್‌ ಒಪ್ಪಿಸಿದರು. ಸೋಭಾನ ಮೊಸ್ತರಿ (16 ರನ್‌), ಸತಿ ರಾಣಿ ‌ (13 ರನ್) ತಂಡದ ಪರವಾಗಿ ಹೆಚ್ಚು ರನ್‌ ಗಳಿಸಿದರು. ನಹಿದಾ ಆಕ್ತರ್ 17 ರನ್‌ ಗಳಿಸಿ ಕೊನೆಯವರೆಗೂ ಇದ್ದರೂ ಉಳಿದ ಆಟಗಾರರು ಅವರಿಗೆ ಸಾಥ್‌ ನೀಡಲು ಆಗಿಲ್ಲ. ಅಂತಿಮವಾಗಿ ಬಾಂಗ್ಲಾ 19.2 ಓವರ್‌ ಗಳಲ್ಲಿ 96 ರನ್‌ ಗಳಿಸಿ ಸರ್ವಪತನವಾಯಿತು.

ಭಾರತದ ಪರವಾಗಿ ಕನ್ನಡತಿ ಶ್ರೇಯಾಂಕಾ ಪಾಟೀಲ್ 4 ವಿಕೆಟ್‌ ಗಳನ್ನು ಪಡೆದು ಮಿಂಚಿದರೆ, ಮನ್ನತ್ ಕಶ್ಯಪ್ 3 ಮಹತ್ವದ ವಿಕೆಟ್‌ ಗಳನ್ನು ಪಡೆದರು. ಇನ್ನು ಕನಿಕಾ ಅಹುಜಾ 2 ವಿಕೆಟ್‌ ಗಳನ್ನು ಪಡೆದರು.

ಒಂದು ಪಂದ್ಯ ಆಡಿ ಫೈನಲ್‌ ಗೆ ಬಂದಿದ್ದ ಭಾರತ: ಎಸಿಸಿ ಮಹಿಳಾ ಉದಯೋನ್ಮುಖ ತಂಡಗಳ ಏಷ್ಯಾ ಕಪ್ ನ ಬಹುತೇಕ ಪಂದ್ಯಗಳಿಗೆ ಮಳೆ ಅಡ್ಡಿ ಆಗಿತ್ತು. ಇದರಿಂದ ಕೆಲ ಪಂದ್ಯಗಳು ರದ್ದುಗೊಂಡಿತ್ತು. ಭಾರತ ಮೊದಲು ಹಾಂಕಾಂಗ್‌ ತಂಡದ ವಿರುದ್ಧ ಭರ್ಜರಿ ಜಯ ಸಾಧಿಸಿತ್ತು. ಆ ಬಳಿಕ ಪಾಕಿಸ್ತಾನ, ನೇಪಾಳ ವಿರುದ್ಧದ ಭಾರತದ ಪಂದ್ಯಗಳು ರದ್ದಾಗಿದ್ದವು. ಶ್ರೀಲಂಕಾ ಎ ತಂಡದ ವಿರುದ್ಧದ ಸೆಮಿ ಫೈನಲ್ ಪಂದ್ಯವೂ ಮಳೆಯಿಂದ ರದ್ದಾದ ಕಾರಣ ಉತ್ತಮ ರನ್ ರೇಟ್ ಹೊಂದಿದ್ದ ಭಾರತವು ಫೈನಲ್ ಗೆ ಅರ್ಹತೆ ಪಡೆದಿತ್ತು.

andolanait

Recent Posts

3,705 ಕೋಟಿ ರೂ. ಪರಿಹಾರ ಕೋರಿ ಕೇಂದ್ರಕ್ಕೆ ಮೆಮೊರಾಂಡಂ ಸಲ್ಲಿಸಿದ ರಾಜ್ಯ ಸರ್ಕಾರ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…

7 hours ago

ಹನೂರು | ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಕಾರ್ಮಿಕ ಸಾವು

ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…

8 hours ago

ಗ್ರಾಮದ ಸ್ವಚ್ಛತೆ ನೋಡಿಕೊಳ್ಳುವವರೇ ಅನೈರ್ಮಲ್ಯಕ್ಕೆ ಕಾರಣ?

ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…

9 hours ago

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

14 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

21 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

21 hours ago