ಕ್ರೀಡೆ

ಶ್ರೇಯಂಕಾ, ಮನ್ನತ್ ಸ್ಪಿನ್ ಮ್ಯಾಜಿಕ್‌: ಭಾರತದ ಮಡಿಲಿಗೆ ಎಮರ್ಜಿಂಗ್ ಏಷ್ಯಾ ಕಪ್ ಪಟ್ಟ

ಮಾಂಗ್ ಕಾಕ್: ಎಸಿಸಿ ಮಹಿಳಾ ಉದಯೋನ್ಮುಖ ತಂಡಗಳ ಏಷ್ಯಾ ಕಪ್ 2023 ಕೂಟದಲ್ಲಿ ಭಾರತ ಎ ತಂಡವು ಫೈನಲ್ ನಲ್ಲಿ ಬಾಂಗ್ಲಾದೇಶವನ್ನು 31 ರನ್‌ ಗಳಿಂದ ಮಣಿಸಿ ಚಾಂಪಿಯನ್ಸ್ ಪಟ್ಟವನ್ನು ಅಲಂಕರಿಸಿದೆ.

ಮೊದಲು ಬ್ಯಾಟ್‌ ಮಾಡಿದ ಭಾರತ 20 ಓವರ್‌ ಗಳಲ್ಲಿ 7 ವಿಕೆಟ್‌ ಗಳನ್ನು ಕಳೆದುಕೊಂಡು 127 ರನ್‌ ಗಳಿಸಿತ್ತು. ಕನಿಷ್ಠ ಮೊತ್ತವನ್ನು ದಾಖಲಿಸಿದ ಟೀಮ್‌ ಇಂಡಿಯಾ ಬೌಲಿಂಗ್‌ ವಿಭಾಗದಲ್ಲಿ ಬಲಿಷ್ಠ ಆಟವನ್ನಾಡಿ ಚಾಂಪಿಯನ್ಸ್‌ ಪಟ್ಟವನ್ನು ತನ್ನದಾಗಿಸಿಕೊಂಡಿದೆ.

ಟೀಮ್‌ ಇಂಡಿಯಾದ ಪರವಾಗಿ ವೃಂದಾ ದಿನೇಶ್ 36 ರನ್‌ ಗಳಿಸಿದರೆ, ಕನಿಕಾ ಅಹುಜಾ 30 ರನ್‌ ಗಳಿಸಿದರು. ಉಳಿದ ಆಟಗಾರರು ಹೆಚ್ಚು ಹೊತ್ತು ಕ್ರಿಸ್‌ ನಲ್ಲಿ ನಿಲ್ಲದೆ ಎರಡಂಕಿ ರನ್ ಗಳಿಸಿ ಔಟಾದರು.‌

ಅಲ್ಪ ಮೊತ್ತದ ಸವಾಲು ಬೆನ್ನಟ್ಟಲು ಬ್ಯಾಟಿಂಗ್‌ ಗಿಳಿದ ಬಾಂಗ್ಲಾ ಆಟಗಾರರು ಆರಂಭದಲ್ಲೇ ಭಾರತದ ಸ್ಪಿನ್ ಜಾಲದಲ್ಲಿ ಸಿಲುಕಿಕೊಂಡು ವಿಕೆಟ್‌ ಒಪ್ಪಿಸಿದರು. ಸೋಭಾನ ಮೊಸ್ತರಿ (16 ರನ್‌), ಸತಿ ರಾಣಿ ‌ (13 ರನ್) ತಂಡದ ಪರವಾಗಿ ಹೆಚ್ಚು ರನ್‌ ಗಳಿಸಿದರು. ನಹಿದಾ ಆಕ್ತರ್ 17 ರನ್‌ ಗಳಿಸಿ ಕೊನೆಯವರೆಗೂ ಇದ್ದರೂ ಉಳಿದ ಆಟಗಾರರು ಅವರಿಗೆ ಸಾಥ್‌ ನೀಡಲು ಆಗಿಲ್ಲ. ಅಂತಿಮವಾಗಿ ಬಾಂಗ್ಲಾ 19.2 ಓವರ್‌ ಗಳಲ್ಲಿ 96 ರನ್‌ ಗಳಿಸಿ ಸರ್ವಪತನವಾಯಿತು.

ಭಾರತದ ಪರವಾಗಿ ಕನ್ನಡತಿ ಶ್ರೇಯಾಂಕಾ ಪಾಟೀಲ್ 4 ವಿಕೆಟ್‌ ಗಳನ್ನು ಪಡೆದು ಮಿಂಚಿದರೆ, ಮನ್ನತ್ ಕಶ್ಯಪ್ 3 ಮಹತ್ವದ ವಿಕೆಟ್‌ ಗಳನ್ನು ಪಡೆದರು. ಇನ್ನು ಕನಿಕಾ ಅಹುಜಾ 2 ವಿಕೆಟ್‌ ಗಳನ್ನು ಪಡೆದರು.

ಒಂದು ಪಂದ್ಯ ಆಡಿ ಫೈನಲ್‌ ಗೆ ಬಂದಿದ್ದ ಭಾರತ: ಎಸಿಸಿ ಮಹಿಳಾ ಉದಯೋನ್ಮುಖ ತಂಡಗಳ ಏಷ್ಯಾ ಕಪ್ ನ ಬಹುತೇಕ ಪಂದ್ಯಗಳಿಗೆ ಮಳೆ ಅಡ್ಡಿ ಆಗಿತ್ತು. ಇದರಿಂದ ಕೆಲ ಪಂದ್ಯಗಳು ರದ್ದುಗೊಂಡಿತ್ತು. ಭಾರತ ಮೊದಲು ಹಾಂಕಾಂಗ್‌ ತಂಡದ ವಿರುದ್ಧ ಭರ್ಜರಿ ಜಯ ಸಾಧಿಸಿತ್ತು. ಆ ಬಳಿಕ ಪಾಕಿಸ್ತಾನ, ನೇಪಾಳ ವಿರುದ್ಧದ ಭಾರತದ ಪಂದ್ಯಗಳು ರದ್ದಾಗಿದ್ದವು. ಶ್ರೀಲಂಕಾ ಎ ತಂಡದ ವಿರುದ್ಧದ ಸೆಮಿ ಫೈನಲ್ ಪಂದ್ಯವೂ ಮಳೆಯಿಂದ ರದ್ದಾದ ಕಾರಣ ಉತ್ತಮ ರನ್ ರೇಟ್ ಹೊಂದಿದ್ದ ಭಾರತವು ಫೈನಲ್ ಗೆ ಅರ್ಹತೆ ಪಡೆದಿತ್ತು.

andolanait

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

9 hours ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

9 hours ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

9 hours ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

9 hours ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

9 hours ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

1 day ago