ಕ್ರೀಡೆ

KKR ನ ಕ್ಯಾಪ್ಟನ್ ಆಗಿ ಶ್ರೇಯಸ್ ಅಯ್ಯರ್ ಮರುನೇಮಕ: ಉಪನಾಯಕನಾಗಿ ರಾಣಾ

೨೦೨೪ರಲ್ಲಿ ನಡೆಯುವ ಐಪಿಎಲ್‌ (ಇಂಡಿಯನ್‌ ಪ್ರೀಮಿಯರ್‌ ಲೀಗ್‌) ೧೭ ನೇ ಆವೃತ್ತಿಯಲ್ಲಿ ಕೆಕೆಆರ್‌ (ಕೊಲ್ಕತ್ತಾ ನೈಟ್‌ ರೈಡರ್ಸ್‌) ತಂಡದ ನಾಯಕಾಗಿ ಶ್ರೇಯಸ್‌ ಅಯ್ಯರ್‌ ಅವರು ಮುಂದುವರೆಯಲಿದ್ದಾರೆ ಎಂದು ಕೆಕೆಆರ್‌ನ ಸಿಇಒ ವೆಂಕಿ ಮೈಸೂರು ಅವರು ಇಂದು (ಗುರುವಾರ) ಘೋಷಿಸಿದ್ದಾರೆ.

ಮಾಜಿ ನಾಯಕ ನಿತೀಶ್‌ ರಾಣಾ ಅವರು ಕೆಕೆಆರ್‌ ನ ಉಪ ನಾಯಕರಾಗಿ ನೇಮಕೊಂಡಿದ್ದಾರೆ.

ಈ ಕುರಿತು ಮಾತನಾಡಿರುವ ಸಿಇಒ ಅವರು, “ಗಾಯದ ಕಾರಣದಿಂದ ಶ್ರೇಯಸ್ ಐಪಿಎಲ್ 2023 ರ ಸೀಸನ್‌ಗೆ ಅಲಭ್ಯರಾಗಿದ್ದು ನಿಜಕ್ಕೂ ದುರದೃಷ್ಟಕರ. ಅವರು ಮತ್ತೆ ನಾಯಕನಾಗಿ ಚುಕ್ಕಾಣಿ ಹಿಡಿದಿರುವುದು ನಮಗೆ ಸಂತೋಷ ತಂದಿದೆ. ಗಾಯದಿಂದ ಚೇತರಿಸಿಕೊಳ್ಳಲು ಅವರು ಶ್ರಮಿಸಿದ ರೀತಿ ಮತ್ತು ಅವರ ಫಾರ್ಮ್ ಪ್ರದರ್ಶನಗೊಂಡಿರುವುದು ಅವರ ಶ್ರಮಕ್ಕೆ ಸಾಕ್ಷಿಯಾಗಿದೆ. ಕಳೆದ ಋತುವಿನಲ್ಲಿ ನಿತೀಶ್ ಅವರು ಶ್ರೇಯಸ್ ಅವರ ಬದಲಿಗೆ ನಾಯಕರಾಗಲು ಒಪ್ಪಿಕೊಂಡರು ಮತ್ತು ಉತ್ತಮ ಕೆಲಸ ಮಾಡಿದ್ದು, ಅವರಿಗೆ ನಾವು ಕೃತಜ್ಞರಾಗಿರುತ್ತೇವೆ. ಉಪನಾಯಕನಾಗಿ ನಿತೀಶ್ ಅವರನ್ನು ನೇಮಕ ಮಾಡಲಾಗಿದ್ದು, ತಂಡಕ್ಕೆ ಮತ್ತು ನಾಯಕನಿಗೆ ಎಲ್ಲಾ ರೀತಿಯಲ್ಲೂ ಬೆಂಬಲಿಸುವುದರಲ್ಲಿ ಸಂದೇಹವಿಲ್ಲ ಎಂದು ನಾವು ನಂಬುತ್ತೇವೆ ಎಂದು ಹೇಳಿದ್ದಾರೆ.

ನಾಯಕನಾಗಿ ಮರು ನೇಮಕಗೊಂಡ ಬೆನ್ನಲ್ಲೇ ಮಾತನಾಡಿರುವ ಶ್ರೇಯಸ್‌ ಅಯ್ಯರ್‌, “ಕಳೆದ ಋತುವಿನಲ್ಲಿ ಗಾಯದ ಕಾರಣದಿಂದ ನನ್ನ ಅನುಪಸ್ಥಿತಿ ಸೇರಿದಂತೆ ತಂಡ ಹಲವಾರು ಸವಾಲುಗಳನ್ನು ಎದುರಿಸಿದೆ. ನಿತೀಶ್ ಅವರು ನನ್ನ ಸ್ಥಾನವನ್ನು ತುಂಬಲು ಮಾತ್ರವಲ್ಲದೆ ಅವರ ನಾಯಕತ್ವದಿಂದಲೂ ತಂಡಕ್ಕೆ ಉತ್ತಮ ಕೆಲಸ ಮಾಡಿರುವುದು ಶ್ಲಾಘನೀಯ. ಕೆಕೆಆರ್‌ ಅವರನ್ನು ವೈಸ್ ಕ್ಯಾಪ್ಟನ್‌ ಆಗಿ ನೇಮಿಸಿರುವುದು ನನಗೆ ಸಂತೋಷ ತಂದಿದೆ. ಇದು ನಾಯಕತ್ವದ ಗುಣವಿರುವ ಗುಂಪನ್ನು ಬಲಪಡಿಸುವುದರಲ್ಲಿ ಸಂದೇಹವಿಲ್ಲ” ಎಂದು ಅವರು ಹೇಳಿದ್ದಾರೆ.

andolanait

Recent Posts

T20 World Cup : ಡಬಲ್‌ ಸೂಪರ್‌ ಓವರ್‌ : 2 ಬಾರಿ ಟೈ ಆದ ಪಂದ್ಯದಲ್ಲಿ ಹರಿಣಗಳ ಮೇಲುಗೈ

ಅಹಮದಾಬಾದ್ : ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಬುಧವಾರ ಅಪ್ಘಾನಿಸ್ತಾನ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಲೀಗ್ ಪಂದ್ಯವು ಎರಡು…

46 mins ago

ಮುಂದುವರೆದ ಡ್ರಗ್ಸ್‌ ಸಮರ : ಮಾದಕ ವಸ್ತು ವಶಕ್ಕೆ ; ಐವರ ಬಂಧನ

ಮೈಸೂರು : ನಗರದಲ್ಲಿ ಮಾದಕ ವಸ್ತು ಅಕ್ರಮ ಮಾರಾಟ ಮತ್ತು ಸಾಗಾಟದ ಮೇಲೆ ಸಿಸಿಬಿ ಮತ್ತು ಮಂಡಿ ಠಾಣಾ ಪೊಲೀಸರಿಂದ…

1 hour ago

ನಂದಿನ ರಾಯಭಾರಿಯಾಗಿ ಸುಧಾರಾಣಿ

ಬೆಂಗಳೂರು : ರಾಜ್ಯದ ಹೆಮ್ಮೆಯ ಬ್ರ್ಯಾಂಡ್ ನಂದಿನಿ ಉತ್ಪನ್ನಗಳ ನೂತನ ಪ್ರಚಾರ ರಾಯಭಾರಿಯನ್ನಾಗಿ ಹಿರಿಯ ನಟಿ ಸುಧಾರಾಣಿ ಅವರನ್ನು ನೇಮಿಸಲಾಗಿದೆ.…

1 hour ago

ನಾಳೆ ಭಾರತ ಬಂದ್‌ : ಶಾಲಾ, ಕಾಲೇಜು ಬಂದ್? ಏನಿರುತ್ತೇ, ಏನಿರಲ್ಲ?

ಹೊಸದಿಲ್ಲಿ : ಕೇಂದ್ರ ಸರ್ಕಾರದ ಕೃಷಿ, ಕಾರ್ಮಿಕ ಮತ್ತು ಆರ್ಥಿಕ ನೀತಿಗಳನ್ನು ವಿರೋಧಿಸಿ ನಾಳೆ(ಫೆ.12) ಭಾರತ್‌ ಬಂದ್‌ಗೆ ಕರೆ ನೀಡಲಾಗಿದೆ.…

2 hours ago

ರಾಷ್ಟ್ರಗೀತೆಗೂ ಮುನ್ನ ‘ವಂದೇ ಮಾತರಂ’ ಕಡ್ಡಾಯ ; ವಂದೇ ಮಾತರಂಗೂ ಶಿಷ್ಟಾಚಾರ ಗೌರವ!

ಹೊಸದಿಲ್ಲಿ : ‘ರಾಷ್ಟ್ರಗೀತೆ’ಗೂ ಮುನ್ನ ‘ವಂದೇ ಮಾತರಂ’ ಹಾಡುವುದನ್ನು ಕೇಂದ್ರ ಸರ್ಕಾರ ಕಡ್ಡಾಯ ಮಾಡಿದ್ದು, ಕಾಂಗ್ರೆಸ್ ಕೈಬಿಟ್ಟಿದ್ದ ಚರಣಗಳ ಮರುಸೇರ್ಪಡೆಗೊಳಿಸಿದೆ.…

2 hours ago

ವಿದ್ಯಾರ್ಥಿಗಳು ಹೊಸ ಹೊಸ ವಿಷಯಗಳ ಕಡೆ ಗಮನಹರಿಸಿ : ಕುಲಪತಿ ಲೋಕನಾಥ್‌ ಸಲಹೆ

ಮೈಸೂರು : ಇಂದಿನ ಯುವಜನತೆ ಪುಸ್ತಕಗಳಿಗೆ ಸೀಮಿತವಾಗದೆ, ಮಹಾತ್ಮರ ಚಿಂತನೆಗಳಿಂದ ಪ್ರೇರಣೆ ಪಡೆದು ಆತ್ಮಸ್ಥೈರ್ಯದಿಂದ ಬದುಕು ಕಟ್ಟಿಕೊಳ್ಳಬೇಕು ಎಂದು ಮೈಸೂರು…

2 hours ago