ಕ್ರೀಡೆ

KKR ನ ಕ್ಯಾಪ್ಟನ್ ಆಗಿ ಶ್ರೇಯಸ್ ಅಯ್ಯರ್ ಮರುನೇಮಕ: ಉಪನಾಯಕನಾಗಿ ರಾಣಾ

೨೦೨೪ರಲ್ಲಿ ನಡೆಯುವ ಐಪಿಎಲ್‌ (ಇಂಡಿಯನ್‌ ಪ್ರೀಮಿಯರ್‌ ಲೀಗ್‌) ೧೭ ನೇ ಆವೃತ್ತಿಯಲ್ಲಿ ಕೆಕೆಆರ್‌ (ಕೊಲ್ಕತ್ತಾ ನೈಟ್‌ ರೈಡರ್ಸ್‌) ತಂಡದ ನಾಯಕಾಗಿ ಶ್ರೇಯಸ್‌ ಅಯ್ಯರ್‌ ಅವರು ಮುಂದುವರೆಯಲಿದ್ದಾರೆ ಎಂದು ಕೆಕೆಆರ್‌ನ ಸಿಇಒ ವೆಂಕಿ ಮೈಸೂರು ಅವರು ಇಂದು (ಗುರುವಾರ) ಘೋಷಿಸಿದ್ದಾರೆ.

ಮಾಜಿ ನಾಯಕ ನಿತೀಶ್‌ ರಾಣಾ ಅವರು ಕೆಕೆಆರ್‌ ನ ಉಪ ನಾಯಕರಾಗಿ ನೇಮಕೊಂಡಿದ್ದಾರೆ.

ಈ ಕುರಿತು ಮಾತನಾಡಿರುವ ಸಿಇಒ ಅವರು, “ಗಾಯದ ಕಾರಣದಿಂದ ಶ್ರೇಯಸ್ ಐಪಿಎಲ್ 2023 ರ ಸೀಸನ್‌ಗೆ ಅಲಭ್ಯರಾಗಿದ್ದು ನಿಜಕ್ಕೂ ದುರದೃಷ್ಟಕರ. ಅವರು ಮತ್ತೆ ನಾಯಕನಾಗಿ ಚುಕ್ಕಾಣಿ ಹಿಡಿದಿರುವುದು ನಮಗೆ ಸಂತೋಷ ತಂದಿದೆ. ಗಾಯದಿಂದ ಚೇತರಿಸಿಕೊಳ್ಳಲು ಅವರು ಶ್ರಮಿಸಿದ ರೀತಿ ಮತ್ತು ಅವರ ಫಾರ್ಮ್ ಪ್ರದರ್ಶನಗೊಂಡಿರುವುದು ಅವರ ಶ್ರಮಕ್ಕೆ ಸಾಕ್ಷಿಯಾಗಿದೆ. ಕಳೆದ ಋತುವಿನಲ್ಲಿ ನಿತೀಶ್ ಅವರು ಶ್ರೇಯಸ್ ಅವರ ಬದಲಿಗೆ ನಾಯಕರಾಗಲು ಒಪ್ಪಿಕೊಂಡರು ಮತ್ತು ಉತ್ತಮ ಕೆಲಸ ಮಾಡಿದ್ದು, ಅವರಿಗೆ ನಾವು ಕೃತಜ್ಞರಾಗಿರುತ್ತೇವೆ. ಉಪನಾಯಕನಾಗಿ ನಿತೀಶ್ ಅವರನ್ನು ನೇಮಕ ಮಾಡಲಾಗಿದ್ದು, ತಂಡಕ್ಕೆ ಮತ್ತು ನಾಯಕನಿಗೆ ಎಲ್ಲಾ ರೀತಿಯಲ್ಲೂ ಬೆಂಬಲಿಸುವುದರಲ್ಲಿ ಸಂದೇಹವಿಲ್ಲ ಎಂದು ನಾವು ನಂಬುತ್ತೇವೆ ಎಂದು ಹೇಳಿದ್ದಾರೆ.

ನಾಯಕನಾಗಿ ಮರು ನೇಮಕಗೊಂಡ ಬೆನ್ನಲ್ಲೇ ಮಾತನಾಡಿರುವ ಶ್ರೇಯಸ್‌ ಅಯ್ಯರ್‌, “ಕಳೆದ ಋತುವಿನಲ್ಲಿ ಗಾಯದ ಕಾರಣದಿಂದ ನನ್ನ ಅನುಪಸ್ಥಿತಿ ಸೇರಿದಂತೆ ತಂಡ ಹಲವಾರು ಸವಾಲುಗಳನ್ನು ಎದುರಿಸಿದೆ. ನಿತೀಶ್ ಅವರು ನನ್ನ ಸ್ಥಾನವನ್ನು ತುಂಬಲು ಮಾತ್ರವಲ್ಲದೆ ಅವರ ನಾಯಕತ್ವದಿಂದಲೂ ತಂಡಕ್ಕೆ ಉತ್ತಮ ಕೆಲಸ ಮಾಡಿರುವುದು ಶ್ಲಾಘನೀಯ. ಕೆಕೆಆರ್‌ ಅವರನ್ನು ವೈಸ್ ಕ್ಯಾಪ್ಟನ್‌ ಆಗಿ ನೇಮಿಸಿರುವುದು ನನಗೆ ಸಂತೋಷ ತಂದಿದೆ. ಇದು ನಾಯಕತ್ವದ ಗುಣವಿರುವ ಗುಂಪನ್ನು ಬಲಪಡಿಸುವುದರಲ್ಲಿ ಸಂದೇಹವಿಲ್ಲ” ಎಂದು ಅವರು ಹೇಳಿದ್ದಾರೆ.

andolanait

Recent Posts

ದೈಹಿಕ ಶಿಕ್ಷಣ ಶಿಕ್ಷಕರ ಕೊರತೆಯ ನಡುವೆ ಮಕ್ಕಳ ಕ್ರೀಡಾಭ್ಯಾಸ

ಎಂ.ಬಿ.ರಂಗಸ್ವಾಮಿ ಮೂಗೂರು: ಗ್ರಾಮದ ಸರ್ಕಾರಿ ಕರ್ನಾಟಕ ಪಬ್ಲಿಕ್ ಶಾಲೆಯ ಹಿರಿಯ ಪ್ರಾಥಮಿಕ ಬಾಲಕ, ಬಾಲಕಿಯರ ಶಾಲೆಯಲ್ಲಿ ದೈಹಿಕ ಶಿಕ್ಷಣದ ಶಿಕ್ಷಕರ…

2 mins ago

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

7 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

9 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

10 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

12 hours ago