ಕ್ರೀಡೆ

KKR ನ ಕ್ಯಾಪ್ಟನ್ ಆಗಿ ಶ್ರೇಯಸ್ ಅಯ್ಯರ್ ಮರುನೇಮಕ: ಉಪನಾಯಕನಾಗಿ ರಾಣಾ

೨೦೨೪ರಲ್ಲಿ ನಡೆಯುವ ಐಪಿಎಲ್‌ (ಇಂಡಿಯನ್‌ ಪ್ರೀಮಿಯರ್‌ ಲೀಗ್‌) ೧೭ ನೇ ಆವೃತ್ತಿಯಲ್ಲಿ ಕೆಕೆಆರ್‌ (ಕೊಲ್ಕತ್ತಾ ನೈಟ್‌ ರೈಡರ್ಸ್‌) ತಂಡದ ನಾಯಕಾಗಿ ಶ್ರೇಯಸ್‌ ಅಯ್ಯರ್‌ ಅವರು ಮುಂದುವರೆಯಲಿದ್ದಾರೆ ಎಂದು ಕೆಕೆಆರ್‌ನ ಸಿಇಒ ವೆಂಕಿ ಮೈಸೂರು ಅವರು ಇಂದು (ಗುರುವಾರ) ಘೋಷಿಸಿದ್ದಾರೆ.

ಮಾಜಿ ನಾಯಕ ನಿತೀಶ್‌ ರಾಣಾ ಅವರು ಕೆಕೆಆರ್‌ ನ ಉಪ ನಾಯಕರಾಗಿ ನೇಮಕೊಂಡಿದ್ದಾರೆ.

ಈ ಕುರಿತು ಮಾತನಾಡಿರುವ ಸಿಇಒ ಅವರು, “ಗಾಯದ ಕಾರಣದಿಂದ ಶ್ರೇಯಸ್ ಐಪಿಎಲ್ 2023 ರ ಸೀಸನ್‌ಗೆ ಅಲಭ್ಯರಾಗಿದ್ದು ನಿಜಕ್ಕೂ ದುರದೃಷ್ಟಕರ. ಅವರು ಮತ್ತೆ ನಾಯಕನಾಗಿ ಚುಕ್ಕಾಣಿ ಹಿಡಿದಿರುವುದು ನಮಗೆ ಸಂತೋಷ ತಂದಿದೆ. ಗಾಯದಿಂದ ಚೇತರಿಸಿಕೊಳ್ಳಲು ಅವರು ಶ್ರಮಿಸಿದ ರೀತಿ ಮತ್ತು ಅವರ ಫಾರ್ಮ್ ಪ್ರದರ್ಶನಗೊಂಡಿರುವುದು ಅವರ ಶ್ರಮಕ್ಕೆ ಸಾಕ್ಷಿಯಾಗಿದೆ. ಕಳೆದ ಋತುವಿನಲ್ಲಿ ನಿತೀಶ್ ಅವರು ಶ್ರೇಯಸ್ ಅವರ ಬದಲಿಗೆ ನಾಯಕರಾಗಲು ಒಪ್ಪಿಕೊಂಡರು ಮತ್ತು ಉತ್ತಮ ಕೆಲಸ ಮಾಡಿದ್ದು, ಅವರಿಗೆ ನಾವು ಕೃತಜ್ಞರಾಗಿರುತ್ತೇವೆ. ಉಪನಾಯಕನಾಗಿ ನಿತೀಶ್ ಅವರನ್ನು ನೇಮಕ ಮಾಡಲಾಗಿದ್ದು, ತಂಡಕ್ಕೆ ಮತ್ತು ನಾಯಕನಿಗೆ ಎಲ್ಲಾ ರೀತಿಯಲ್ಲೂ ಬೆಂಬಲಿಸುವುದರಲ್ಲಿ ಸಂದೇಹವಿಲ್ಲ ಎಂದು ನಾವು ನಂಬುತ್ತೇವೆ ಎಂದು ಹೇಳಿದ್ದಾರೆ.

ನಾಯಕನಾಗಿ ಮರು ನೇಮಕಗೊಂಡ ಬೆನ್ನಲ್ಲೇ ಮಾತನಾಡಿರುವ ಶ್ರೇಯಸ್‌ ಅಯ್ಯರ್‌, “ಕಳೆದ ಋತುವಿನಲ್ಲಿ ಗಾಯದ ಕಾರಣದಿಂದ ನನ್ನ ಅನುಪಸ್ಥಿತಿ ಸೇರಿದಂತೆ ತಂಡ ಹಲವಾರು ಸವಾಲುಗಳನ್ನು ಎದುರಿಸಿದೆ. ನಿತೀಶ್ ಅವರು ನನ್ನ ಸ್ಥಾನವನ್ನು ತುಂಬಲು ಮಾತ್ರವಲ್ಲದೆ ಅವರ ನಾಯಕತ್ವದಿಂದಲೂ ತಂಡಕ್ಕೆ ಉತ್ತಮ ಕೆಲಸ ಮಾಡಿರುವುದು ಶ್ಲಾಘನೀಯ. ಕೆಕೆಆರ್‌ ಅವರನ್ನು ವೈಸ್ ಕ್ಯಾಪ್ಟನ್‌ ಆಗಿ ನೇಮಿಸಿರುವುದು ನನಗೆ ಸಂತೋಷ ತಂದಿದೆ. ಇದು ನಾಯಕತ್ವದ ಗುಣವಿರುವ ಗುಂಪನ್ನು ಬಲಪಡಿಸುವುದರಲ್ಲಿ ಸಂದೇಹವಿಲ್ಲ” ಎಂದು ಅವರು ಹೇಳಿದ್ದಾರೆ.

andolanait

Recent Posts

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

8 hours ago

ವೆನಿಜುವೆಲಾ ಭೂಕಂಪ ; ಮೃತರ ಸಂಖ್ಯೆ 235ಕ್ಕೆ ಏರಿಕೆ

ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…

9 hours ago

ಡಿಕೆಶಿ ಜೊತೆಗಿನ ಬಾಂಧ್ಯವ : ಧರ್ಮಸ್ಥಳದಲ್ಲಿ ವಿಜಯೇಂದ್ರ ಹೇಳಿದಿಷ್ಟು

ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…

11 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 26, ಶುಕ್ರವಾರ  

14 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಕನ್ನಡಕ್ಕೊಂದು ಒಟಿಟಿ, ʼಗರುಡ ಪುರಾಣʼ ಇತ್ಯಾದಿ

‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…

14 hours ago

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

1 day ago