ಕ್ರೀಡೆ

ಶ್ರೇಯಸ್‌-ರಾಹುಲ್‌ ಶತಕ: ಡಚ್ಚರಿಗೆ 411ರನ್‌ ಟಾರ್ಗೆಟ್‌ ನೀಡಿದ ಭಾರತ

ಬೆಂಗಳೂರು : ಶ್ರೇಯಸ್‌ ಅಯ್ಯರ್‌ ಹಾಗೂ ವಿಕೆಟ್‌ ಕೀಪರ್‌ ಕೆ.ಎಲ್‌ ರಾಹುಲ್‌ ಅವರ ಜುಗಲ್‌ ಬಂಧಿ ಶತಕದ ಬಲದಿಂದ ಭಾರತ ತಂಡವು ನೆದರ್ಲ್ಯಾಂಡ್ಸ್‌ ವಿರುದ್ಧ 411ರನ್‌ ಗಳ ಬೃಹತ್‌ ಮೊತ್ತ ಕಲೆಹಾಕಿದೆ.

ಇಲ್ಲಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ- ನೆದರ್‌ಲ್ಯಾಂಡ್ಸ್‌ ನಡುವಿನ ಪಂದ್ಯದಲ್ಲಿ ಭಾರತ ತಂಡವು ಈ ಟೂರ್ನಿಯ ಪಂದ್ವೊಂದರಲ್ಲಿ ಪೇರಿಸಿದ ಬೃಹತ್‌ ಮೊತ್ತ ಇದಾಗಿದೆ.

ಟಾಸ್‌ ಗೆದ್ದು ಬ್ಯಾಟಿಂಗ್‌ ಮಾಡಿದ ಭಾರತ ತಂಡ ಅಂದುಕೊಂಡಂತೆ ಉತ್ತಮ ಆರಂಭ ಪಡೆಯಿತು, ಆರಂಭಿಕರಾದ ನಾಯಕ ರೋಹಿತ್‌ ಶರ್ಮಾ (61), ಶುಭ್‌ಮನ್‌ ಗಿಲ್‌ (51), ವಿರಾಟ್‌ ಕೊಹ್ಲಿ (51) ತಂಡಕ್ಕೆ ಉತ್ತಮ ಆರಂಭ ನೀಡಿದರು.

ನಂತರ ಒಂದಾದ ಶ್ರೇಯಸ್‌ ಅಯ್ಯರ್‌ ಮತ್ತು ಕೆ.ಎಲ್‌.ರಾಹುಲ್‌ ಕೇವಲ 135 ಎಸೆತಗಳಲ್ಲಿ 208 ರನ್‌ಗಳ ಕಾಣಿಕೆ ನೀಡಿ ತಂಡ ಬೃಹತ್‌ ಮೊತ್ತ ಕಲೆಹಾಕಲು ಸಹಕರಿಸಿದರು.

ಅಯ್ಯರ್‌  ತಾವಾಡಿದ 94 ಎಸೆತಗಳಲ್ಲಿ 10 ಬೌಂಡರಿ ಹಾಗೂ 5 ಸಿಕ್ಸರ್‌ ಸೇರಿ 128 ರನ್‌ ಕಲೆಹಾಕಿದರೇ, ಕೇವಲ 64 ಎಸೆತಗಳನ್ನು ಎದುರಿಸಿದ ಕನ್ನಡಿಗ ರಾಹುಲ್‌ 11 ಬೌಂಡರಿ ಮತ್ತು 4 ಸಿಕ್ಸರ್‌ ನಿಂದ 102 ರನ್‌ ಕಲೆಹಾಕಿದರು.

ಬಾಸ್‌ ಡಿ ಲೀಡೆ 2 ವಿಕೆಟ್‌ ಪಡೆದರೆ, ಲೋಗನ್‌ 10 ಓವರ್‌ಗಳಲ್ಲಿ ಬರೋಬ್ಬರಿ 107 ರನ್‌ ನೀಡಿ ದುಬಾರಿ ಬೌಲರ್‌ ಎನಿಸಿದರು.

andolanait

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

7 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

9 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

9 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

10 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

10 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

11 hours ago