ಕ್ರೀಡೆ

ಶ್ರೇಯಸ್‌-ರಾಹುಲ್‌ ಶತಕ: ಡಚ್ಚರಿಗೆ 411ರನ್‌ ಟಾರ್ಗೆಟ್‌ ನೀಡಿದ ಭಾರತ

ಬೆಂಗಳೂರು : ಶ್ರೇಯಸ್‌ ಅಯ್ಯರ್‌ ಹಾಗೂ ವಿಕೆಟ್‌ ಕೀಪರ್‌ ಕೆ.ಎಲ್‌ ರಾಹುಲ್‌ ಅವರ ಜುಗಲ್‌ ಬಂಧಿ ಶತಕದ ಬಲದಿಂದ ಭಾರತ ತಂಡವು ನೆದರ್ಲ್ಯಾಂಡ್ಸ್‌ ವಿರುದ್ಧ 411ರನ್‌ ಗಳ ಬೃಹತ್‌ ಮೊತ್ತ ಕಲೆಹಾಕಿದೆ.

ಇಲ್ಲಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ- ನೆದರ್‌ಲ್ಯಾಂಡ್ಸ್‌ ನಡುವಿನ ಪಂದ್ಯದಲ್ಲಿ ಭಾರತ ತಂಡವು ಈ ಟೂರ್ನಿಯ ಪಂದ್ವೊಂದರಲ್ಲಿ ಪೇರಿಸಿದ ಬೃಹತ್‌ ಮೊತ್ತ ಇದಾಗಿದೆ.

ಟಾಸ್‌ ಗೆದ್ದು ಬ್ಯಾಟಿಂಗ್‌ ಮಾಡಿದ ಭಾರತ ತಂಡ ಅಂದುಕೊಂಡಂತೆ ಉತ್ತಮ ಆರಂಭ ಪಡೆಯಿತು, ಆರಂಭಿಕರಾದ ನಾಯಕ ರೋಹಿತ್‌ ಶರ್ಮಾ (61), ಶುಭ್‌ಮನ್‌ ಗಿಲ್‌ (51), ವಿರಾಟ್‌ ಕೊಹ್ಲಿ (51) ತಂಡಕ್ಕೆ ಉತ್ತಮ ಆರಂಭ ನೀಡಿದರು.

ನಂತರ ಒಂದಾದ ಶ್ರೇಯಸ್‌ ಅಯ್ಯರ್‌ ಮತ್ತು ಕೆ.ಎಲ್‌.ರಾಹುಲ್‌ ಕೇವಲ 135 ಎಸೆತಗಳಲ್ಲಿ 208 ರನ್‌ಗಳ ಕಾಣಿಕೆ ನೀಡಿ ತಂಡ ಬೃಹತ್‌ ಮೊತ್ತ ಕಲೆಹಾಕಲು ಸಹಕರಿಸಿದರು.

ಅಯ್ಯರ್‌  ತಾವಾಡಿದ 94 ಎಸೆತಗಳಲ್ಲಿ 10 ಬೌಂಡರಿ ಹಾಗೂ 5 ಸಿಕ್ಸರ್‌ ಸೇರಿ 128 ರನ್‌ ಕಲೆಹಾಕಿದರೇ, ಕೇವಲ 64 ಎಸೆತಗಳನ್ನು ಎದುರಿಸಿದ ಕನ್ನಡಿಗ ರಾಹುಲ್‌ 11 ಬೌಂಡರಿ ಮತ್ತು 4 ಸಿಕ್ಸರ್‌ ನಿಂದ 102 ರನ್‌ ಕಲೆಹಾಕಿದರು.

ಬಾಸ್‌ ಡಿ ಲೀಡೆ 2 ವಿಕೆಟ್‌ ಪಡೆದರೆ, ಲೋಗನ್‌ 10 ಓವರ್‌ಗಳಲ್ಲಿ ಬರೋಬ್ಬರಿ 107 ರನ್‌ ನೀಡಿ ದುಬಾರಿ ಬೌಲರ್‌ ಎನಿಸಿದರು.

andolanait

Recent Posts

ಮುದ್ದಿನ ಹಸುವಿಗೆ ಸೀಮಂತ ನೆರವೇರಿಸಿದ ರೈತ ಮಹಿಳೆ!

ಭೇರ್ಯ ಮಹೇಶ್ ಶಾಸೋಕ್ತವಾಗಿ ನಡೆದ ಕಾರ್ಯಕ್ರಮ; ಮುತ್ತೈದೆಯರ ಮೂಲಕ ಹಸುವಿಗೆ ಸೀರೆ ತೊಡಿಸಿ, ಹಣ್ಣು, ಸಿಹಿ ನೀಡಿP ಕೆ.ಆರ್.ನಗರ :…

2 hours ago

ಕಾಡಾನೆ ದಾಳಿ; ಶಾಲೆಯ ಗೇಟ್, ನೀರಿನ ಪೈಪ್ ನಾಶ

ಹನೂರು ತಾಲ್ಲೂಕಿನ ಪಚ್ಚೆದೊಡ್ಡಿ ಶಾಲೆಗೆ ಪದೇಪದೇ ಕಾಡಾನೆ ಲಗ್ಗೆ; ಪೋಷಕರು, ಗ್ರಾಮಸ್ಥರಲ್ಲಿ ಭೀತಿ ಹನೂರು: ಕಾಡಾನೆ ದಾಳಿಯಿಂದ ಪದೇಪದೇ ಶಾಲಾ…

2 hours ago

‘ಪ್ರಾದೇಶಿಕ ಪಕ್ಷಗಳಿಂದಷ್ಟೇ ರಾಜ್ಯಗಳ ಅಭಿವೃದ್ಧಿ ಸಾಧ್ಯ’

‘ಪ್ರಸ್ತುತ ರಾಜಕೀಯ ನಿಲುವುಗಳು’ ಸಂವಾದದಲ್ಲಿ ಪತ್ರಕರ್ತ ದಿನೇಶ್ ಅಮಿನ್‌ಮಟ್ಟು ಅಭಿಮತ ಮೈಸೂರು: ಚಳವಳಿಗಳ ಉತ್ಪನ್ನವಾಗಿ ಪ್ರಾದೇಶಿಕ ಪಕ್ಷಗಳು ಉಗಮಿಸಬೇಕು. ರಾಷ್ಟ್ರೀಯ…

2 hours ago

ಡಿಕೆಶಿ ಬರಿಗೈಲಿ ವಾಪಸ್

ರವಿಚಂದ್ರ ಚಿಕ್ಕೆಂಪಿಹುಂಡಿ ರಾಹುಲ್ ಬಳಿ ಅಧಿಕಾರ ಹಂಚಿಕೆ ವಿಚಾರ ಪ್ರಸ್ತಾಪ ತಕ್ಷಣಕ್ಕೆ ಸಿಗದ ಸ್ಪಂದನೆ; ಚರ್ಚೆ ಮುಂದೂಡಿದ ರಾಹುಲ್ ಹೈಕಮಾಂಡ್ ನಾಯಕರಿಂದ…

2 hours ago

ಅಧಿವೇಶನವನ್ನು ಒಂದು ವಾರ ವಿಸ್ತರಿಸಲು ಮನವಿ : ಸ್ಪೀಕರ್‌ಗೆ ಪತ್ರ ಬರೆದ ಪ್ರತಿಪಕ್ಷ ನಾಯಕ ಆರ್‌.ಅಶೋಕ

ಬೆಳಗಾವಿ : ಉತ್ತರ ಕರ್ನಾಟಕದ ಸಮಸ್ಯೆ, ಕಾನೂನು ಸುವ್ಯವಸ್ಥೆಯಲ್ಲಿ ಲೋಪ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಇನ್ನೂ ದೀರ್ಘ ಚರ್ಚೆ…

14 hours ago