ಕ್ರೀಡೆ

ಶ್ರೇಯಸ್‌-ರಾಹುಲ್‌ ಶತಕ: ಡಚ್ಚರಿಗೆ 411ರನ್‌ ಟಾರ್ಗೆಟ್‌ ನೀಡಿದ ಭಾರತ

ಬೆಂಗಳೂರು : ಶ್ರೇಯಸ್‌ ಅಯ್ಯರ್‌ ಹಾಗೂ ವಿಕೆಟ್‌ ಕೀಪರ್‌ ಕೆ.ಎಲ್‌ ರಾಹುಲ್‌ ಅವರ ಜುಗಲ್‌ ಬಂಧಿ ಶತಕದ ಬಲದಿಂದ ಭಾರತ ತಂಡವು ನೆದರ್ಲ್ಯಾಂಡ್ಸ್‌ ವಿರುದ್ಧ 411ರನ್‌ ಗಳ ಬೃಹತ್‌ ಮೊತ್ತ ಕಲೆಹಾಕಿದೆ.

ಇಲ್ಲಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ- ನೆದರ್‌ಲ್ಯಾಂಡ್ಸ್‌ ನಡುವಿನ ಪಂದ್ಯದಲ್ಲಿ ಭಾರತ ತಂಡವು ಈ ಟೂರ್ನಿಯ ಪಂದ್ವೊಂದರಲ್ಲಿ ಪೇರಿಸಿದ ಬೃಹತ್‌ ಮೊತ್ತ ಇದಾಗಿದೆ.

ಟಾಸ್‌ ಗೆದ್ದು ಬ್ಯಾಟಿಂಗ್‌ ಮಾಡಿದ ಭಾರತ ತಂಡ ಅಂದುಕೊಂಡಂತೆ ಉತ್ತಮ ಆರಂಭ ಪಡೆಯಿತು, ಆರಂಭಿಕರಾದ ನಾಯಕ ರೋಹಿತ್‌ ಶರ್ಮಾ (61), ಶುಭ್‌ಮನ್‌ ಗಿಲ್‌ (51), ವಿರಾಟ್‌ ಕೊಹ್ಲಿ (51) ತಂಡಕ್ಕೆ ಉತ್ತಮ ಆರಂಭ ನೀಡಿದರು.

ನಂತರ ಒಂದಾದ ಶ್ರೇಯಸ್‌ ಅಯ್ಯರ್‌ ಮತ್ತು ಕೆ.ಎಲ್‌.ರಾಹುಲ್‌ ಕೇವಲ 135 ಎಸೆತಗಳಲ್ಲಿ 208 ರನ್‌ಗಳ ಕಾಣಿಕೆ ನೀಡಿ ತಂಡ ಬೃಹತ್‌ ಮೊತ್ತ ಕಲೆಹಾಕಲು ಸಹಕರಿಸಿದರು.

ಅಯ್ಯರ್‌  ತಾವಾಡಿದ 94 ಎಸೆತಗಳಲ್ಲಿ 10 ಬೌಂಡರಿ ಹಾಗೂ 5 ಸಿಕ್ಸರ್‌ ಸೇರಿ 128 ರನ್‌ ಕಲೆಹಾಕಿದರೇ, ಕೇವಲ 64 ಎಸೆತಗಳನ್ನು ಎದುರಿಸಿದ ಕನ್ನಡಿಗ ರಾಹುಲ್‌ 11 ಬೌಂಡರಿ ಮತ್ತು 4 ಸಿಕ್ಸರ್‌ ನಿಂದ 102 ರನ್‌ ಕಲೆಹಾಕಿದರು.

ಬಾಸ್‌ ಡಿ ಲೀಡೆ 2 ವಿಕೆಟ್‌ ಪಡೆದರೆ, ಲೋಗನ್‌ 10 ಓವರ್‌ಗಳಲ್ಲಿ ಬರೋಬ್ಬರಿ 107 ರನ್‌ ನೀಡಿ ದುಬಾರಿ ಬೌಲರ್‌ ಎನಿಸಿದರು.

andolanait

Recent Posts

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

5 hours ago

ವೆನಿಜುವೆಲಾ ಭೂಕಂಪ ; ಮೃತರ ಸಂಖ್ಯೆ 235ಕ್ಕೆ ಏರಿಕೆ

ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…

6 hours ago

ಡಿಕೆಶಿ ಜೊತೆಗಿನ ಬಾಂಧ್ಯವ : ಧರ್ಮಸ್ಥಳದಲ್ಲಿ ವಿಜಯೇಂದ್ರ ಹೇಳಿದಿಷ್ಟು

ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…

8 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 26, ಶುಕ್ರವಾರ  

10 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಕನ್ನಡಕ್ಕೊಂದು ಒಟಿಟಿ, ʼಗರುಡ ಪುರಾಣʼ ಇತ್ಯಾದಿ

‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…

10 hours ago

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

1 day ago