ಬೆಂಗಳೂರು : ಶ್ರೇಯಸ್ ಅಯ್ಯರ್ ಹಾಗೂ ವಿಕೆಟ್ ಕೀಪರ್ ಕೆ.ಎಲ್ ರಾಹುಲ್ ಅವರ ಜುಗಲ್ ಬಂಧಿ ಶತಕದ ಬಲದಿಂದ ಭಾರತ ತಂಡವು ನೆದರ್ಲ್ಯಾಂಡ್ಸ್ ವಿರುದ್ಧ 411ರನ್ ಗಳ ಬೃಹತ್ ಮೊತ್ತ ಕಲೆಹಾಕಿದೆ.
ಇಲ್ಲಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ- ನೆದರ್ಲ್ಯಾಂಡ್ಸ್ ನಡುವಿನ ಪಂದ್ಯದಲ್ಲಿ ಭಾರತ ತಂಡವು ಈ ಟೂರ್ನಿಯ ಪಂದ್ವೊಂದರಲ್ಲಿ ಪೇರಿಸಿದ ಬೃಹತ್ ಮೊತ್ತ ಇದಾಗಿದೆ.
ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ ಭಾರತ ತಂಡ ಅಂದುಕೊಂಡಂತೆ ಉತ್ತಮ ಆರಂಭ ಪಡೆಯಿತು, ಆರಂಭಿಕರಾದ ನಾಯಕ ರೋಹಿತ್ ಶರ್ಮಾ (61), ಶುಭ್ಮನ್ ಗಿಲ್ (51), ವಿರಾಟ್ ಕೊಹ್ಲಿ (51) ತಂಡಕ್ಕೆ ಉತ್ತಮ ಆರಂಭ ನೀಡಿದರು.
ನಂತರ ಒಂದಾದ ಶ್ರೇಯಸ್ ಅಯ್ಯರ್ ಮತ್ತು ಕೆ.ಎಲ್.ರಾಹುಲ್ ಕೇವಲ 135 ಎಸೆತಗಳಲ್ಲಿ 208 ರನ್ಗಳ ಕಾಣಿಕೆ ನೀಡಿ ತಂಡ ಬೃಹತ್ ಮೊತ್ತ ಕಲೆಹಾಕಲು ಸಹಕರಿಸಿದರು.
ಅಯ್ಯರ್ ತಾವಾಡಿದ 94 ಎಸೆತಗಳಲ್ಲಿ 10 ಬೌಂಡರಿ ಹಾಗೂ 5 ಸಿಕ್ಸರ್ ಸೇರಿ 128 ರನ್ ಕಲೆಹಾಕಿದರೇ, ಕೇವಲ 64 ಎಸೆತಗಳನ್ನು ಎದುರಿಸಿದ ಕನ್ನಡಿಗ ರಾಹುಲ್ 11 ಬೌಂಡರಿ ಮತ್ತು 4 ಸಿಕ್ಸರ್ ನಿಂದ 102 ರನ್ ಕಲೆಹಾಕಿದರು.
ಬಾಸ್ ಡಿ ಲೀಡೆ 2 ವಿಕೆಟ್ ಪಡೆದರೆ, ಲೋಗನ್ 10 ಓವರ್ಗಳಲ್ಲಿ ಬರೋಬ್ಬರಿ 107 ರನ್ ನೀಡಿ ದುಬಾರಿ ಬೌಲರ್ ಎನಿಸಿದರು.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…