Categories: ಕ್ರೀಡೆ

ಶುಭಮನ್‌ ಗಿಲ್‌ ಹೆಬ್ಬರಳಿಗೆ ಗಾಯ: ಭಾರತಕ್ಕೆ ತೀವ್ರ ಹಿನ್ನಡೆ

ಬೆಂಗಳೂರು: ಕ್ರಿಕೆಟ್‌ ಇತಿಹಾಸದ ಬಹುನಿರೀಕ್ಷಿತ ಸರಣಿಯಲ್ಲೊಂದಾದ ಬಾರ್ಡರ್-‌ ಗವಾಸ್ಕರ್‌ ಟ್ರೋಪಿ ಆರಂಭವಾಗುವ ಮುನ್ನ ಟೀಮ್‌ ಇಂಡಿಯಾಗೆ ಭಾರೀ ಹಿನ್ನಡೆಯುಂಟಾಗಿದೆ.

ಅಭ್ಯಾಸ ಪಂದ್ಯದ ವೇಳೆ ಭಾರತದ ಯುವ ಬ್ಯಾಟರ್‌ ಶುಭ್‌ಮನ್‌ ಗಿಲ್‌ ಅವರ ಎಡಗೈ ಹೆಬ್ಬೆರಳಿಗೆ ಗಾಯವಾಗಿದ್ದು, ತೀವ್ರ ನೋವು ಅನುಭವಿಸಿ ಮೈದಾನದಿಂದ ಹೊರನಡೆದರು ಎಂದು ಮೂಲಗಳಿಂದ ತಿಳಿದುಬಂದಿದೆ.

ಪರ್ತ್‌ ಟೆಸ್ಟ್‌ ಪಂದ್ಯ ನವೆಂಬರ್‌.22ಕ್ಕೆ ಆರಭವಾಗಲಿದ್ದು, ಅಲ್ಲಿಯವರೆಗೆ ಶುಭಮನ್‌ ಗಿಲ್‌ ಸುಧಾರಿಸಿಕೊಳ್ಳವುದು ಕಷ್ಟ ಎಂದು ಹೇಳಲಾಗುತ್ತಿದೆ.

ತಂದೆಯಾಗಿರುವ ಖುಷಿಯಲ್ಲಿರುವ ನಾಯಕ ರೋಹಿತ್‌ ಶರ್ಮಾ ಅವರು ಸಹ ಮೊದಲ ಟೆಸ್ಟ್‌ ಆಡುವುದು ಅನುಮಾನವಾಗಿದೆ. ಹಾಗೆಯೇ ಕೆ.ಎಲ್‌. ರಾಹುಲ್‌ ಕೂಡ ಅಭ್ಯಾಸ ಪಂದ್ಯ ಆಡುವಾಗ ಚೆಂಡು ಬಲ ಮೊಣಕೈಗೆ ಬಡಿದು ಅವರು ಗಾಯಗೊಂಡಿದ್ದರು. ಹೀಗೆ ಒಬ್ಬರಿಂದೇ ಒಬ್ಬರು ಗಾಯಗೊಳ್ಳುತ್ತಿರುವುದು ಭಾರತ ತಂಡಕ್ಕೆ ತೀವ್ರ ತಲೆನೋವಾಗಿ ಪರಿಣಮಿಸಿದೆ.

ಆಂದೋಲನ ಡೆಸ್ಕ್

Recent Posts

ಮಂಗಳೂರು ಬಂದರಿಗೆ ಬಂದ ಎಲ್‌ಪಿಜಿ ಹೊತ್ತ ಎರಡು ಹಡಗು

ಮಂಗಳೂರು : ಅಮೆರಿಕ, ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧದ ನಡುವೆ ರಷ್ಯಾದಿಂದ 96 ಸಾವಿರ ಮೆಟ್ರಿಕ್ ಟನ್ ಕಚ್ಚಾತೈಲ…

41 mins ago

ನಮ್ಮ ವೈರಿಗಳಿಗೆ ಮಾತ್ರ ಹೊರ್ಮುಜ್‌ ಮುಚ್ಚಿದೆ : ಇರಾನ್‌

ವಿಶ್ವಸಂಸ್ಥೆ : ಇರಾನ್‌ ವೈರಿಗಳು ಹಾಗೂ ಅವರೊಂದಿಗೆ ನಂಟು ಹೊಂದಿರುವ ರಾಷ್ಟ್ರಗಳಿಗೆ ಮಾತ್ರ ಹೊರ್ಮುಜ್‌ ಜಲಸಂಧಿ ಮುಚ್ಚಲಾಗಿದೆ ಎಂದು ವಿಶ್ವಸಂಸ್ಥೆಯ…

2 hours ago

ಹುಬ್ಬೆ ಹುಣಸೆ ಜಲಾಶಯಕ್ಕೂ ಕಾವೇರಿ ನೀರು : ಶಾಸಕ ಮಂಜುನಾಥ್‌ ಭರವಸೆ

ಹನೂರು : ವಿಧಾನಸಭಾ ಕ್ಷೇತ್ರದ ಪ್ರಮುಖ ಜಲಾಶಯಗಳ ಪೈಕಿ ರಾಮನ ಗುಡ್ಡ ಜಲಾಶಯಕ್ಕೆ ಕಳೆದ ಎರಡು ತಿಂಗಳ ಹಿಂದೆ ಕಾವೇರಿ…

2 hours ago

ಕತಾರ್‌ನಲ್ಲಿ ತಾಂತ್ರಿಕ ದೋಷದಿಂದ ಹೆಲಿಕಾಪ್ಟರ್‌ ಪತನ: 6 ಜನರು ಸಾವು

ಕೈರೋ: ತಾಂತ್ರಿಕ ದೋಷದಿಂದಾಗಿ ಕತಾರ್‌ ಹೆಲಿಕಾಪ್ಟರ್‌ ಅಪಘಾತವಾಗಿ ಆರು ಜನರು ಸಾವನ್ನಪ್ಪಿದ್ದಾರೆ ಎಂದು ಸಚಿವಾಲಯ ಹೇಳಿದೆ. ಕತಾರ್‌ನ ಪ್ರಾದೇಶಿಕ ನೀರಿನಲ್ಲಿ…

3 hours ago

ಬೆಂಗಳೂರಿಗೆ ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಬೆಂಗಳೂರಿಗೆ ಕುಡಿಯುವ ನೀರಿನ ಸಮಸ್ಯೆಯನ್ನು ಶಾಶ್ವತವಾಗಿ ನಿವಾರಿಸಲು ತಮ್ಮ ಸರ್ಕಾರ ಕ್ರಮ ಕೈಗೊಂಡಿದ್ದು, 6ನೇ ಹಂತದ ಕಾವೇರಿ ನೀರು…

3 hours ago

ನಿಮ್ಮ ಸುಪ್ರೀಂ ಲೀಡರ್‌ ಬದುಕಿದ್ದಾರಾ?: ಅಮೇರಿಕಾ ಪ್ರಶ್ನೆ

ವಾಷಿಂಗ್ಟನ್:‌ ಸಾರ್ವಜನಿಕವಾಗಿ ಕಾಣಿಸಿಕೊಳ್ಳದ ಇರಾನ್‌ನ ನೂತನ ಸುಪ್ರೀಂ ಲೀಡರ್‌ ಮೊಜ್ತಾಬಾ ಖಮೇನಿ ಎಲ್ಲಿದ್ದಾರೆ? ಬದುಕಿದ್ದಾರಾ? ಎಂದು ಅಮೇರಿಕಾ ಪ್ರಶ್ನೆ ಮಾಡಿದೆ.…

3 hours ago