Categories: ಕ್ರೀಡೆ

ಶುಭಮನ್‌ ಗಿಲ್‌ ಹೆಬ್ಬರಳಿಗೆ ಗಾಯ: ಭಾರತಕ್ಕೆ ತೀವ್ರ ಹಿನ್ನಡೆ

ಬೆಂಗಳೂರು: ಕ್ರಿಕೆಟ್‌ ಇತಿಹಾಸದ ಬಹುನಿರೀಕ್ಷಿತ ಸರಣಿಯಲ್ಲೊಂದಾದ ಬಾರ್ಡರ್-‌ ಗವಾಸ್ಕರ್‌ ಟ್ರೋಪಿ ಆರಂಭವಾಗುವ ಮುನ್ನ ಟೀಮ್‌ ಇಂಡಿಯಾಗೆ ಭಾರೀ ಹಿನ್ನಡೆಯುಂಟಾಗಿದೆ.

ಅಭ್ಯಾಸ ಪಂದ್ಯದ ವೇಳೆ ಭಾರತದ ಯುವ ಬ್ಯಾಟರ್‌ ಶುಭ್‌ಮನ್‌ ಗಿಲ್‌ ಅವರ ಎಡಗೈ ಹೆಬ್ಬೆರಳಿಗೆ ಗಾಯವಾಗಿದ್ದು, ತೀವ್ರ ನೋವು ಅನುಭವಿಸಿ ಮೈದಾನದಿಂದ ಹೊರನಡೆದರು ಎಂದು ಮೂಲಗಳಿಂದ ತಿಳಿದುಬಂದಿದೆ.

ಪರ್ತ್‌ ಟೆಸ್ಟ್‌ ಪಂದ್ಯ ನವೆಂಬರ್‌.22ಕ್ಕೆ ಆರಭವಾಗಲಿದ್ದು, ಅಲ್ಲಿಯವರೆಗೆ ಶುಭಮನ್‌ ಗಿಲ್‌ ಸುಧಾರಿಸಿಕೊಳ್ಳವುದು ಕಷ್ಟ ಎಂದು ಹೇಳಲಾಗುತ್ತಿದೆ.

ತಂದೆಯಾಗಿರುವ ಖುಷಿಯಲ್ಲಿರುವ ನಾಯಕ ರೋಹಿತ್‌ ಶರ್ಮಾ ಅವರು ಸಹ ಮೊದಲ ಟೆಸ್ಟ್‌ ಆಡುವುದು ಅನುಮಾನವಾಗಿದೆ. ಹಾಗೆಯೇ ಕೆ.ಎಲ್‌. ರಾಹುಲ್‌ ಕೂಡ ಅಭ್ಯಾಸ ಪಂದ್ಯ ಆಡುವಾಗ ಚೆಂಡು ಬಲ ಮೊಣಕೈಗೆ ಬಡಿದು ಅವರು ಗಾಯಗೊಂಡಿದ್ದರು. ಹೀಗೆ ಒಬ್ಬರಿಂದೇ ಒಬ್ಬರು ಗಾಯಗೊಳ್ಳುತ್ತಿರುವುದು ಭಾರತ ತಂಡಕ್ಕೆ ತೀವ್ರ ತಲೆನೋವಾಗಿ ಪರಿಣಮಿಸಿದೆ.

ಆಂದೋಲನ ಡೆಸ್ಕ್

Recent Posts

ಮಲೆನಾಡಿನಲ್ಲಿ ಮುಂದುವರಿದ ಕಾಫಿ ಕಳವು ಪ್ರಕರಣ

ಹಾಸನ: ಕಾಫಿ ಬೆಳೆಗೆ ಉತ್ತಮ ಬೆಲೆ ಬಂದಿರುವ ಪರಿಣಾಮ ಮಲೆನಾಡು ಭಾಗದಲ್ಲಿ ಕಾಫಿ ಕಳವು ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.…

3 mins ago

ಮದುವೆ ರದ್ದು: ಮೌನಮುರಿದ ಸ್ಮೃತಿ ಮಂದಾನ

ಮುಂಬೈ: ಭಾರತ ಮಹಿಳಾ ಕ್ರಿಕೆಟ್‌ ತಂಡದ ಉಪನಾಯಕಿ ಸ್ಮೃತಿ ಮಂದಾನ ಹಾಗೂ ಸಂಗೀತ ಸಂಯೋಜಕ ಪಲಾಶ್‌ ಮುಚ್ಚಲ್‌ ಮದುವೆ ಮುಂದೂಡಿಕೆಯಾಗಿತ್ತು.…

28 mins ago

ಅರಣ್ಯ ಕಾಯುವುದಕ್ಕೆ ರೆಡಿ ಆಯ್ತು ಬೆಲ್ಜಿಯಂ ಶ್ವಾನ

ಗುಂಡ್ಲುಪೇಟೆ: ಬಂಡೀಪುರ ರಾಜ್ಯದಲ್ಲೇ ಅತಿ ಹೆಚ್ಚು ಹುಲಿ, ಚಿರತೆ ಹಾಗೂ ಆನೆಗಳಿರುವ ತಾಣ. ಈ ಅರಣ್ಯದಲ್ಲಿ ದೇಶದಲ್ಲೇ ಮೊದಲ ಟ್ರ್ಯಾಕರ್…

52 mins ago

ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಮುಂದೂಡಿಕೆ

ಬೆಳಗಾವಿ: ಬೆಳಗಾವಿಯಲ್ಲಿ ನಾಳೆಯಿಂದ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಈ ಹಿನ್ನೆಲೆಯಲ್ಲಿ ನಿಗದಿಯಾಗಿದ್ದ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಮುಂದೂಡಿಕೆ…

54 mins ago

ಗೋವಾ ನೈಟ್‌ಕ್ಲಬ್‌ನಲ್ಲಿ ಬೆಂಕಿ ದುರಂತ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶ ನೀಡಿದ ಸಿಎಂ ಪ್ರಮೋದ್‌ ಸಾವಂತ್‌

ಪಣಜಿ: ಗೋವಾದ ನೈಟ್‌ಕ್ಲಬ್‌ನಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ 25 ಜನರು ಸಾವನ್ನಪ್ಪಿರುವ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ತನಿಖೆಗೆ ಆದೇಶ…

1 hour ago

ನನ್ನದು ಕೃಷ್ಣತತ್ವ ಕಾಂಗ್ರೆಸ್ ಪಕ್ಷದ್ದು ಕಂಸತತ್ವ: ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು

ನವದೆಹಲಿ: ಭಗವದ್ಗೀತೆಯನ್ನು ಶಾಲಾ ಮಕ್ಕಳಿಗೆ ಬೋಧಿಸಬೇಕು ಎಂದು ಪುನರುಚ್ಚರಿಸಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು, ತಮ್ಮನ್ನು ಮನುವಾದಿ ಎಂದ ಮುಖ್ಯಮಂತ್ರಿ…

1 hour ago