ಕ್ರೀಡೆ

ಶುಭಮನ್ ಗಿಲ್ ಮುಂದಿನ ದಶಕಗಳಲ್ಲಿ ಕ್ರಿಕೆಟ್ ಜಗತ್ತನ್ನು ಆಳಲಿದ್ದಾರೆ: ಹೇಡನ್

ನವದೆಹಲಿ: ಭಾರತ ಕ್ರಿಕೆಟ್‌ ತಂಡದ ಯುವ ಬ್ಯಾಟರ್ ಶುಭ್‌ಮನ್‌ ಗಿಲ್ ಅವರು ಅತ್ಯಂತ ಪ್ರತಿಭಾನ್ವಿತ ಆಟಗಾರರಾಗಿದ್ದು, ದೊಡ್ಡ ಮೊತ್ತದ ರನ್ನುಗಳನ್ನು ಕಲೆ ಹಾಕುವ ಮೂಲಕ ಮುಂದಿನ ದಶಕಗಳಲ್ಲಿ ಕ್ರಿಕೆಟ್‌ ಜಗತ್ತಿನಲ್ಲಿ ಮೆರೆಯಲಿದ್ದಾರೆ ಎಂದು ಆಸ್ಟ್ರೇಲಿಯದ ಹೆಸರಾಂತ ಮಾಜಿ ಕ್ರಿಕೆಟಿಗ ಮ್ಯಾಥ್ಯು ಹೇಡನ್ ಅವರು ಅಭಿಪ್ರಾಯಪಟ್ಟರು.

ಕೇವಲ 23 ವರ್ಷದ ಗಿಲ್ ಅವರು ಟೆಸ್ಟ್‌ನಲ್ಲಿ 2 ಶತಕ, ಏಕದಿನ 4, ಹಾಗೂ ಟಿ20ಯಲ್ಲಿ 1 ಶತಕಗಳನ್ನು ದಾಖಲಿಸಿದ್ದಾರೆ.

ಗುರುವಾರ ಇಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಗುಜರಾತ್ ಟೈಟಾನ್ಸ್ ಆರು ವಿಕೆಟ್‌ಗಳಿಂದ ಗಳಿಸಿದ ಜಯದಲ್ಲಿ ಗಿಲ್ ಮುಖ್ಯ ಪಾತ್ರವಹಿಸಿದರು. ಅವರು 49 ಎಸೆತಗಳಲ್ಲಿ 67 ರನ್ ಗಳಿಸುವುದರ ಮೂಲಕ ಬ್ಯಾಟಿಂಗ್ ಕ್ಲಾಸ್ ತೋರಿಸಿದರು.

‘ಗಿಲ್ ಅವರು ಆಟದಲ್ಲಿ ನಿಯಂತ್ರಣ ಸಾಧಿಸಿ ಆಡುವ ಸಾಮರ್ಥ್ಯವು ನನ್ನನ್ನು ಆಕರ್ಷಿಸಿದೆ‘ ಎಂದೂ ಹೇಡನ್ ಹೇಳಿದರು.

‘ಪಂಜಾಬ್ ಕಿಂಗ್ಸ್‌ನ ಶಿಸ್ತುಬದ್ಧ ಬೌಲಿಂಗ್ ದಾಳಿ ಸಂಘಟಿಸಿದರೂ ಗುಜರಾತ್ ಟೈಟನ್ಸ್ 154 ರನ್ ಬೆನ್ನಟ್ಟುವಲ್ಲಿ ಸಫಲವಾಯಿತು. ಟೈಟನ್ಸ್‌ನ ಬ್ಯಾಟಿಂಗ್ ಜವಾಬ್ದಾರಿಯನ್ನು ತೆಗೆದುಕೊಂಡು ಮತ್ತು ಆಳವಾಗಿ ಬ್ಯಾಟ್ ಮಾಡುವಲು ಶುಭಮನ್ ಗಿಲ್ ಅವರೇ ಬೇಕಾಗಿದ್ದರು. ಅವರು ಆಡಿದ ಕೆಲವು ಹೊಡೆತಗಳು ಕಣ್ಣಿಗೆ ಖುಷಿ ಕೊಟ್ಟವು. ಅಂಥ ಕ್ಲಾಸ್ ಆಟಗಾರ ಅವರು. ಮುಂದಿನ ಒಂದು ದಶಕದವರೆಗೆ ವಿಶ್ವ ಕ್ರಿಕೆಟ್‌ನಲ್ಲಿ ಗಿಲ್ ಪ್ರಾಬಲ್ಯ ಸಾಧಿಸಲಿದ್ದಾರೆ‘ ಹೇಡನ್ ವಿಶ್ವಾಸ ವ್ಯಕ್ತಪಡಿಸಿದರು.

ಗುರುವಾರ ಪಂಜಾಬ್ ಕಿಂಗ್ಸ್ ವಿರುದ್ಧ ಗಿಲ್ ದಾಖಲಿಸಿದ 67 ರನ್‌ಗಳಲ್ಲಿ 7 ಬೌಂಡರಿ ಹಾಗೂ 1 ಸಿಕ್ಸ್ ಕೂಡಿದ್ದವು.

andolanait

Recent Posts

ಮುಡಾ ಪ್ರಕರಣ: ಮುಡಾ ಕಚೇರಿಗಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕ ಫೈಲ್‌: ಶ್ರೀವತ್ಸ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್‌ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್‌.ಶ್ರೀವತ್ಸ…

4 mins ago

ಮುಡಾ ಕಚೇರಿ ಮೇಲೆ ಇಡಿ ದಾಳಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ

ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…

1 hour ago

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

2 hours ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

2 hours ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

2 hours ago

ಮುಡಾ ಪ್ರಕರಣ: ಮುಡಾ ಕಚೇರಿಯ ಮೇಲೆ ಇ.ಡಿ ದಾಳಿ

ಮೈಸೂರು: ಮುಡಾದಲ್ಲಿ ಹಗರಣ ನಡೆದಿದೆ ಎಂದು ಆರ್‌ಐಟಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿದ್ದರು. ಈ ದೂರಿನ ಆಧಾರದ…

3 hours ago