ಕ್ರೀಡೆ

ಶುಭಮನ್ ಗಿಲ್ ಮುಂದಿನ ದಶಕಗಳಲ್ಲಿ ಕ್ರಿಕೆಟ್ ಜಗತ್ತನ್ನು ಆಳಲಿದ್ದಾರೆ: ಹೇಡನ್

ನವದೆಹಲಿ: ಭಾರತ ಕ್ರಿಕೆಟ್‌ ತಂಡದ ಯುವ ಬ್ಯಾಟರ್ ಶುಭ್‌ಮನ್‌ ಗಿಲ್ ಅವರು ಅತ್ಯಂತ ಪ್ರತಿಭಾನ್ವಿತ ಆಟಗಾರರಾಗಿದ್ದು, ದೊಡ್ಡ ಮೊತ್ತದ ರನ್ನುಗಳನ್ನು ಕಲೆ ಹಾಕುವ ಮೂಲಕ ಮುಂದಿನ ದಶಕಗಳಲ್ಲಿ ಕ್ರಿಕೆಟ್‌ ಜಗತ್ತಿನಲ್ಲಿ ಮೆರೆಯಲಿದ್ದಾರೆ ಎಂದು ಆಸ್ಟ್ರೇಲಿಯದ ಹೆಸರಾಂತ ಮಾಜಿ ಕ್ರಿಕೆಟಿಗ ಮ್ಯಾಥ್ಯು ಹೇಡನ್ ಅವರು ಅಭಿಪ್ರಾಯಪಟ್ಟರು.

ಕೇವಲ 23 ವರ್ಷದ ಗಿಲ್ ಅವರು ಟೆಸ್ಟ್‌ನಲ್ಲಿ 2 ಶತಕ, ಏಕದಿನ 4, ಹಾಗೂ ಟಿ20ಯಲ್ಲಿ 1 ಶತಕಗಳನ್ನು ದಾಖಲಿಸಿದ್ದಾರೆ.

ಗುರುವಾರ ಇಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಗುಜರಾತ್ ಟೈಟಾನ್ಸ್ ಆರು ವಿಕೆಟ್‌ಗಳಿಂದ ಗಳಿಸಿದ ಜಯದಲ್ಲಿ ಗಿಲ್ ಮುಖ್ಯ ಪಾತ್ರವಹಿಸಿದರು. ಅವರು 49 ಎಸೆತಗಳಲ್ಲಿ 67 ರನ್ ಗಳಿಸುವುದರ ಮೂಲಕ ಬ್ಯಾಟಿಂಗ್ ಕ್ಲಾಸ್ ತೋರಿಸಿದರು.

‘ಗಿಲ್ ಅವರು ಆಟದಲ್ಲಿ ನಿಯಂತ್ರಣ ಸಾಧಿಸಿ ಆಡುವ ಸಾಮರ್ಥ್ಯವು ನನ್ನನ್ನು ಆಕರ್ಷಿಸಿದೆ‘ ಎಂದೂ ಹೇಡನ್ ಹೇಳಿದರು.

‘ಪಂಜಾಬ್ ಕಿಂಗ್ಸ್‌ನ ಶಿಸ್ತುಬದ್ಧ ಬೌಲಿಂಗ್ ದಾಳಿ ಸಂಘಟಿಸಿದರೂ ಗುಜರಾತ್ ಟೈಟನ್ಸ್ 154 ರನ್ ಬೆನ್ನಟ್ಟುವಲ್ಲಿ ಸಫಲವಾಯಿತು. ಟೈಟನ್ಸ್‌ನ ಬ್ಯಾಟಿಂಗ್ ಜವಾಬ್ದಾರಿಯನ್ನು ತೆಗೆದುಕೊಂಡು ಮತ್ತು ಆಳವಾಗಿ ಬ್ಯಾಟ್ ಮಾಡುವಲು ಶುಭಮನ್ ಗಿಲ್ ಅವರೇ ಬೇಕಾಗಿದ್ದರು. ಅವರು ಆಡಿದ ಕೆಲವು ಹೊಡೆತಗಳು ಕಣ್ಣಿಗೆ ಖುಷಿ ಕೊಟ್ಟವು. ಅಂಥ ಕ್ಲಾಸ್ ಆಟಗಾರ ಅವರು. ಮುಂದಿನ ಒಂದು ದಶಕದವರೆಗೆ ವಿಶ್ವ ಕ್ರಿಕೆಟ್‌ನಲ್ಲಿ ಗಿಲ್ ಪ್ರಾಬಲ್ಯ ಸಾಧಿಸಲಿದ್ದಾರೆ‘ ಹೇಡನ್ ವಿಶ್ವಾಸ ವ್ಯಕ್ತಪಡಿಸಿದರು.

ಗುರುವಾರ ಪಂಜಾಬ್ ಕಿಂಗ್ಸ್ ವಿರುದ್ಧ ಗಿಲ್ ದಾಖಲಿಸಿದ 67 ರನ್‌ಗಳಲ್ಲಿ 7 ಬೌಂಡರಿ ಹಾಗೂ 1 ಸಿಕ್ಸ್ ಕೂಡಿದ್ದವು.

andolanait

Recent Posts

ದಳಪತಿ ವಿಜಯ್‌ ರ‍್ಯಾಲಿಯಲ್ಲಿ ನಿಲ್ಲದ ದುರಂತ : ಮತ್ತೊಬ್ಬನ ಸಾವು

ಸೇಲಂ : ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ರ‍್ಯಾಲಿ ವೇಳೆ ಕುಸಿದು ಬಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗದ ಮಧ್ಯೆ…

25 mins ago

ರೈಲ್‌ಒನ್‌ ಆಪ್‌ : ಒಂದೇ ಕಡೆ ಸಿಗಲಿದೆ ರೈಲು ಸೌಲಭ್ಯಗಳು

ಬೆಂಗಳೂರು : ಭಾರತೀಯ ರೈಲ್ವೆಯು ತನ್ನ ಅಧಿಕೃತ ಆಪ್ ‘ರೈಲ್‌ಒನ್’ ಅನ್ನು ಇತ್ತೀಚೆಗೆ ಬಿಡುಗಡೆ ಮಾಡಿದೆ. ಇದರಲ್ಲಿ ರೈಲ್ವೆ ಸೇವೆಗಳೆಲ್ಲವೂ…

36 mins ago

ತಾರಿಖ್‌ ರೆಹಮಾನ್‌ ಬಾಂಗ್ಲಾದೇಶದ ನೂತನ ಪ್ರಧಾನಿ

ಢಾಕಾ : ಬಾಂಗ್ಲಾದೇಶ ಸಾರ್ವತ್ರಿಕ ಚುನಾವಣೆಯಲ್ಲಿ ಬಾಂಗ್ಲಾದೇಶ ನ್ಯಾಷನಲ್ ಪಾರ್ಟಿ(ಬಿಎನ್‌ಪಿ) ಗೆದ್ದು ಬೀಗಿದೆ. ಸಂಸತ್ತಿನ ಒಟ್ಟು 300 ಸ್ಥಾನಗಳ ಪೈಕಿ…

47 mins ago

ಶಾಲಾ ಮಕ್ಕಳಿಗೆ ಕಳಪೆ ಊಟ ; ಮುಖ್ಯ ಶಿಕ್ಷಕಿ ಅಮಾನತ್ತು

ಕೊಳ್ಳೇಗಾಲ : ತಾಲ್ಲೂಕಿನ ಸತ್ತೇಗಾಲ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಕಳಪೆ ಊಟ ನೀಡಿದ್ದ ಆರೋಪದ ಮೇಲೆ…

1 hour ago

ಹೃದಯಾಘಾತದಿಂದ ಹಿರಿಯ ನಿರ್ದೇಶಕ ಜೋ ಸೈಮನ್ ನಿಧನ

ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಜೋ ಸೈಮನ್ ಅವರು ಹಠಾತ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 80 ವರ್ಷ…

1 hour ago

ಪ್ರೇಮಿಗಳ ದಿನಾಚರಣೆಗೆ : ನಂದಿ ಬೆಟ್ಟಕ್ಕೆ ಪ್ರವೇಶ ನಿಷೇಧ

ಚಿಕ್ಕಬಳ್ಳಾಪುರ : ಬೆಂಗಳೂರಿನ ಸಮೀಪದ ಅತ್ಯಂತ ಪ್ರಸಿದ್ಧ ಪ್ರವಾಸಿ ತಾಣ ನಂದಿ ಬೆಟ್ಟಗೆ ಫೆಬ್ರವರಿ 14 ರಂದು ಪ್ರೇಮಿಗಳ ದಿನ…

2 hours ago