ಕ್ರೀಡೆ

ಶುಭಮನ್ ಗಿಲ್ ಮುಂದಿನ ದಶಕಗಳಲ್ಲಿ ಕ್ರಿಕೆಟ್ ಜಗತ್ತನ್ನು ಆಳಲಿದ್ದಾರೆ: ಹೇಡನ್

ನವದೆಹಲಿ: ಭಾರತ ಕ್ರಿಕೆಟ್‌ ತಂಡದ ಯುವ ಬ್ಯಾಟರ್ ಶುಭ್‌ಮನ್‌ ಗಿಲ್ ಅವರು ಅತ್ಯಂತ ಪ್ರತಿಭಾನ್ವಿತ ಆಟಗಾರರಾಗಿದ್ದು, ದೊಡ್ಡ ಮೊತ್ತದ ರನ್ನುಗಳನ್ನು ಕಲೆ ಹಾಕುವ ಮೂಲಕ ಮುಂದಿನ ದಶಕಗಳಲ್ಲಿ ಕ್ರಿಕೆಟ್‌ ಜಗತ್ತಿನಲ್ಲಿ ಮೆರೆಯಲಿದ್ದಾರೆ ಎಂದು ಆಸ್ಟ್ರೇಲಿಯದ ಹೆಸರಾಂತ ಮಾಜಿ ಕ್ರಿಕೆಟಿಗ ಮ್ಯಾಥ್ಯು ಹೇಡನ್ ಅವರು ಅಭಿಪ್ರಾಯಪಟ್ಟರು.

ಕೇವಲ 23 ವರ್ಷದ ಗಿಲ್ ಅವರು ಟೆಸ್ಟ್‌ನಲ್ಲಿ 2 ಶತಕ, ಏಕದಿನ 4, ಹಾಗೂ ಟಿ20ಯಲ್ಲಿ 1 ಶತಕಗಳನ್ನು ದಾಖಲಿಸಿದ್ದಾರೆ.

ಗುರುವಾರ ಇಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಗುಜರಾತ್ ಟೈಟಾನ್ಸ್ ಆರು ವಿಕೆಟ್‌ಗಳಿಂದ ಗಳಿಸಿದ ಜಯದಲ್ಲಿ ಗಿಲ್ ಮುಖ್ಯ ಪಾತ್ರವಹಿಸಿದರು. ಅವರು 49 ಎಸೆತಗಳಲ್ಲಿ 67 ರನ್ ಗಳಿಸುವುದರ ಮೂಲಕ ಬ್ಯಾಟಿಂಗ್ ಕ್ಲಾಸ್ ತೋರಿಸಿದರು.

‘ಗಿಲ್ ಅವರು ಆಟದಲ್ಲಿ ನಿಯಂತ್ರಣ ಸಾಧಿಸಿ ಆಡುವ ಸಾಮರ್ಥ್ಯವು ನನ್ನನ್ನು ಆಕರ್ಷಿಸಿದೆ‘ ಎಂದೂ ಹೇಡನ್ ಹೇಳಿದರು.

‘ಪಂಜಾಬ್ ಕಿಂಗ್ಸ್‌ನ ಶಿಸ್ತುಬದ್ಧ ಬೌಲಿಂಗ್ ದಾಳಿ ಸಂಘಟಿಸಿದರೂ ಗುಜರಾತ್ ಟೈಟನ್ಸ್ 154 ರನ್ ಬೆನ್ನಟ್ಟುವಲ್ಲಿ ಸಫಲವಾಯಿತು. ಟೈಟನ್ಸ್‌ನ ಬ್ಯಾಟಿಂಗ್ ಜವಾಬ್ದಾರಿಯನ್ನು ತೆಗೆದುಕೊಂಡು ಮತ್ತು ಆಳವಾಗಿ ಬ್ಯಾಟ್ ಮಾಡುವಲು ಶುಭಮನ್ ಗಿಲ್ ಅವರೇ ಬೇಕಾಗಿದ್ದರು. ಅವರು ಆಡಿದ ಕೆಲವು ಹೊಡೆತಗಳು ಕಣ್ಣಿಗೆ ಖುಷಿ ಕೊಟ್ಟವು. ಅಂಥ ಕ್ಲಾಸ್ ಆಟಗಾರ ಅವರು. ಮುಂದಿನ ಒಂದು ದಶಕದವರೆಗೆ ವಿಶ್ವ ಕ್ರಿಕೆಟ್‌ನಲ್ಲಿ ಗಿಲ್ ಪ್ರಾಬಲ್ಯ ಸಾಧಿಸಲಿದ್ದಾರೆ‘ ಹೇಡನ್ ವಿಶ್ವಾಸ ವ್ಯಕ್ತಪಡಿಸಿದರು.

ಗುರುವಾರ ಪಂಜಾಬ್ ಕಿಂಗ್ಸ್ ವಿರುದ್ಧ ಗಿಲ್ ದಾಖಲಿಸಿದ 67 ರನ್‌ಗಳಲ್ಲಿ 7 ಬೌಂಡರಿ ಹಾಗೂ 1 ಸಿಕ್ಸ್ ಕೂಡಿದ್ದವು.

andolanait

Recent Posts

ಪಿರಿಯಾಪಟ್ಟಣ | ನಿಲ್ಲದ ಸರ್ವರ್‌ ಸಮಸ್ಯೆ ; ಪಡಿತರ ಪಡೆಯಲು ಪರದಾಟ

ಪಿರಿಯಾಪಟ್ಟಣ : ಪಿರಿಯಾಪಟ್ಟಣದಲ್ಲಿ ಸರ್ವರ್ ಸಮಸ್ಯೆಯಿಂದಾಗಿ ಜನರು ಪಡಿತರ ಪಡೆಯಲು ಪರದಾಟ ನಡೆಸುವ ಪರಿಸ್ಥಿತಿ ಎದುರಾಗಿದೆ. ಜನಸಾಮಾನ್ಯರು ಎಂದಿನಂತೆ ಪ್ರತಿ…

6 hours ago

ಗೌರವಯುತವಾಗಿ ನಡೆದುಕೊಂಡ ಸಿದ್ದರಾಮಯ್ಯ : ಮಾಜಿ ಸಂಸದ ಪ್ರತಾಪ್‌ ಸಿಂಹ

ಮೈಸೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯನವರ ಮುಂದಿನ ಜೀವನ ಚೆನ್ನಾಗಿರಲಿ. ನೂತನ ಸಿಎಂ ಆಗಲಿರುವ ಡಿ.ಕೆ.ಶಿವಕುಮಾರ್ ಉತ್ತಮ…

7 hours ago

ನಾಳೆ ಸಿಎಲ್‌ಪಿ ಸಭೆ ಕರೆದಿದ್ದೇವೆ, ಸಿದ್ದರಾಮಯ್ಯ ಜತೆ ಚರ್ಚಿಸಿದ್ದೇನೆ : ಡಿ.ಕೆ.ಶಿವಕುಮಾರ್‌

ಹೊಸದಿಲ್ಲಿ : ಕಳೆದ ಎರಡ್ಮೂರು ದಿನಗಳಿಂದ ಮೌನಕ್ಕೆ ಶರಣಾಗಿದ್ದ ಡಿಕೆ ಶಿವಕುಮಾರ್ ಕೊನೆಗೂ ತುಟಿ ಬಿಚ್ಚಿ ಮಾತನಾಡಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ…

8 hours ago

ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಈ…

13 hours ago

ರಾಜ್ಯ ಸಚಿವ ಸಂಪುಟ ವಿಸರ್ಜನೆ: ಸಚಿವರ ಸರ್ಕಾರಿ ವಾಹನಗಳು ವಾಪಸ್‌

ಬೆಂಗಳೂರು: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ನೀಡಿದ್ದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಅಂಗೀಕರಿಸಿದ್ದಾರೆ. ರಾಜೀನಾಮೆ ಅಂಗೀಕಾರವಾದ ಬೆನ್ನಲ್ಲೇ…

14 hours ago

ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಡಿ.ಕೆ.ಶಿವಕುಮಾರ್‌

ಬೆಂಗಳೂರು: ದೇವರು ವರನೂ ಕೊಡಲ್ಲ. ಶಾಪನೂ ಕೊಡಲ್ಲ. ಅವಕಾಶ ಮಾತ್ರ ಕೊಡುತ್ತಾನೆ. ಆ ಕೊಟ್ಟಿರುವ ಅವಕಾಶದಲ್ಲಿ ನಾವು ಏನು ಸಾಧನೆ…

14 hours ago