ಕ್ರೀಡೆ

ದ್ರಾವಿಡ್‌ ದಾಖಲೆ ಸರಿಗಟ್ಟಿದ ಸ್ಮಿತ್‌

ಗಾಲೆ: ಆಸ್ರೇಲಿಯಾದ ಟೆಸ್ಟ್‌ ತಂಡದ ಪ್ರಮುಖ ಆಟಗಾರ ಸ್ಟೀವ್‌ ಸ್ಮಿತ್‌ ಅಂತರಾಷ್ಟ್ರೀಯ ಟೆಸ್ಟ್‌ ಕ್ರಿಕೆಟ್‌ನಲ್ಲಿ 36ನೇ ಶತಕದ ಸಾಧನೆ ಮಾಡುವ ಮೂಲಕ ರಾಹುಲ್‌ ದ್ರಾವಿಡ್‌ ಅವರ ದಾಖಲೆ ಸರಿಗಟ್ಟಿದ್ದಾರೆ.

ಗಾಲೆಯಲ್ಲಿ ಶ್ರೀಲಂಕಾದ ವಿರುದ್ಧ ನಡೆಯುತ್ತಿರುವ ಎರಡನೇ ಟೆಸ್ಟ್‌ ಪಂದ್ಯದಲ್ಲಿ ಸ್ಟೀವ್‌ ಸ್ಮಿತ್‌ ಶತಕದ ಸಾಧನೆ ಮಾಡುವ ಮೂಲಕ ಭಾರತದ ಮಾಜಿ ಆಟಗಾರ ರಾಹುಲ್‌ ದ್ರಾವಿಡ್‌ ಮತ್ತು ಇಂಗ್ಲೆಂಡ್‌ ತಂಡದ ಬ್ಯಾಟರ್‌ ಜೋ ರೂಟ್‌ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ.

116 ನೇ ಪಂದ್ಯ ಆಡುತ್ತಿರುವ (206 ಇನ್ನಿಂಗ್ಸ್)‌ ಸ್ಮಿತ್‌ 56.90ರ ಸರಾಸರಿಯಲ್ಲಿ ಒಟ್ಟು 10,243 ರನ್‌ ಪೇರಿಸಿದ್ದಾರೆ.

ಉತ್ತಮ ಲಯದಲ್ಲಿರುವ ಸ್ಟೀವ್‌ ಸ್ಮಿತ್‌, ಶ್ರೀಲಂಕಾದ ಮಾಜಿ ಆಟಗಾರ ಕುಮಾರ ಸಂಗಕ್ಕಾರ ಅವರ  ವೈಯುಕ್ತಿಕ ಶತಕದ ಸಾಧನೆ  ಮುರಿಯುವತ್ತ ಕಣ್ಣಿಟ್ಟಿದ್ದಾರೆ.

ದ್ವೀತಿಯ ಟೆಸ್ಟ್‌ ಪಂದ್ಯದಲ್ಲಿ ಶ್ರೀಲಂಕಾ ಪ್ರಥಮ ಇನ್ನಿಂಗ್ಸ್‌ನಲ್ಲಿ 257 ರನ್‌ಗಳಿಸಿ ಆಲೌಟ್‌ ಆಗಿದೆ. ಇದಕ್ಕುತ್ತರವಾಗಿ ಪ್ರಥಮ ಇನ್ನಿಂಗ್ಸ್‌ ಆರಂಭಿಸಿರುವ ಆಸ್ಟ್ರೇಲಿಯಾ ತಂಡ ಎರಡನೇ ದಿನದಾಂತ್ಯಕ್ಕೆ 3 ವಿಕೆಟ್‌ ನಷ್ಟಕ್ಕೆ 330 ರನ್‌ಗಳಿಸಿ 73 ರನ್‌ಗಳ ಮುನ್ನಡೆ ಕಾಯ್ದುಕೊಂಡಿದೆ.

ಆಂದೋಲನ ಡೆಸ್ಕ್

Recent Posts

ಪ್ರತಿಯೊಂದು ಸಮುದಾಯದ ಕಲ್ಯಾಣಕ್ಕೆ ಸರ್ಕಾರ ಬದ್ಧ: ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ದಲಿತರು, ಹಿಂದುಳಿದವರು, ಆದಿವಾಸಿಗಳು ಸೇರಿದಂತೆ ಪ್ರತಿಯೊಂದು ಸಮುದಾಯದ ಕಲ್ಯಾಣಕ್ಕೆ ಸರ್ಕಾರ ಬದ್ಧವಾಗಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು…

15 mins ago

ಎಲ್ಲಾ ಪೌರ ಕಾರ್ಮಿಕರನ್ನು ಖಾಯಂಗೊಳಿಸಿ: ಎಂಎಲ್‌ಸಿ ಶಿವಕುಮಾರ್‌ ಒತ್ತಾಯ

ಬೆಂಗಳೂರು: ರಾಜ್ಯದಲ್ಲಿನ ನಗರಪಾಲಿಕೆ ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ಗುತ್ತಿಗೆ ಹಾಗೂ ನೇರ ಪಾವತಿಯಲ್ಲಿ ಕೆಲಸ ಮಾಡುತ್ತಿರುವ ಎಲ್ಲಾ ಪೌರಕಾರ್ಮಿಕರನ್ನು ಖಾಯಂ…

1 hour ago

ವಿಮಾನ ಪತನಕ್ಕೂ ಮುನ್ನ ಅಜಿತ್‌ ಪವಾರ್‌ ಕೊನೆಯ ಪೋಸ್ಟ್‌ ವೈರಲ್‌

ಬಾರಾಮತಿ: ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ಅವರಿಂದು ವಿಮಾನ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ದುರಂತ ಸಂಭವಿಸುವ ಕೇವಲ 23 ನಿಮಿಷಗಳ ಮೊದಲು…

2 hours ago

ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ನಿಧನಕ್ಕೆ ಗಣ್ಯಾತಿಗಣ್ಯರ ಸಂತಾಪ

ಬೆಂಗಳೂರು: ಮಹಾರಾಷ್ಟ್ರದ ಬಾರಾಮತಿ ಬಳಿ ಸಂಭವಿಸಿದ ಭೀಕರ ವಿಮಾನ ಅಪಘಾತದಲ್ಲಿ ಡಿಸಿಎಂ ಅಜಿತ್‌ ಪವಾರ್‌ ನಿಧನರಾಗಿದ್ದು, ಗಣ್ಯಾತಿಗಣ್ಯರು ಸಂತಾಪ ಸೂಚಿಸಿದ್ದಾರೆ.…

2 hours ago

ವಿಮಾನ ದುರಂತದಲ್ಲಿ ಅಜಿತ್‌ ಪವಾರ್‌ ದುರ್ಮರಣ: ಪ್ರಧಾನಿ ಮೋದಿ ಸಂತಾಪ

ನವದೆಹಲಿ: ಇಂದು ಬೆಳಿಗ್ಗೆ ಮಹಾರಾಷ್ಟ್ರದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ನಡೆದ ಭೀಕರ ವಿಮಾನ ಅಪಘಾತದಲ್ಲಿ ಅಜಿತ್‌ ಪವಾರ್‌ ನಿಧನರಾಗಿದ್ದಾರೆ. ಅಜಿತ್‌…

3 hours ago

ಮಹಾರಾಷ್ಟ್ರದಲ್ಲಿ ಖಾಸಗಿ ವಿಮಾನ ಪತನ: ಡಿಸಿಎಂ ಅಜಿತ್‌ ಪವಾರ್‌ ಸೇರಿ 5 ಮಂದಿ ದುರ್ಮರಣ

ಬಾರಾಮತಿ: ಮಹಾರಾಷ್ಟ್ರದ ಬಾರಾಮತಿಯಲ್ಲಿ ನಡೆದ ವಿಮಾನ ಅಪಘಾತದಲ್ಲಿ ಡಿಸಿಎಂ ಅಜಿತ್ ಪವಾರ್ ಸಾವನ್ನಪ್ಪಿದ್ದಾರೆ. ಎನ್‌ಸಿಪಿ ಮುಖ್ಯಸ್ಥ ಮತ್ತು ಮಹಾರಾಷ್ಟ್ರದ ಉಪಮುಖ್ಯಮಂತ್ರಿ…

4 hours ago