ಕ್ರೀಡೆ

ಓವಲ್ ನಲ್ಲಿ ಸ್ಮಿತ್ ಭರ್ಜರಿ ಶತಕ: ದ್ರಾವಿಡ್, ಪಾಂಟಿಂಗ್ ದಾಖಲೆ ಮುರಿದ ಸ್ಟೀವ್

ಲಂಡನ್: ಇಲ್ಲಿನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಐಸಿಸಿ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯದ ಎರಡನೇ ದಿನದಾಟ ಆರಂಭವಾಗಿದೆ. ದಿನದ ಮೊದಲ ಓವರ್ ನಲ್ಲೇ ಸ್ಟೀವ್ ಸ್ಮಿತ್ ಅವರು ತಮ್ಮ ಶತಕ ಪೂರೈಸಿ ಸಂಭ್ರಮಿಸಿದರು.

ಮೊದಲ ದಿನದಾಟದ ಅಂತ್ಯಕ್ಕೆ 227 ಎಸೆತ ಎದುರಿಸಿ 95 ರನ್ ಗಳಿಸಿ ಅಜೇಯರಾಗಿದ್ದ ಸ್ಟೀವ್ ಸ್ಮಿತ್ ತಾನೆದುರಿಸಿದ ಮೊದಲೆರಡು ಎಸೆತಗಳನ್ನೇ ಬೌಂಡರಿಗೆ ಬಾರಿಸಿ ತಮ್ಮ ಶತಕ ಪೂರೈಸಿದರು. ಟೆಸ್ಟ್ ಬಾಳ್ವೆಯ 31ನೇ ಶತಕ ಬಾರಿಸಿದರು.

ಈ ಶತಕದ ವೇಳೆ ಸ್ಮಿತ್ ಹಲವು ದಾಖಲೆಗಳನ್ನು ಮುರಿದರು. ಆಸ್ಟ್ರೇಲಿಯಾ ಪರ ಟೆಸ್ಟ್ ಕ್ರಿಕೆಟ್ ನಲ್ಲಿ ಅತೀ ಹೆಚ್ಚು ಶತಕ ಬಾರಿಸಿದವರ ಪಟ್ಟಿಯಲ್ಲಿ ಸ್ಮಿತ್ ಮೂರನೇ ಸ್ಥಾನಕ್ಕೆ ಜಿಗಿದರು. 30 ಶತಕ ಬಾರಿಸಿದ ಮ್ಯಾಥ್ಯೂ ಹೇಡನ್ ಮೂರನೇ ಸ್ಥಾನಕ್ಕೆ ಇಳಿದರು. ಸ್ಮಿತ್ ಗಿಂತ ಹೆಚ್ಚು ಟೆಸ್ಟ್ ಶತಕ ಗಳಿಸಿದವರೆಂದರೆ ಸ್ಟೀವ್ ವಾ (32) ಮತ್ತು ರಿಕಿ ಪಾಂಟಿಂಗ್ (41)

ಭಾರತದ ವಿರುದ್ಧ ಅತೀ ಹೆಚ್ಚು ಟೆಸ್ಟ್ ಶತಕ ಗಳಿಸಿದವರ ಪಟ್ಟಿಯಲ್ಲೂ ಸ್ಮಿತ್ ಜಂಟಿಯಾಗಿ ಮೊದಲ ಸ್ಥಾನದಲ್ಲಿದ್ದಾರೆ. ಜೋ ರೂಟ್ ಮತ್ತು ಸ್ಮಿತ್ ಭಾರತದ ವಿರುದ್ಧ ತಲಾ ಒಂಬತ್ತು ಶತಕ ಬಾರಿಸಿದ್ದಾರೆ. ರಿಕಿ ಪಾಂಟಿಂಗ್ ಮತ್ತು ವಿವಿಯನ್ ರಿಚರ್ಡ್ ತಲಾ ಎಂಟು ಶತಕ ಗಳಿಸಿದ್ದರು.

ಇಂಗ್ಲೆಂಡ್ ನೆಲದಲ್ಲಿ ಅತೀ ಹೆಚ್ಚು ಟೆಸ್ಟ್ ಶತಕ ಗಳಿಸಿದ ವಿದೇಶಿ ಆಟಗಾರರ ಪಟ್ಟಿಯಲ್ಲಿ ಸ್ಮಿತ್ ಮೂರನೇ ಸ್ಥಾನಕ್ಕೇರಿದರು. (7 ಶತಕ) 11 ಶತಕ ಬಾರಿಸಿದ್ದ ಡಾನ್ ಬ್ರಾಡ್ಮನ್ ಮತ್ತು 7 ಶತಕ ಗಳಿಸಿದ ಸ್ಟೀವ್ ವಾ ಮೊದಲೆರಡು ಸ್ಥಾನದಲ್ಲಿದ್ದಾರೆ. ರಾಹುಲ್ ದ್ರಾವಿಡ್ 6 ಶತಕ ಬಾರಿಸಿದ್ದರು.

andolanait

Recent Posts

ಅಲರ್ಟ್‌ ಆದ ಲಾಟ್ಕರ್‌ : ಡ್ರಗ್ಸ್‌ ಜಾಲಮುಕ್ತಕ್ಕೆ ಪಣ : ದಿಢೀರ್‌ ದಾಳಿ

ಮೈಸೂರು : ನಗರವನ್ನು ಡ್ರಗ್ಸ್ ಜಾಲಮುಕ್ತ ಮಾಡಬೇಕು ಎಂಬ ತೀರ್ಮಾನಕ್ಕೆ ಬಂದಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು…

2 hours ago

ಫೆ.8ರಂದು ಸ್ವಚ್ಛತಾ ಓಟ : ʻಓಡೋಣ ಮೈಸೂರಿಗಾಗಿ-ಒಂದಾಗೋಣ ಸ್ವಚ್ಛತೆಗಾಗಿʼ

ಮೈಸೂರು : ಸ್ವಚ್ಛತೆಗೆ ಸಂಬಂಧಿಸಿದಂತೆ ಮತ್ತೆ ಒಂದನೇ ಸ್ಥಾನ ಪಡೆಯುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ನಗರಪಾಲಿಕೆ ವತಿಯಿಂದ…

3 hours ago

ಗ್ರಾಮ ಪಂಚಾಯ್ತಿ ಅಧಿಕಾರ ಅವಧಿ ಮುಕ್ತಾಯ : ಈಗಿರುವ ಸದಸ್ಯರನ್ನೇ ಮುಂದುವರೆಸುತ್ತಾ ಸರ್ಕಾರ?

ಬೆಂಗಳೂರು : ಮಾರ್ಚ್ ಅಂತ್ಯದೊಳಗೆ ಎಲ್ಲಾ ಗ್ರಾಮ ಪಂಚಾಯಿತಿ ಸದಸ್ಯರ ಅಧಿಕಾರ ಅವಧಿ ಮುಕ್ತಾಯವಾಗಲಿರುವುದರಿಂದ ಗ್ರಾಮ ಪಂಚಾಯಿತಿ ಚುನಾವಣೆಗೆ ಸಿದ್ಧತೆ…

4 hours ago

ಪ್ರತ್ಯೇಕ ಕಳವು ಪ್ರಕರಣ : 11 ಮಂದಿ ಬಂಧನ

19 ಬೈಕ್, ಚಿನ್ನಾಭರಣ ಸೇರಿದಂತೆ 34 ಲಕ್ಷ ರೂ.ಮೌಲ್ಯದ ವಸ್ತುಗಳು ವಶ : ಎಸ್‌ಪಿ ಶೋಭಾರಾಣಿ ಮಂಡ್ಯ : ಮಳವಳ್ಳಿಯಲ್ಲಿ…

5 hours ago

ಪರೀಕ್ಷೆ ಮುಗಿದ ದಿನವೇ ಫಲಿತಾಂಶ ಪ್ರಕಟಿಸಿದ ಮಹಿಳಾ ಸರ್ಕಾರಿ ಕಾಲೇಜು!

ಮಂಡ್ಯ : ನಗರದ ಮಹಿಳಾ ಸರ್ಕಾರಿ ಕಾಲೇಜು (ಸ್ವಾಯುತ್ತ) ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ದಾಖಲೆ ನಿರ್ಮಿಸಿದ್ದು 2025-26ನೇ ಸಾಲಿನ ವಿವಿಧ…

5 hours ago

ಮಂಡ್ಯ ಜಿಲ್ಲೆಯ ರಾಷ್ಟೀಯ ಹೆದ್ದಾರಿಗಳ ಕಾಮಗಾರಿ ಶೀಘ್ರ ಮುಕ್ತಾಯಗೊಳಿಸಿ : ಸಚಿವ ಎನ್.ಚಲುವರಾಯಸ್ವಾಮಿ

ಬೆಂಗಳೂರು : ಮಂಡ್ಯ ಜಿಲ್ಲೆ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಮುಕ್ತಾಯಗೊಳಿಸುವಂತೆ ಕೃಷಿ ಸಚಿವರು…

5 hours ago