ಕ್ರೀಡೆ

ಓವಲ್ ನಲ್ಲಿ ಸ್ಮಿತ್ ಭರ್ಜರಿ ಶತಕ: ದ್ರಾವಿಡ್, ಪಾಂಟಿಂಗ್ ದಾಖಲೆ ಮುರಿದ ಸ್ಟೀವ್

ಲಂಡನ್: ಇಲ್ಲಿನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಐಸಿಸಿ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯದ ಎರಡನೇ ದಿನದಾಟ ಆರಂಭವಾಗಿದೆ. ದಿನದ ಮೊದಲ ಓವರ್ ನಲ್ಲೇ ಸ್ಟೀವ್ ಸ್ಮಿತ್ ಅವರು ತಮ್ಮ ಶತಕ ಪೂರೈಸಿ ಸಂಭ್ರಮಿಸಿದರು.

ಮೊದಲ ದಿನದಾಟದ ಅಂತ್ಯಕ್ಕೆ 227 ಎಸೆತ ಎದುರಿಸಿ 95 ರನ್ ಗಳಿಸಿ ಅಜೇಯರಾಗಿದ್ದ ಸ್ಟೀವ್ ಸ್ಮಿತ್ ತಾನೆದುರಿಸಿದ ಮೊದಲೆರಡು ಎಸೆತಗಳನ್ನೇ ಬೌಂಡರಿಗೆ ಬಾರಿಸಿ ತಮ್ಮ ಶತಕ ಪೂರೈಸಿದರು. ಟೆಸ್ಟ್ ಬಾಳ್ವೆಯ 31ನೇ ಶತಕ ಬಾರಿಸಿದರು.

ಈ ಶತಕದ ವೇಳೆ ಸ್ಮಿತ್ ಹಲವು ದಾಖಲೆಗಳನ್ನು ಮುರಿದರು. ಆಸ್ಟ್ರೇಲಿಯಾ ಪರ ಟೆಸ್ಟ್ ಕ್ರಿಕೆಟ್ ನಲ್ಲಿ ಅತೀ ಹೆಚ್ಚು ಶತಕ ಬಾರಿಸಿದವರ ಪಟ್ಟಿಯಲ್ಲಿ ಸ್ಮಿತ್ ಮೂರನೇ ಸ್ಥಾನಕ್ಕೆ ಜಿಗಿದರು. 30 ಶತಕ ಬಾರಿಸಿದ ಮ್ಯಾಥ್ಯೂ ಹೇಡನ್ ಮೂರನೇ ಸ್ಥಾನಕ್ಕೆ ಇಳಿದರು. ಸ್ಮಿತ್ ಗಿಂತ ಹೆಚ್ಚು ಟೆಸ್ಟ್ ಶತಕ ಗಳಿಸಿದವರೆಂದರೆ ಸ್ಟೀವ್ ವಾ (32) ಮತ್ತು ರಿಕಿ ಪಾಂಟಿಂಗ್ (41)

ಭಾರತದ ವಿರುದ್ಧ ಅತೀ ಹೆಚ್ಚು ಟೆಸ್ಟ್ ಶತಕ ಗಳಿಸಿದವರ ಪಟ್ಟಿಯಲ್ಲೂ ಸ್ಮಿತ್ ಜಂಟಿಯಾಗಿ ಮೊದಲ ಸ್ಥಾನದಲ್ಲಿದ್ದಾರೆ. ಜೋ ರೂಟ್ ಮತ್ತು ಸ್ಮಿತ್ ಭಾರತದ ವಿರುದ್ಧ ತಲಾ ಒಂಬತ್ತು ಶತಕ ಬಾರಿಸಿದ್ದಾರೆ. ರಿಕಿ ಪಾಂಟಿಂಗ್ ಮತ್ತು ವಿವಿಯನ್ ರಿಚರ್ಡ್ ತಲಾ ಎಂಟು ಶತಕ ಗಳಿಸಿದ್ದರು.

ಇಂಗ್ಲೆಂಡ್ ನೆಲದಲ್ಲಿ ಅತೀ ಹೆಚ್ಚು ಟೆಸ್ಟ್ ಶತಕ ಗಳಿಸಿದ ವಿದೇಶಿ ಆಟಗಾರರ ಪಟ್ಟಿಯಲ್ಲಿ ಸ್ಮಿತ್ ಮೂರನೇ ಸ್ಥಾನಕ್ಕೇರಿದರು. (7 ಶತಕ) 11 ಶತಕ ಬಾರಿಸಿದ್ದ ಡಾನ್ ಬ್ರಾಡ್ಮನ್ ಮತ್ತು 7 ಶತಕ ಗಳಿಸಿದ ಸ್ಟೀವ್ ವಾ ಮೊದಲೆರಡು ಸ್ಥಾನದಲ್ಲಿದ್ದಾರೆ. ರಾಹುಲ್ ದ್ರಾವಿಡ್ 6 ಶತಕ ಬಾರಿಸಿದ್ದರು.

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

7 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

7 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

8 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

8 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

10 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

10 hours ago