ಕ್ರೀಡೆ

ಓವಲ್ ನಲ್ಲಿ ಸ್ಮಿತ್ ಭರ್ಜರಿ ಶತಕ: ದ್ರಾವಿಡ್, ಪಾಂಟಿಂಗ್ ದಾಖಲೆ ಮುರಿದ ಸ್ಟೀವ್

ಲಂಡನ್: ಇಲ್ಲಿನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಐಸಿಸಿ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯದ ಎರಡನೇ ದಿನದಾಟ ಆರಂಭವಾಗಿದೆ. ದಿನದ ಮೊದಲ ಓವರ್ ನಲ್ಲೇ ಸ್ಟೀವ್ ಸ್ಮಿತ್ ಅವರು ತಮ್ಮ ಶತಕ ಪೂರೈಸಿ ಸಂಭ್ರಮಿಸಿದರು.

ಮೊದಲ ದಿನದಾಟದ ಅಂತ್ಯಕ್ಕೆ 227 ಎಸೆತ ಎದುರಿಸಿ 95 ರನ್ ಗಳಿಸಿ ಅಜೇಯರಾಗಿದ್ದ ಸ್ಟೀವ್ ಸ್ಮಿತ್ ತಾನೆದುರಿಸಿದ ಮೊದಲೆರಡು ಎಸೆತಗಳನ್ನೇ ಬೌಂಡರಿಗೆ ಬಾರಿಸಿ ತಮ್ಮ ಶತಕ ಪೂರೈಸಿದರು. ಟೆಸ್ಟ್ ಬಾಳ್ವೆಯ 31ನೇ ಶತಕ ಬಾರಿಸಿದರು.

ಈ ಶತಕದ ವೇಳೆ ಸ್ಮಿತ್ ಹಲವು ದಾಖಲೆಗಳನ್ನು ಮುರಿದರು. ಆಸ್ಟ್ರೇಲಿಯಾ ಪರ ಟೆಸ್ಟ್ ಕ್ರಿಕೆಟ್ ನಲ್ಲಿ ಅತೀ ಹೆಚ್ಚು ಶತಕ ಬಾರಿಸಿದವರ ಪಟ್ಟಿಯಲ್ಲಿ ಸ್ಮಿತ್ ಮೂರನೇ ಸ್ಥಾನಕ್ಕೆ ಜಿಗಿದರು. 30 ಶತಕ ಬಾರಿಸಿದ ಮ್ಯಾಥ್ಯೂ ಹೇಡನ್ ಮೂರನೇ ಸ್ಥಾನಕ್ಕೆ ಇಳಿದರು. ಸ್ಮಿತ್ ಗಿಂತ ಹೆಚ್ಚು ಟೆಸ್ಟ್ ಶತಕ ಗಳಿಸಿದವರೆಂದರೆ ಸ್ಟೀವ್ ವಾ (32) ಮತ್ತು ರಿಕಿ ಪಾಂಟಿಂಗ್ (41)

ಭಾರತದ ವಿರುದ್ಧ ಅತೀ ಹೆಚ್ಚು ಟೆಸ್ಟ್ ಶತಕ ಗಳಿಸಿದವರ ಪಟ್ಟಿಯಲ್ಲೂ ಸ್ಮಿತ್ ಜಂಟಿಯಾಗಿ ಮೊದಲ ಸ್ಥಾನದಲ್ಲಿದ್ದಾರೆ. ಜೋ ರೂಟ್ ಮತ್ತು ಸ್ಮಿತ್ ಭಾರತದ ವಿರುದ್ಧ ತಲಾ ಒಂಬತ್ತು ಶತಕ ಬಾರಿಸಿದ್ದಾರೆ. ರಿಕಿ ಪಾಂಟಿಂಗ್ ಮತ್ತು ವಿವಿಯನ್ ರಿಚರ್ಡ್ ತಲಾ ಎಂಟು ಶತಕ ಗಳಿಸಿದ್ದರು.

ಇಂಗ್ಲೆಂಡ್ ನೆಲದಲ್ಲಿ ಅತೀ ಹೆಚ್ಚು ಟೆಸ್ಟ್ ಶತಕ ಗಳಿಸಿದ ವಿದೇಶಿ ಆಟಗಾರರ ಪಟ್ಟಿಯಲ್ಲಿ ಸ್ಮಿತ್ ಮೂರನೇ ಸ್ಥಾನಕ್ಕೇರಿದರು. (7 ಶತಕ) 11 ಶತಕ ಬಾರಿಸಿದ್ದ ಡಾನ್ ಬ್ರಾಡ್ಮನ್ ಮತ್ತು 7 ಶತಕ ಗಳಿಸಿದ ಸ್ಟೀವ್ ವಾ ಮೊದಲೆರಡು ಸ್ಥಾನದಲ್ಲಿದ್ದಾರೆ. ರಾಹುಲ್ ದ್ರಾವಿಡ್ 6 ಶತಕ ಬಾರಿಸಿದ್ದರು.

andolanait

Recent Posts

ಚಹಾದ ಸುತ್ತಮುತ್ತ ಹೀಗೊಂದು ಮಾತುಕತೆ

ಚಂದ್ರಶೇಖರ್‌ ಮೂರ್ತಿ.ಕೆ.ಎಸ್‌ ಟೀ ಅಂದರೆ ಬೇರೆ, ಚಹ ಅಂದರೆ ಬೇರೆ ಎಂದು ಹೇಳಿ ಚಕಿತಗೊಳಿಸಿದವರು ಮೈಸೂರಿನ ವಿಜಯನಗರ ಎರಡನೇ ಹಂತದಲ್ಲಿ…

2 mins ago

ಗುಲ್‌ಮೊಹರ್‌ ಮೋಹದಲ್ಲಿ ಮೋಹಕ ಮೈಸೂರು

ಸಿರಿ ಮೈಸೂರು ಇದು ಬೇಸಿಗೆ ಕಾಲ. ಕೆಲ ದಿನಗಳ ಹಿಂದಷ್ಟೇ ಫ್ರಾನ್ಸ್‌ನಲ್ಲಿ ಕ್ಯಾನ್ಸ್ ಫಿಲಂ ಫೆಸ್ಟಿವಲ್ ನಡೆಯಿತು. ಜಗತ್ತಿನಾದ್ಯಂತದಿಂದ ಸುರಸುಂದರ…

2 hours ago

ಬೇಸತ್ತ ಮನಸ್ಸುಗಳು ಸಿನೆಮಾ ನಾಯಕರಿಗೆ ಯಾಕೆ ಮಾರುಹೋಗುತ್ತವೆ?

ವಿಕ್ರಮ್ ಹತ್ವಾರ್ ಮೊನ್ನೆ ತಮಿಳುನಾಡಿನಲ್ಲಿ ಸಿನಿಮಾ ನಟ ವಿಜಯ್ ಚುನಾವಣೆಯಲ್ಲಿ ಸಾಧಿಸಿದ ಗೆಲುವಿನ ಕುರಿತು ಅಲ್ಲಿ ಯಾವೆಲ್ಲ ಸಂಗತಿಗಳು ಪ್ರಭಾವ…

2 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.18 ಭಾನುವಾರ

2 hours ago

ಬಿಡದಿ ರೈತರ ಪರ ನನ್ನ ಹೋರಾಟ ಇಂದಿನಿಂದ ಆರಂಭ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಘೋಷಣೆ

ಬೆಂಗಳೂರು: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ…

16 hours ago

ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವು

ನವೀನ್‌ ಕುಮಾರ್:‌ ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ…

16 hours ago