ಕ್ರೀಡೆ

ಓವಲ್ ನಲ್ಲಿ ಸ್ಮಿತ್ ಭರ್ಜರಿ ಶತಕ: ದ್ರಾವಿಡ್, ಪಾಂಟಿಂಗ್ ದಾಖಲೆ ಮುರಿದ ಸ್ಟೀವ್

ಲಂಡನ್: ಇಲ್ಲಿನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಐಸಿಸಿ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯದ ಎರಡನೇ ದಿನದಾಟ ಆರಂಭವಾಗಿದೆ. ದಿನದ ಮೊದಲ ಓವರ್ ನಲ್ಲೇ ಸ್ಟೀವ್ ಸ್ಮಿತ್ ಅವರು ತಮ್ಮ ಶತಕ ಪೂರೈಸಿ ಸಂಭ್ರಮಿಸಿದರು.

ಮೊದಲ ದಿನದಾಟದ ಅಂತ್ಯಕ್ಕೆ 227 ಎಸೆತ ಎದುರಿಸಿ 95 ರನ್ ಗಳಿಸಿ ಅಜೇಯರಾಗಿದ್ದ ಸ್ಟೀವ್ ಸ್ಮಿತ್ ತಾನೆದುರಿಸಿದ ಮೊದಲೆರಡು ಎಸೆತಗಳನ್ನೇ ಬೌಂಡರಿಗೆ ಬಾರಿಸಿ ತಮ್ಮ ಶತಕ ಪೂರೈಸಿದರು. ಟೆಸ್ಟ್ ಬಾಳ್ವೆಯ 31ನೇ ಶತಕ ಬಾರಿಸಿದರು.

ಈ ಶತಕದ ವೇಳೆ ಸ್ಮಿತ್ ಹಲವು ದಾಖಲೆಗಳನ್ನು ಮುರಿದರು. ಆಸ್ಟ್ರೇಲಿಯಾ ಪರ ಟೆಸ್ಟ್ ಕ್ರಿಕೆಟ್ ನಲ್ಲಿ ಅತೀ ಹೆಚ್ಚು ಶತಕ ಬಾರಿಸಿದವರ ಪಟ್ಟಿಯಲ್ಲಿ ಸ್ಮಿತ್ ಮೂರನೇ ಸ್ಥಾನಕ್ಕೆ ಜಿಗಿದರು. 30 ಶತಕ ಬಾರಿಸಿದ ಮ್ಯಾಥ್ಯೂ ಹೇಡನ್ ಮೂರನೇ ಸ್ಥಾನಕ್ಕೆ ಇಳಿದರು. ಸ್ಮಿತ್ ಗಿಂತ ಹೆಚ್ಚು ಟೆಸ್ಟ್ ಶತಕ ಗಳಿಸಿದವರೆಂದರೆ ಸ್ಟೀವ್ ವಾ (32) ಮತ್ತು ರಿಕಿ ಪಾಂಟಿಂಗ್ (41)

ಭಾರತದ ವಿರುದ್ಧ ಅತೀ ಹೆಚ್ಚು ಟೆಸ್ಟ್ ಶತಕ ಗಳಿಸಿದವರ ಪಟ್ಟಿಯಲ್ಲೂ ಸ್ಮಿತ್ ಜಂಟಿಯಾಗಿ ಮೊದಲ ಸ್ಥಾನದಲ್ಲಿದ್ದಾರೆ. ಜೋ ರೂಟ್ ಮತ್ತು ಸ್ಮಿತ್ ಭಾರತದ ವಿರುದ್ಧ ತಲಾ ಒಂಬತ್ತು ಶತಕ ಬಾರಿಸಿದ್ದಾರೆ. ರಿಕಿ ಪಾಂಟಿಂಗ್ ಮತ್ತು ವಿವಿಯನ್ ರಿಚರ್ಡ್ ತಲಾ ಎಂಟು ಶತಕ ಗಳಿಸಿದ್ದರು.

ಇಂಗ್ಲೆಂಡ್ ನೆಲದಲ್ಲಿ ಅತೀ ಹೆಚ್ಚು ಟೆಸ್ಟ್ ಶತಕ ಗಳಿಸಿದ ವಿದೇಶಿ ಆಟಗಾರರ ಪಟ್ಟಿಯಲ್ಲಿ ಸ್ಮಿತ್ ಮೂರನೇ ಸ್ಥಾನಕ್ಕೇರಿದರು. (7 ಶತಕ) 11 ಶತಕ ಬಾರಿಸಿದ್ದ ಡಾನ್ ಬ್ರಾಡ್ಮನ್ ಮತ್ತು 7 ಶತಕ ಗಳಿಸಿದ ಸ್ಟೀವ್ ವಾ ಮೊದಲೆರಡು ಸ್ಥಾನದಲ್ಲಿದ್ದಾರೆ. ರಾಹುಲ್ ದ್ರಾವಿಡ್ 6 ಶತಕ ಬಾರಿಸಿದ್ದರು.

andolanait

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

2 hours ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

4 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

5 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

5 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

8 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

9 hours ago