ಕ್ರೀಡೆ

ಓವಲ್ ನಲ್ಲಿ ಸ್ಮಿತ್ ಭರ್ಜರಿ ಶತಕ: ದ್ರಾವಿಡ್, ಪಾಂಟಿಂಗ್ ದಾಖಲೆ ಮುರಿದ ಸ್ಟೀವ್

ಲಂಡನ್: ಇಲ್ಲಿನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಐಸಿಸಿ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯದ ಎರಡನೇ ದಿನದಾಟ ಆರಂಭವಾಗಿದೆ. ದಿನದ ಮೊದಲ ಓವರ್ ನಲ್ಲೇ ಸ್ಟೀವ್ ಸ್ಮಿತ್ ಅವರು ತಮ್ಮ ಶತಕ ಪೂರೈಸಿ ಸಂಭ್ರಮಿಸಿದರು.

ಮೊದಲ ದಿನದಾಟದ ಅಂತ್ಯಕ್ಕೆ 227 ಎಸೆತ ಎದುರಿಸಿ 95 ರನ್ ಗಳಿಸಿ ಅಜೇಯರಾಗಿದ್ದ ಸ್ಟೀವ್ ಸ್ಮಿತ್ ತಾನೆದುರಿಸಿದ ಮೊದಲೆರಡು ಎಸೆತಗಳನ್ನೇ ಬೌಂಡರಿಗೆ ಬಾರಿಸಿ ತಮ್ಮ ಶತಕ ಪೂರೈಸಿದರು. ಟೆಸ್ಟ್ ಬಾಳ್ವೆಯ 31ನೇ ಶತಕ ಬಾರಿಸಿದರು.

ಈ ಶತಕದ ವೇಳೆ ಸ್ಮಿತ್ ಹಲವು ದಾಖಲೆಗಳನ್ನು ಮುರಿದರು. ಆಸ್ಟ್ರೇಲಿಯಾ ಪರ ಟೆಸ್ಟ್ ಕ್ರಿಕೆಟ್ ನಲ್ಲಿ ಅತೀ ಹೆಚ್ಚು ಶತಕ ಬಾರಿಸಿದವರ ಪಟ್ಟಿಯಲ್ಲಿ ಸ್ಮಿತ್ ಮೂರನೇ ಸ್ಥಾನಕ್ಕೆ ಜಿಗಿದರು. 30 ಶತಕ ಬಾರಿಸಿದ ಮ್ಯಾಥ್ಯೂ ಹೇಡನ್ ಮೂರನೇ ಸ್ಥಾನಕ್ಕೆ ಇಳಿದರು. ಸ್ಮಿತ್ ಗಿಂತ ಹೆಚ್ಚು ಟೆಸ್ಟ್ ಶತಕ ಗಳಿಸಿದವರೆಂದರೆ ಸ್ಟೀವ್ ವಾ (32) ಮತ್ತು ರಿಕಿ ಪಾಂಟಿಂಗ್ (41)

ಭಾರತದ ವಿರುದ್ಧ ಅತೀ ಹೆಚ್ಚು ಟೆಸ್ಟ್ ಶತಕ ಗಳಿಸಿದವರ ಪಟ್ಟಿಯಲ್ಲೂ ಸ್ಮಿತ್ ಜಂಟಿಯಾಗಿ ಮೊದಲ ಸ್ಥಾನದಲ್ಲಿದ್ದಾರೆ. ಜೋ ರೂಟ್ ಮತ್ತು ಸ್ಮಿತ್ ಭಾರತದ ವಿರುದ್ಧ ತಲಾ ಒಂಬತ್ತು ಶತಕ ಬಾರಿಸಿದ್ದಾರೆ. ರಿಕಿ ಪಾಂಟಿಂಗ್ ಮತ್ತು ವಿವಿಯನ್ ರಿಚರ್ಡ್ ತಲಾ ಎಂಟು ಶತಕ ಗಳಿಸಿದ್ದರು.

ಇಂಗ್ಲೆಂಡ್ ನೆಲದಲ್ಲಿ ಅತೀ ಹೆಚ್ಚು ಟೆಸ್ಟ್ ಶತಕ ಗಳಿಸಿದ ವಿದೇಶಿ ಆಟಗಾರರ ಪಟ್ಟಿಯಲ್ಲಿ ಸ್ಮಿತ್ ಮೂರನೇ ಸ್ಥಾನಕ್ಕೇರಿದರು. (7 ಶತಕ) 11 ಶತಕ ಬಾರಿಸಿದ್ದ ಡಾನ್ ಬ್ರಾಡ್ಮನ್ ಮತ್ತು 7 ಶತಕ ಗಳಿಸಿದ ಸ್ಟೀವ್ ವಾ ಮೊದಲೆರಡು ಸ್ಥಾನದಲ್ಲಿದ್ದಾರೆ. ರಾಹುಲ್ ದ್ರಾವಿಡ್ 6 ಶತಕ ಬಾರಿಸಿದ್ದರು.

andolanait

Recent Posts

ಆಷಾಢ ಶುಕ್ರವಾರ, ಶನಿವಾರ, ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ

ಮೈಸೂರು: ಆಷಾಢ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಚಿವ ಯತೀಂದ್ರ…

1 hour ago

ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’

ಮೈಸೂರು: ಜೀವವೈವಿಧ್ಯ ತಾಣವಾಗಿರುವn ಹಾಗೂ ಪ್ರಕೃತಿಯ ಸೊಬಗಿನ ವಾತಾವರಣದಿಂದ ಕೂಡಿರುವ ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’ ನಿರ್ಮಾಣ…

3 hours ago

ಅಲೆಮಾರಿ ಜನಾಂಗ ನಾಡಿನ ಸಂಸ್ಕೃತಿಯ ಜೀವಂತಿಕೆ

ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…

8 hours ago

ಓದುಗರ ಪತ್ರ: ನೆಮ್ಮದಿ ಕೇಂದ್ರಕ್ಕೆ ಹೆಚ್ಚುವರಿ ಸಿಬ್ಬಂದಿ ನಿಯೋಜಿಸಿ

ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕು ಕಚೇರಿ ಆಡಳಿತ ಸೌಧದಲ್ಲಿ ಇರುವ ನೆಮ್ಮದಿ ಕೇಂದ್ರದ ಮೂಲಕ ಜಾತಿ ಪ್ರಮಾಣ ಪತ್ರ, ಆದಾಯ…

9 hours ago

ಓದುಗರ ಪತ್ರ: ಆಹಾರ ಸರಬರಾಜಿಗೆ ಕಪ್ಪು ಪ್ಲಾಸ್ಟಿಕ್ ಡಬ್ಬಿಗಳನ್ನು ನಿಷೇಧಿಸಿ

ನಗರ ಪ್ರದೇಶಗಳ ಹೋಟೆಲ್‌ಗಳಲ್ಲಿ ನೀಡಲಾಗುವ ಆಹಾರ ಪಾರ್ಸೆಲ್‌ಗಳು ಹಾಗೂ ಆನ್ ಲೈನ್ ಮೂಲಕ ಸರಬರಾಜಾಗುವ ಶೇ.೯೦ ಕ್ಕಿಂತ ಹೆಚ್ಚು ಆಹಾರ…

9 hours ago

ಓದುಗರ ಪತ್ರ: ಅಧಿಕಾರಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಕ್ರಿಯಾಶೀಲವಾಗಲಿ

ಸಾಮಾಜಿಕ ಮಾಧ್ಯಮ ಬಳಕೆದಾರರು ಬೆಂಗಳೂರಿನ ನಂತರ ಅತಿ ಹೆಚ್ಚು ಕ್ರಿಯಾಶೀಲರಾಗಿರುವುದು ಮೈಸೂರು ನಗರದಲ್ಲಿ. ಆದರೆ ಬೇಸರದ ಸಂಗತಿ ಎಂದರೆ ಇಲ್ಲಿನ…

9 hours ago