ಕ್ರೀಡೆ

ದೊಡ್ಡ ಮೊತ್ತ ತಿರಸ್ಕರಿಸಿ ದೇಶಕ್ಕಾಗಿ ಆಡುವೆ ಎಂದ ಸ್ಮೃತಿ ಮಂದಾನ

ಮುಂಬಯಿ: ಭಾರತ ಮಹಿಳಾ ಕ್ರಿಕೆಟ್ ತಂಡದ ಆರಂಭಿಕ ಆಟಗಾರ್ತಿ ಸ್ಮೃ ತಿ ಮಂಧನಾ ತಮ್ಮಆಟ ಮತ್ತು ಸೌಂದರ್ಯ ಎರಡಕ್ಕೂ ಹೆಸರಾದವರು. ಈ ಬಾರಿ ಉತ್ತಮ ನಿರ್ಧಾರವೊಂದಕ್ಕಾಗಿ ದೇಶವಾಸಿಗಳೆಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದಾರೆ. 

ಸ್ಮೃತಿ ಮಂಧನಾ ಟೀಂ ಇಂಡಿಯಾದ ಸ್ಟಾರ್ ಬ್ಯಾಟರ್ ಆಗಿ ಕ್ರಿಕೆಟ್‌ ಅಂಗಳದಲ್ಲಿ ಮಿಂಚಿದರೆ ಅಂಗಳದ ಒಳಗೂ, ಹೊರಗೂ ತಮ್ಮ ಸೌಂದರ್ಯದಿಂದ ಕ್ರಿಕೆಟ್‌ ಪ್ರಿಯರ ಗಮನ ಸೆಳೆಯುತ್ತಾರೆ.

ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಮಿಂಚಿದ್ದ ಮಂಧನಾ ಅವರು ಬಳಿಕ ದಿ ಹಂಡ್ರೆಡ್ ಲೀಗ್ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದರು. ಕಳೆದ ಫೆಬ್ರವರಿಯಿಂದ ಅವರು ನಿರಂತರವಾಗಿ ಕ್ರಿಕೆಟ್ ಆಡುತ್ತಿದ್ದಾರೆ.

ಇದೀಗ ಆತಿಥೇಯ ಇಂಗ್ಲೆಂಡ್ ವಿರುದ್ಧದ ಟಿ 20 ಸರಣಿಗೆ ಸಹಜವಾಗಿಯೇ ಅವರು ಆಯ್ಕೆಯಾಗಿದ್ದಾರೆ. ಆದರೆ ಈ ಆಯ್ಕೆಗೆ ಮುನ್ನ ತಮಗೆ ಬಂದಿದ್ದ ದೊಡ್ಡ ಅವಕಾಶವೊಂದನ್ನು ಅವರು ತಿರಸ್ಕರಿಸಿದ್ದಾರೆ. ಅವರ ನಿರ್ಧಾರ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

ಬಿಗ್ ಬ್ಯಾಷ್ ಲೀಗ್ನಲ್ಲಿ ಪಾಲ್ಗೊಳ್ಳಲು ಮಂಧಾನ ಅವರಿಗೆ ದೊಡ್ಡ ಮೊತ್ತದ ಆಫರ್ ಬಂದಿತ್ತು. ಆದರೆ ಟೀಂ ಇಂಡಿಯಾಗೆ ಆಡುವ ಸಲುವಾಗಿ ಈ ಆಫರ್ ಅನ್ನು ತಿರಸ್ಕರಿಸಿದ್ದಾರೆ. ಭಾರತ ತಂಡದ ಮುಂದಿನ ಸರಣಿಗಳಲ್ಲಿ ಭಾಗವಹಿಸುವ ಸಲುವಾಗಿ ಈ ನಿರ್ಧಾರ ಕೈಗೊಂಡಿದ್ದಾಗಿ ಮಂಧನಾ ಅವರು ಹೇಳಿಕೊಂಡಿದ್ದಾರೆ. ಇದೇ ಕಾರಣಕ್ಕಾಗಿ ಬಿಗ್ ಬ್ಯಾಷ್ ಲೀಗ್ನಿಂದ ಹಿಂದೆ ಸರಿದಿದ್ದಾರೆ.

ಭಾರತಕ್ಕಾಗಿ ಆಡುವ ಯಾವುದೇ ಅವಕಾಶವನ್ನು ಕಳೆದುಕೊಳ್ಳಲು ನಾನು ಬಯಸುವುದಿಲ್ಲ ಎಂದು ಸ್ಮೃತಿ ಮಂಧನಾ ಹೇಳಿದ್ದಾರೆ. ಇಂಗ್ಲೆಂಡ್ ಸರಣಿ ಬಳಿಕ ಫಿಟ್ನೆಸ್ ಕಡೆಗೆ ಹೆಚ್ಚು ಗಮನ ಹರಿಸುತ್ತಿದ್ದು, 100 ಪ್ರತಿಶತದಷ್ಟು ಭಾರತಕ್ಕಾಗಿ ಆಡಲು ನಾನು ಮೊದಲು ಆದ್ಯತೆ ನೀಡುತ್ತೇನೆ ಎಂದವರು ತಿಳಿಸಿದ್ದಾರೆ.

ಕ್ರಿಕೆಟ್ ರಂಗದಲ್ಲಿ ತೋರಿದ ಅದ್ಭುತ ಪ್ರದರ್ಶನಕ್ಕಾಗಿ ಮಂಧಾನ ಅವರು ಅರ್ಜುನ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಏಕದಿನ ಕ್ರಿಕೆಟ್ನಲ್ಲಿ ದ್ವಿಶತಕ ಸಿಡಿಸಿದ ಭಾರತದ ಪ್ರಥಮ ಆಟಗಾರ್ತಿ ಸ್ಮೃತಿ ಮಂದಾನ. ಮಹಾರಾಷ್ಟ್ರ ತಂಡದ ಸದಸ್ಯೆಯಾಗಿ ಸ್ಮೃತಿ ಗುಜರಾತ್ ವಿರುದ್ಧ 150 ಎಸೆತಗಳಲ್ಲಿ 224 ರನ್ ಚಚ್ಚಿದ್ದರು.

andolana

Recent Posts

ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ…

33 mins ago

ಬಲಮುರಿ ಕಾವೇರಿ ನದಿಯಲ್ಲಿ ಇಬ್ಬರು ಯುವಕರು ಸಾವು

ಮಂಡ್ಯ: ಕಾವೇರಿ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಬಲಮುರಿಯಲ್ಲಿ ನಡೆದಿದೆ. ಚಾಮರಾಜನಗರ…

41 mins ago

ಓದುಗರ ಪತ್ರ: ಮಾನಸ ಗಂಗೋತ್ರಿ ಕ್ಯಾಂಟೀನ್‌ಗಳಲ್ಲಿ ದರ ಏರಿಕೆಗೆ ಕಡಿವಾಣ ಹಾಕಿ

ಮೈಸೂರು ವಿಶ್ವವಿದ್ಯಾನಿಲಯದ ಮಾನಸ ಗಂಗೋತ್ರಿಯಲ್ಲಿರುವ ಖಾಸಗಿ ಹೋಟೆಲ್‌ಗಳಲ್ಲಿ ಕಾಫಿ,ತಿಂಡಿ, ಹಣ್ಣಿನ ಪಾನೀಯ ದರ ದುಬಾರಿಯಾಗಿದ್ದು, ಉನ್ನತ ಶಿಕ್ಷಣ ವ್ಯಾಸಂಗಕ್ಕಾಗಿ ಬರುವ…

3 hours ago

ಓದುಗರ ಪತ್ರ: ಶಾಲಾ ಶಿಕ್ಷಕರ ಮಾದರಿ ನಡೆ

ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಶಾಲೆಗಳಿಗೆ ದಾಖಲಾಗುವ ಮಕ್ಕಳ ಸಂಖ್ಯೆ ದಿನೇ ದಿನೇ ಕಡಿಮೆಯಾಗುತ್ತಿದ್ದು, ಶಾಲೆಗಳನ್ನು ಮುಚ್ಚುವ ಪರಿಸ್ಥಿತಿ ಉಂಟಾಗಿದೆ. ಗದಗ…

3 hours ago

ಓದುಗರ ಪತ್ರ: ರೇಷ್ಮೆ ನೂಲು ಘಟಕಕ್ಕೆ ಹೊಸ ಯಂತ್ರ ಅಳವಡಿಕೆ ಶ್ಲಾಘನೀಯ

ತಿ. ನರಸೀಪುರ ಪಟ್ಟಣದ ರೇಷ್ಮೆ ನೂಲು ತಯಾರಿಕಾ ಘಟಕಕ್ಕೆ ಹೊಸದಾಗಿ ಎರಡು ಯಂತ್ರಗಳನ್ನು ಅಳವಡಿಸಲು ಕ್ರಮ ಕೈಗೊಂಡಿರುವುದು ಘಟಕದ ಅಭಿವೃದ್ಧಿಯ…

3 hours ago

ಓದುಗರ ಪತ್ರ: ಶ್ರೀಕಂಠೇಶ್ವರ ದೇಗುಲದ ಆನೆ ಗೌರಿ ಕರೆತರಲು ನಿರ್ಲಕ್ಷ್ಯವೇಕೆ?

ನಂಜನಗೂಡಿನ ಪ್ರಸಿದ್ಧ ಶ್ರೀಕಂಠೇಶ್ವರ ದೇವಸ್ಥಾನದ ಪಟ್ಟದ ಆನೆ ಗೌರಿಯನ್ನು ಕಾಲಿನ ಗಾಯ ಹಾಗೂ ಅನಾರೋಗ್ಯದ ಕಾರಣ ಚಿಕಿತ್ಸೆಗಾಗಿ ೨೦೧೭ರಲ್ಲಿ ಬೆಂಗಳೂರಿನ…

3 hours ago