ಕ್ರೀಡೆ

ಸ್ಮೃತಿ ಮಂದಾನ ಮತ್ತೊಂದು ದಾಖಲೆ : ಟಿ-20 ಕ್ರಿಕೆಟ್‌ನಲ್ಲಿ ಅತಿಹೆಚ್ಚು ರನ್ ಗಳಿಸಿದ 2ನೇ ಬ್ಯಾಟರ್

ಮುಂಬೈ : ಮಹಿಳಾ ಕ್ರಿಕೆಟ್‌ನಲ್ಲಿ ಸ್ಮೃತಿ ಮಂದಾನ ಅವರ ಪರಾಕ್ರಮ ಮುಂದುವರಿದಿದೆ. ಇತ್ತೀಚೆಗೆ ನಡೆದ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಹಲವು ದಾಖಲೆಗಳನ್ನು ಬರೆದಿದ್ದ ಸ್ಮೃತಿ ಇದೀಗ ಏಕದಿನ ಕ್ರಿಕೆಟ್‌ನಲ್ಲೂ ಭರ್ಜರಿ ದಾಖಲೆಯೊಂದನ್ನು ನಿರ್ಮಿಸಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ವಿಶ್ವದ 10 ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಮಹಿಳಾ ಕ್ರಿಕೆಟ್‌ನಲ್ಲಿ ದಾಖಲೆಗಳ ಮೇಲೆ ದಾಖಲೆ ಬರೆಯುತ್ತಿರುವ ಸ್ಮೃತಿ ಮಂದಾನ ಇದೀಗ ಮತ್ತೊಂದು ಮೈಲುಗಲ್ಲು ದಾಟಿದ್ದಾರೆ. ಈ ಮೈಲುಗಲ್ಲು ದಾಟುವುದರೊಂದಿಗೆ ಈ ಸಾಧನೆ ಮಾಡಿದ ಭಾರತದ 1ನೇ ಮಹಿಳಾ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ಸಹ ತಮ್ಮದಾಗಿಸಿಕೊಂಡಿದ್ದಾರೆ.

ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಆರಂಭಿಕಳಾಗಿ ಕಣಕ್ಕಿಳಿದ ಸ್ಮೃತಿ ಮಂಧಾನ 24 ಎಸೆತಗಳಲ್ಲಿ 5 ಫೋರ್‌ಗಳೊಂದಿಗೆ 28 ರನ್ ಬಾರಿಸಿದ್ದರು. ಈ 28 ರನ್‌ಗಳೊಂದಿಗೆ ಸ್ಮೃತಿ ಮಹಿಳಾ ಏಕದಿನ ಕ್ರಿಕೆಟ್‌ನಲ್ಲಿ 4500 ರನ್‌ಗಳನ್ನು ಪೂರೈಸಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ 2ನೇ ಭಾರತೀಯ ಆಟಗಾರ್ತಿ ಎನಿಸಿಕೊಂಡಿದ್ದಾರೆ.

ಇದಕ್ಕೂ ಮುನ್ನ ಈ ಸಾಧನೆ ಮಾಡಿದ್ದು ಭಾರತ ಮಹಿಳಾ ತಂಡದ ಮಾಜಿ ನಾಯಕಿ ಮಿಥಾಲಿ ರಾಜ್. ಭಾರತದ ಪರ 211 ಏಕದಿನ ಇನಿಂಗ್ಸ್ ಆಡಿರುವ ಮಿಥಾಲಿ 7 ಶತಕ ಹಾಗೂ 64 ಅರ್ಧಶತಕಗೊಂದಿಗೆ 7805 ರನ್ ಕಲೆಹಾಕಿದ್ದಾರೆ. ಈ ಮೂಲಕ ಮಹಿಳಾ ಏಕದಿನ ಕ್ರಿಕೆಟ್‌ನಲ್ಲಿ ಅತ್ಯಧಿಕ ರನ್‌ಗಳಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಇದೀಗ 103 ಏಕದಿನ ಇನಿಂಗ್ಸ್‌ಗಳ ಮೂಲಕ 11 ಶತಕ ಹಾಗೂ 31 ಅರ್ಧಶತಕಗಳನ್ನು ಬಾರಿಸಿರುವ ಸ್ಮೃತಿ ಮಂದಾನ ಒಟ್ಟು 4501 ರನ್ ಕಲೆಹಾಕಿದ್ದಾರೆ. ಈ ಮೂಲಕ ಏಕದಿನ ಕ್ರಿಕೆಟ್‌ನಲ್ಲಿ ಭಾರತದ ಪರ ಅತ್ಯಧಿಕ ರನ್ ಕಲೆಹಾಕಿದ 2ನೇ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ಸ್ಮೃತಿ ತಮ್ಮದಾಗಿಸಿಕೊಂಡಿದ್ದಾರೆ.

ಅಂದಹಾಗೆ ಮಹಿಳಾ ಏಕದಿನ ಕ್ರಿಕೆಟ್‌ನಲ್ಲಿ ಈವರೆಗೆ ಕೇವಲ 10 ಆಟಗಾರ್ತಿಯರು ಮಾತ್ರ 4500+ ರನ್ ಗಳಿಸಿದ್ದಾರೆ. ಇವರಲ್ಲಿ ಮಿಥಾಲಿ ರಾಜ್ ಅಗ್ರಸ್ಥಾನದಲ್ಲಿದ್ದರೆ, ಸ್ಮೃತಿ ಮಂದಾನ 10ನೇ ಸ್ಥಾನದಲ್ಲಿದ್ದಾರೆ. ಸದ್ಯ ಉತ್ತಮ ಫಾರ್ಮ್‌ನಲ್ಲಿರುವ ಸ್ಮೃತಿ ಇದೇ ರೀತಿ ಬ್ಯಾಟಿಂಗ್ ಮುಂದುವರಿಸಿದರೆ ಮಹಿಳಾ ಏಕದಿನ ಕ್ರಿಕೆಟ್‌ನಲ್ಲಿ ಅತ್ಯಧಿಕ ರನ್‌ಗಳಿಸಿದ ಬ್ಯಾಟರ್ ಆಗಿ ಹೊರಹೊಮ್ಮಬಹುದು

ಆಂದೋಲನ ಡೆಸ್ಕ್

Recent Posts

ಚಾ.ನಗರ | ಬೇಡರಪುರದಲ್ಲಿ ಮತ್ತೊಂದು ಚಿರತೆ ಸೆರೆ

ಚಾಮರಾಜನಗರ : ತಾಲ್ಲೂಕಿನ ಬೇಡರಪುರ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಇನ್ನೂ ಒಂದು ಚಿರತೆ ಸೆರೆಯಾಗಿದೆ. ಗ್ರಾಮದ ಮಲ್ಲಣ್ಣ…

49 mins ago

ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಹೆಚ್ಚಿಸಿ : ಡಿಸಿ, ಸಿಇಓಗಳಿಗೆ ಮಧು ಬಂಗಾರಪ್ಪ ಸೂಚನೆ

ಬೆಂಗಳೂರು : 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಅಭಿಯಾನ ಯಶಸ್ವಿಯಾಗಿ ನಡೆಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು…

1 hour ago

ಕಾರು-ಬೈಕ್‌ ನಡುರೆ ಭೀಕರ ಅಪಘಾತ : ಇಬ್ಬರು ಸ್ಥಳದಲ್ಲೇ ಸಾವು

ಸಿದ್ದಾಪುರ : ಎರಡು ಬೈಕ್‌ಗಳು ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ…

2 hours ago

ವಾಣಿಜ್ಯ ಬಳಕೆಯ ಸಿಲಿಂಡರ್‌ ಪೂರೈಕೆಯಲ್ಲಿ ಶೇ20 ರಷ್ಟು ಹೆಚ್ಚಳ

ಹೊಸದಿಲ್ಲಿ : ಎಲ್‌ಪಿಜಿ ಕೊರತೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಸಂಸ್ಕರಣಾ ಘಟಕಗಳಿಗೆ ಕೇಂದ್ರ ಪೆಟ್ರೋಲಿಯಂ ಮತ್ತು…

2 hours ago

ಇರಾನ್‌ ಡ್ರೋನ್‌ ಉತ್ಪಾದನಾ ಘಟಕದ ಮೇಲೆ ಅಮೆರಿಕ ದಾಳಿ : ಚಿತ್ರ ಬಿಡುಗಡೆ

ಟೆಹ್ರಾನ್ : ಇರಾನ್‌ನ ಡ್ರೋನ್ ಉತ್ಪಾದನಾ ಘಟಕದ ಮೇಲೆ ಅಮೆರಿಕ ಸೇನೆ ನಡೆಸಿದ ನಿಖರ ದಾಳಿಗೆ ಸಂಬಂಧಿಸಿದಂತೆ ಮಹತ್ವದ ಉಪಗ್ರಹ…

3 hours ago

ಹೊಸ ಜಾಹೀರಾತು ನೀತಿ ಮೂಲಕ ಪತ್ರಿಕೆಗಳ ದಮನಕ್ಕೆ ಮುಂದಾದ ಸರ್ಕಾರ : ಪುನರ್‌ ಪರಿಶೀಲನೆಗೆ ಒತ್ತಾಯ

ಮೈಸೂರು : ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ…

3 hours ago