ಕ್ರೀಡೆ

ಸ್ಮೃತಿ ಮಂದಾನ ಮತ್ತೊಂದು ದಾಖಲೆ : ಟಿ-20 ಕ್ರಿಕೆಟ್‌ನಲ್ಲಿ ಅತಿಹೆಚ್ಚು ರನ್ ಗಳಿಸಿದ 2ನೇ ಬ್ಯಾಟರ್

ಮುಂಬೈ : ಮಹಿಳಾ ಕ್ರಿಕೆಟ್‌ನಲ್ಲಿ ಸ್ಮೃತಿ ಮಂದಾನ ಅವರ ಪರಾಕ್ರಮ ಮುಂದುವರಿದಿದೆ. ಇತ್ತೀಚೆಗೆ ನಡೆದ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಹಲವು ದಾಖಲೆಗಳನ್ನು ಬರೆದಿದ್ದ ಸ್ಮೃತಿ ಇದೀಗ ಏಕದಿನ ಕ್ರಿಕೆಟ್‌ನಲ್ಲೂ ಭರ್ಜರಿ ದಾಖಲೆಯೊಂದನ್ನು ನಿರ್ಮಿಸಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ವಿಶ್ವದ 10 ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಮಹಿಳಾ ಕ್ರಿಕೆಟ್‌ನಲ್ಲಿ ದಾಖಲೆಗಳ ಮೇಲೆ ದಾಖಲೆ ಬರೆಯುತ್ತಿರುವ ಸ್ಮೃತಿ ಮಂದಾನ ಇದೀಗ ಮತ್ತೊಂದು ಮೈಲುಗಲ್ಲು ದಾಟಿದ್ದಾರೆ. ಈ ಮೈಲುಗಲ್ಲು ದಾಟುವುದರೊಂದಿಗೆ ಈ ಸಾಧನೆ ಮಾಡಿದ ಭಾರತದ 1ನೇ ಮಹಿಳಾ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ಸಹ ತಮ್ಮದಾಗಿಸಿಕೊಂಡಿದ್ದಾರೆ.

ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಆರಂಭಿಕಳಾಗಿ ಕಣಕ್ಕಿಳಿದ ಸ್ಮೃತಿ ಮಂಧಾನ 24 ಎಸೆತಗಳಲ್ಲಿ 5 ಫೋರ್‌ಗಳೊಂದಿಗೆ 28 ರನ್ ಬಾರಿಸಿದ್ದರು. ಈ 28 ರನ್‌ಗಳೊಂದಿಗೆ ಸ್ಮೃತಿ ಮಹಿಳಾ ಏಕದಿನ ಕ್ರಿಕೆಟ್‌ನಲ್ಲಿ 4500 ರನ್‌ಗಳನ್ನು ಪೂರೈಸಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ 2ನೇ ಭಾರತೀಯ ಆಟಗಾರ್ತಿ ಎನಿಸಿಕೊಂಡಿದ್ದಾರೆ.

ಇದಕ್ಕೂ ಮುನ್ನ ಈ ಸಾಧನೆ ಮಾಡಿದ್ದು ಭಾರತ ಮಹಿಳಾ ತಂಡದ ಮಾಜಿ ನಾಯಕಿ ಮಿಥಾಲಿ ರಾಜ್. ಭಾರತದ ಪರ 211 ಏಕದಿನ ಇನಿಂಗ್ಸ್ ಆಡಿರುವ ಮಿಥಾಲಿ 7 ಶತಕ ಹಾಗೂ 64 ಅರ್ಧಶತಕಗೊಂದಿಗೆ 7805 ರನ್ ಕಲೆಹಾಕಿದ್ದಾರೆ. ಈ ಮೂಲಕ ಮಹಿಳಾ ಏಕದಿನ ಕ್ರಿಕೆಟ್‌ನಲ್ಲಿ ಅತ್ಯಧಿಕ ರನ್‌ಗಳಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಇದೀಗ 103 ಏಕದಿನ ಇನಿಂಗ್ಸ್‌ಗಳ ಮೂಲಕ 11 ಶತಕ ಹಾಗೂ 31 ಅರ್ಧಶತಕಗಳನ್ನು ಬಾರಿಸಿರುವ ಸ್ಮೃತಿ ಮಂದಾನ ಒಟ್ಟು 4501 ರನ್ ಕಲೆಹಾಕಿದ್ದಾರೆ. ಈ ಮೂಲಕ ಏಕದಿನ ಕ್ರಿಕೆಟ್‌ನಲ್ಲಿ ಭಾರತದ ಪರ ಅತ್ಯಧಿಕ ರನ್ ಕಲೆಹಾಕಿದ 2ನೇ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ಸ್ಮೃತಿ ತಮ್ಮದಾಗಿಸಿಕೊಂಡಿದ್ದಾರೆ.

ಅಂದಹಾಗೆ ಮಹಿಳಾ ಏಕದಿನ ಕ್ರಿಕೆಟ್‌ನಲ್ಲಿ ಈವರೆಗೆ ಕೇವಲ 10 ಆಟಗಾರ್ತಿಯರು ಮಾತ್ರ 4500+ ರನ್ ಗಳಿಸಿದ್ದಾರೆ. ಇವರಲ್ಲಿ ಮಿಥಾಲಿ ರಾಜ್ ಅಗ್ರಸ್ಥಾನದಲ್ಲಿದ್ದರೆ, ಸ್ಮೃತಿ ಮಂದಾನ 10ನೇ ಸ್ಥಾನದಲ್ಲಿದ್ದಾರೆ. ಸದ್ಯ ಉತ್ತಮ ಫಾರ್ಮ್‌ನಲ್ಲಿರುವ ಸ್ಮೃತಿ ಇದೇ ರೀತಿ ಬ್ಯಾಟಿಂಗ್ ಮುಂದುವರಿಸಿದರೆ ಮಹಿಳಾ ಏಕದಿನ ಕ್ರಿಕೆಟ್‌ನಲ್ಲಿ ಅತ್ಯಧಿಕ ರನ್‌ಗಳಿಸಿದ ಬ್ಯಾಟರ್ ಆಗಿ ಹೊರಹೊಮ್ಮಬಹುದು

ಆಂದೋಲನ ಡೆಸ್ಕ್

Recent Posts

ಮಂಡ್ಯದಲ್ಲಿ ಭಿಕ್ಷುಕಿ ನಿಧನ : ಮೃತಳ ಮನೆಯಲ್ಲಿ ಮೂಟೆಗಟ್ಟಲೆ ಹಣ ಪತ್ತೆ; ಊರಿಗೂರೇ ಶಾಕ್!

ಮಂಡ್ಯ: ವೃದ್ಧ ಭೀಕ್ಷುಕಿಯೊಬ್ಬರು ತಾನು ಬೇಡಿ ಸಂಗ್ರಹಿಸಿಟ್ಟಿದ್ದ ಸಂಪತ್ತು ಇದೀಗ ಪರರ ಪಾಲಾಗಿರುವ ಸಂಗತಿ ಜನರನ್ನು ಅಚ್ಚರಿಗೊಳಿಸಿದೆ. ಮಂಡ್ಯ ನಗರದ…

3 hours ago

ಜಿಲ್ಲೆಗೊಂದು ಕೈಗಾರಿಕೆ ತರುತ್ತೇನೆ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭರವಸೆ

ಪಾಂಡವಪುರ : ಜಿಲ್ಲೆಯ ಜನರ ನಿರೀಕ್ಷೆಯಂತೆ ಕೇಂದ್ರ ಸಚಿವನಾಗಿ ನನ್ನ ಅಧಿಕಾರದ ಅವಧಿಯೊಳಗೆ ಜಿಲ್ಲೆಗೊಂದು ಕೈಗಾರಿಕೆಯನ್ನು ತಂದೇ ತರುತ್ತೇವೆ ಎಂದು…

4 hours ago

ನಕಲಿ ಔಷಧ ತಯಾರಿಕಾ, ಮಾರಾಟ ಜಾಲ ; ವಿದೇಶದಲ್ಲಿ ಕಿಂಗ್‌ಪಿನ್ ಬಂಧನ

ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಹರಡಿದ್ದ ನಕಲಿ ಔಷಧ ಮಾರಾಟ ಜಾಲದ ಕಿಂಗ್ ಪಿನ್, ವಿದೇಶದಲ್ಲಿ ಅಡಗಿದ್ದ…

5 hours ago

ಗೋಣಿಕೊಪ್ಪ | ಮಾರುಕಟ್ಟೆಯಲ್ಲಿ ಗಸ್ತು ತಿರುಗಿದ ಪೊಲೀಸರು ; ಅಕ್ರಮ ಚಟುವಟಿಕೆ ಮೇಲೆ ನಿಗಾ

ಗೋಣಿಕೊಪ್ಪ : ಗೋಣಿಕೊಪ್ಪ ಪಟ್ಟಣದ ಮಾರುಕಟ್ಟೆ ಪ್ರದೇಶದಲ್ಲಿ ಅನಧಿಕೃತ ವಾಹನ ನಿಲುಗಡೆ, ರಸ್ತೆ ಅತಿಕ್ರಮಣ ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ…

6 hours ago

ಪಾರದೀಪ್ ಕರಾವಳಿಯಲ್ಲಿ ಹಡಗು ಮುಳುಗಡೆ ; ಇಬ್ಬರ ರಕ್ಷಣೆ, 22 ಮಂದಿ ನಾಪತ್ತೆ

72,100 ಟನ್‌ ಕಬ್ಬಿಣದ ಅದಿರು ಇದ್ದ ಹಡಗು ಭುವನೇಶ್ವರ: ಒಡಿಶಾದ ಪಾರದೀಪ್ ಕರಾವಳಿಯ ಆಳ ಸಮುದ್ರದಲ್ಲಿ ಶನಿವಾರ ಭೀಕರ ನೌಕಾ…

7 hours ago

ಐಎಎಸ್‌ ಅಧಿಕಾರಿ ಜ್ಞಾನೇಂದ್ರ ಕುಮಾರ್ ಮನೆ ಬಾಗಿಲು ಒಡೆದು ಇಡಿ ದಾಳಿ

ಬೆಂಗಳೂರು : ಕೆಪಿಎಸ್‌ಸಿ ಹಗರಣ ಸಂಬಂಧ ಫೋನ್ ಕರೆಗೆ ಪ್ರತಿಕ್ರಿಯಿಸದ ಹಿನ್ನೆಲೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅನುಪಸ್ಥಿತಿಯಲ್ಲಿ ಅವರ…

8 hours ago