Smriti Mandhana
ಮುಂಬೈ : ಮಹಿಳಾ ಕ್ರಿಕೆಟ್ನಲ್ಲಿ ಸ್ಮೃತಿ ಮಂದಾನ ಅವರ ಪರಾಕ್ರಮ ಮುಂದುವರಿದಿದೆ. ಇತ್ತೀಚೆಗೆ ನಡೆದ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಹಲವು ದಾಖಲೆಗಳನ್ನು ಬರೆದಿದ್ದ ಸ್ಮೃತಿ ಇದೀಗ ಏಕದಿನ ಕ್ರಿಕೆಟ್ನಲ್ಲೂ ಭರ್ಜರಿ ದಾಖಲೆಯೊಂದನ್ನು ನಿರ್ಮಿಸಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ವಿಶ್ವದ 10 ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.
ಮಹಿಳಾ ಕ್ರಿಕೆಟ್ನಲ್ಲಿ ದಾಖಲೆಗಳ ಮೇಲೆ ದಾಖಲೆ ಬರೆಯುತ್ತಿರುವ ಸ್ಮೃತಿ ಮಂದಾನ ಇದೀಗ ಮತ್ತೊಂದು ಮೈಲುಗಲ್ಲು ದಾಟಿದ್ದಾರೆ. ಈ ಮೈಲುಗಲ್ಲು ದಾಟುವುದರೊಂದಿಗೆ ಈ ಸಾಧನೆ ಮಾಡಿದ ಭಾರತದ 1ನೇ ಮಹಿಳಾ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ಸಹ ತಮ್ಮದಾಗಿಸಿಕೊಂಡಿದ್ದಾರೆ.
ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಆರಂಭಿಕಳಾಗಿ ಕಣಕ್ಕಿಳಿದ ಸ್ಮೃತಿ ಮಂಧಾನ 24 ಎಸೆತಗಳಲ್ಲಿ 5 ಫೋರ್ಗಳೊಂದಿಗೆ 28 ರನ್ ಬಾರಿಸಿದ್ದರು. ಈ 28 ರನ್ಗಳೊಂದಿಗೆ ಸ್ಮೃತಿ ಮಹಿಳಾ ಏಕದಿನ ಕ್ರಿಕೆಟ್ನಲ್ಲಿ 4500 ರನ್ಗಳನ್ನು ಪೂರೈಸಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ 2ನೇ ಭಾರತೀಯ ಆಟಗಾರ್ತಿ ಎನಿಸಿಕೊಂಡಿದ್ದಾರೆ.
ಇದಕ್ಕೂ ಮುನ್ನ ಈ ಸಾಧನೆ ಮಾಡಿದ್ದು ಭಾರತ ಮಹಿಳಾ ತಂಡದ ಮಾಜಿ ನಾಯಕಿ ಮಿಥಾಲಿ ರಾಜ್. ಭಾರತದ ಪರ 211 ಏಕದಿನ ಇನಿಂಗ್ಸ್ ಆಡಿರುವ ಮಿಥಾಲಿ 7 ಶತಕ ಹಾಗೂ 64 ಅರ್ಧಶತಕಗೊಂದಿಗೆ 7805 ರನ್ ಕಲೆಹಾಕಿದ್ದಾರೆ. ಈ ಮೂಲಕ ಮಹಿಳಾ ಏಕದಿನ ಕ್ರಿಕೆಟ್ನಲ್ಲಿ ಅತ್ಯಧಿಕ ರನ್ಗಳಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.
ಇದೀಗ 103 ಏಕದಿನ ಇನಿಂಗ್ಸ್ಗಳ ಮೂಲಕ 11 ಶತಕ ಹಾಗೂ 31 ಅರ್ಧಶತಕಗಳನ್ನು ಬಾರಿಸಿರುವ ಸ್ಮೃತಿ ಮಂದಾನ ಒಟ್ಟು 4501 ರನ್ ಕಲೆಹಾಕಿದ್ದಾರೆ. ಈ ಮೂಲಕ ಏಕದಿನ ಕ್ರಿಕೆಟ್ನಲ್ಲಿ ಭಾರತದ ಪರ ಅತ್ಯಧಿಕ ರನ್ ಕಲೆಹಾಕಿದ 2ನೇ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ಸ್ಮೃತಿ ತಮ್ಮದಾಗಿಸಿಕೊಂಡಿದ್ದಾರೆ.
ಅಂದಹಾಗೆ ಮಹಿಳಾ ಏಕದಿನ ಕ್ರಿಕೆಟ್ನಲ್ಲಿ ಈವರೆಗೆ ಕೇವಲ 10 ಆಟಗಾರ್ತಿಯರು ಮಾತ್ರ 4500+ ರನ್ ಗಳಿಸಿದ್ದಾರೆ. ಇವರಲ್ಲಿ ಮಿಥಾಲಿ ರಾಜ್ ಅಗ್ರಸ್ಥಾನದಲ್ಲಿದ್ದರೆ, ಸ್ಮೃತಿ ಮಂದಾನ 10ನೇ ಸ್ಥಾನದಲ್ಲಿದ್ದಾರೆ. ಸದ್ಯ ಉತ್ತಮ ಫಾರ್ಮ್ನಲ್ಲಿರುವ ಸ್ಮೃತಿ ಇದೇ ರೀತಿ ಬ್ಯಾಟಿಂಗ್ ಮುಂದುವರಿಸಿದರೆ ಮಹಿಳಾ ಏಕದಿನ ಕ್ರಿಕೆಟ್ನಲ್ಲಿ ಅತ್ಯಧಿಕ ರನ್ಗಳಿಸಿದ ಬ್ಯಾಟರ್ ಆಗಿ ಹೊರಹೊಮ್ಮಬಹುದು
ಮೈಸೂರು: ಪರಪುರುಷನ ಸಂಗ ಮಾಡಿದ್ದ ತಾಯಿಯನ್ನು ಮಗ ಕೊಲೆ ಮಾಡಿರುವ ಘಟನೆ ಮೈಸೂರು ತಾಲ್ಲೂಕಿನ ಮಾದಹಳ್ಳಿ ಗ್ರಾಮದಲ್ಲಿ ನಡೆದಿದೆ. ಸುಧಾ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಲಿಮೇಡುವಿನಲ್ಲಿರುವ ಸೇಂಟ್ ಮೇರಿಸ್…
ಸಿದ್ದಾಪುರ: ಸಿದ್ದಾಪುರ ವ್ಯಾಪ್ತಿಯ ಕೂಡುಗದ್ದೆ ಗ್ರಾಮದಲ್ಲಿ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ. ಮೃತನನ್ನು ಕೂಡುಗದ್ದೆ ನಿವಾಸಿ…
ತಿರುವನಂತಪುರಂ: ಕೇರಳಂ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್ ಅವರಿಂದು ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಆರ್.ವಿ.ಅರ್ಲೇಕರ್ ಅವರು ಪ್ರಮಾಣವಚನ ಬೋಧಿಸಿದರು. ಸತೀಶನ್ ಜೊತೆಗೆ ಅವರ…
ಭಾರತದಲ್ಲಿ ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾದ ಪರಿಣಾಮ ಮೇ ೩ರಂದು ನಡೆದಿದ್ದ…
ಭವಿಷ್ಯದಲ್ಲಿ ವೈದ್ಯರಾಗಿ ಸುಂದರ ಬದುಕು ಕಟ್ಟಿಕೊಳ್ಳುವ ಜತೆಗೆ ರೋಗಿಗಳ ಸೇವೆ ಮಾಡುತ್ತಾ ಸಮಾಜದಲ್ಲಿ ಗೌರವ ಸಂಪಾದನೆಯ ಕನಸುಹೊತ್ತು ಎರಡು ವರ್ಷಗಳಿಂದ…