ಕ್ರೀಡೆ

ODI | ದಾಖಲೆ ನಿರ್ಮಿಸಿದ ಸ್ಮೃತಿ ಮಂಧಾನ ; ಸಾವಿರ ರನ್‌ ಪೂರೈಸಿದ ಜಗತ್ತಿನ ಮೊದಲ ಬ್ಯಾಟರ್‌

ಹೊಸದಿಲ್ಲಿ : ಭಾರತ ತಂಡದ ಎಡಗೈ ಆರಂಭಿಕ ಬ್ಯಾಟರ್‌ ಹಾಗೂ ವನಿತೆಯರ ತಂಡದ ಸ್ಟಾರ್ ಬ್ಯಾಟರ್ ಸ್ಮೃತಿ ಮಂಧಾನ ಮಹಿಳಾ ಏಕದಿನ ಕ್ರಿಕೆಟ್‌ ಇತಿಹಾಸದಲ್ಲಿ ವಿಶ್ವದಾಖಲೆಯೊಂದನ್ನು ನಿರ್ಮಿಸಿದ್ದಾರೆ.

ಕ್ಯಾಲೆಂಡರ್ ವರ್ಷದಲ್ಲಿ 1000 ರನ್ ಗಳಿಸಿದ ಮೊದಲ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.  17 ಪಂದ್ಯಗಳಿಂದ 982 ರನ್ ಗಳಿಸಿದ್ದ ಮಂಧಾನ, ಭಾನುವಾರದ ಆಸೀಸ್‌ ವಿರುದ್ಧದ ಏಕದಿನ ವಿಶ್ವಕಪ್‌ ಪಂದ್ಯದಲ್ಲಿ 18 ರನ್‌ ಪೂರ್ತಿಗೊಳಿಸುತ್ತಿದ್ದಂತೆ ಈ ಮೈಲುಗಲ್ಲು ಸಾಧಿಸಿದರು.

ಮಂಧಾನಗೆ ವಿಶ್ವಕಪ್‌ನ ಈವರೆಗಿನ ಪಂದ್ಯಾವಳಿ ಉತ್ತಮವಾಗಿರಲಿಲ್ಲ. ಮೊದಲ ಮೂರು ಪಂದ್ಯಗಳಲ್ಲಿ ಕಳಪೆ ಬ್ಯಾಟಿಂಗ್‌ ಮೂಲಕ ಭಾರೀ ಟೀಕೆಗೆ ಗುರಿಯಾಗಿದ್ದರು. ಶ್ರೀಲಂಕಾ ವಿರುದ್ಧ 8, ಪಾಕಿಸ್ತಾನ ವಿರುದ್ಧ 23, ದಕ್ಷಿಣ ಆಫ್ರಿಕಾ ವಿರುದ್ಧ, 23 ರನ್ ಗಳಿಸಿದ್ದರು. ಆದರೆ ಆಸೀಸ್‌ ವಿರುದ್ಧ ಉತ್ತಮ ಬ್ಯಾಟಿಂಗ್‌ ನಡೆಸಿ ಮತ್ತೆ ಹಳೆಯ ಲಯಕ್ಕೆ ಮರಳಿದ್ದಾರೆ. 66 ಎಸೆತಗಳಿಂದ 9 ಬೌಂಡರಿ ಮತ್ತು 3 ಸಿಕ್ಸರ್‌ ನೆರವಿನಿಂದ 80 ರನ್‌ ಗಳಿಸಿ ಅರ್ಧಶತಕ ಪೂರ್ತಿಗೊಳಿಸಿದರು.

ಕಳೆದ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಮಂಧಾನ, ಕ್ಯಾಲೆಂಡರ್ ವರ್ಷದಲ್ಲಿ ಮಹಿಳಾ ಏಕದಿನ ಪಂದ್ಯಗಳಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್‌ಮನ್ ಎಂಬ ಹಿಂದಿನ ದಾಖಲೆಯನ್ನು ಮುರಿದ್ದರು. ಇದೀಗ ಸಾವಿರ ರನ್‌ ಪೂರೈಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಶೇ.56ರಷ್ಟು ಮೀಸಲಾತಿ | 9ನೇ ಶೆಡ್ಯೂಲ್‌ಗೆ ಸೇರಿಸಲು ವಿ.ಎಸ್.ಉಗ್ರಪ್ಪ ಆಗ್ರಹ

ಬೆಂಗಳೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ಜಾತಿಗಳ ಮೀಸಲಾತಿ ಪ್ರಮಾಣವನ್ನು ಶೇ.56ಕ್ಕೆ ಹೆಚ್ಚಳ…

3 hours ago

Padma Award | ಧರ್ಮೇಂದ್ರಗೆ ಪದ್ಮವಿಭೂಷಣ, ಮಮ್ಮುಟಿಗೆ ಪದ್ಮಭೂಷಣ ಪ್ರಶಸ್ತಿ

ಹೊಸದಿಲ್ಲಿ : ಹಿರಿಯ ನಟ ಧರ್ಮೇಂದ್ರ, ದಂತಕಥೆ ಹಿನ್ನೆಲೆ ಗಾಯಕಿ ಅಲ್ಕಾ ಯಾಜ್ಞಿಕ್, ಮಲಯಾಳಂ ಸಿನಿಮಾ ದಿಗ್ಗಜ ಮಮ್ಮುಟ್ಟಿ, ಬಂಗಾಳಿ…

3 hours ago

ನ್ಯಾಯಾಂಗ ಸ್ವಾತಂತ್ರ್ಯಕ್ಕೆ ʼಆಂತರಿಕ ಅಪಾಯʼ : ಸುಪ್ರೀಂ ನ್ಯಾಯಾಧೀಶರಿಂದ ಕಾರ್ಯಾಂಗದ ಬಗ್ಗೆ ಅಸಮಾಧಾನ

ಹೊಸದಿಲ್ಲಿ : ನ್ಯಾಯಾಂಗ ಸ್ವಾತಂತ್ರ್ಯಕ್ಕೆ ಅಪಾಯ ಹೊರಗಿನಿಂದಲ್ಲ, ‘ಆಂತರಿಕ ವ್ಯವಸ್ಥೆ’ಯಿಂದಲೇ ಇದೆ ಎಂದು ಹೇಳಿರುವ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ್…

4 hours ago

ಅಧಿಕಾರಿಗಳು ಜನಪ್ರತಿನಿಧಿಗಳ ಕರೆ ಸ್ವೀಕರಿಸಿ : ರಾಜ್ಯ ಸರ್ಕಾರಿ ಅಧಿಕಾರಿಗಳಿಗೆ ಮುಖ್ಯಕಾರ್ಯದರ್ಶಿ ಖಡಕ್ ಸೂಚನೆ

ಬೆಂಗಳೂರು : ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆಯನ್ನು ಸ್ವೀಕರಿಸಲೇಬೇಕು ಎಂಬ ಸುತ್ತೋಲೆಯನ್ನು ಹೊರಡಿಸುವ ಮೂಲಕ ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ…

5 hours ago

ಬುದ್ಧಗಯಾ ವಿಮೋಚನಾ ಚಳವಳಿ ಬೆಂಬಲಿಸಿ

ಮೈಸೂರು : ಹೊಸದಿಲ್ಲಿಯಲ್ಲಿ ಬುದ್ಧಗಯಾ ವಿಮೋಚನೆ ಐತಿಹಾಸಿಕ ಚಳವಳಿಯಲ್ಲಿ ಬೌದ್ಧ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಬೌದ್ಧ ಚಿಂತಕ,…

5 hours ago

ಮೈಸೂರಲ್ಲಿ ಸಂಭ್ರಮದ ರಥಸಪ್ತಮಿ

ಮೈಸೂರು : ರಥಸಪ್ತಮಿ ಅಂಗವಾಗಿ ನಗರದಲ್ಲಿ ಭಾನುವಾರ ಅರಮನೆ ಸೇರಿದಂತೆ ವಿವಿಧೆಡೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸೂರ್ಯನಿಗೆ ನಮಿಸಲಾಯಿತು.…

6 hours ago