ಕ್ರೀಡೆ

ODI | ದಾಖಲೆ ನಿರ್ಮಿಸಿದ ಸ್ಮೃತಿ ಮಂಧಾನ ; ಸಾವಿರ ರನ್‌ ಪೂರೈಸಿದ ಜಗತ್ತಿನ ಮೊದಲ ಬ್ಯಾಟರ್‌

ಹೊಸದಿಲ್ಲಿ : ಭಾರತ ತಂಡದ ಎಡಗೈ ಆರಂಭಿಕ ಬ್ಯಾಟರ್‌ ಹಾಗೂ ವನಿತೆಯರ ತಂಡದ ಸ್ಟಾರ್ ಬ್ಯಾಟರ್ ಸ್ಮೃತಿ ಮಂಧಾನ ಮಹಿಳಾ ಏಕದಿನ ಕ್ರಿಕೆಟ್‌ ಇತಿಹಾಸದಲ್ಲಿ ವಿಶ್ವದಾಖಲೆಯೊಂದನ್ನು ನಿರ್ಮಿಸಿದ್ದಾರೆ.

ಕ್ಯಾಲೆಂಡರ್ ವರ್ಷದಲ್ಲಿ 1000 ರನ್ ಗಳಿಸಿದ ಮೊದಲ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.  17 ಪಂದ್ಯಗಳಿಂದ 982 ರನ್ ಗಳಿಸಿದ್ದ ಮಂಧಾನ, ಭಾನುವಾರದ ಆಸೀಸ್‌ ವಿರುದ್ಧದ ಏಕದಿನ ವಿಶ್ವಕಪ್‌ ಪಂದ್ಯದಲ್ಲಿ 18 ರನ್‌ ಪೂರ್ತಿಗೊಳಿಸುತ್ತಿದ್ದಂತೆ ಈ ಮೈಲುಗಲ್ಲು ಸಾಧಿಸಿದರು.

ಮಂಧಾನಗೆ ವಿಶ್ವಕಪ್‌ನ ಈವರೆಗಿನ ಪಂದ್ಯಾವಳಿ ಉತ್ತಮವಾಗಿರಲಿಲ್ಲ. ಮೊದಲ ಮೂರು ಪಂದ್ಯಗಳಲ್ಲಿ ಕಳಪೆ ಬ್ಯಾಟಿಂಗ್‌ ಮೂಲಕ ಭಾರೀ ಟೀಕೆಗೆ ಗುರಿಯಾಗಿದ್ದರು. ಶ್ರೀಲಂಕಾ ವಿರುದ್ಧ 8, ಪಾಕಿಸ್ತಾನ ವಿರುದ್ಧ 23, ದಕ್ಷಿಣ ಆಫ್ರಿಕಾ ವಿರುದ್ಧ, 23 ರನ್ ಗಳಿಸಿದ್ದರು. ಆದರೆ ಆಸೀಸ್‌ ವಿರುದ್ಧ ಉತ್ತಮ ಬ್ಯಾಟಿಂಗ್‌ ನಡೆಸಿ ಮತ್ತೆ ಹಳೆಯ ಲಯಕ್ಕೆ ಮರಳಿದ್ದಾರೆ. 66 ಎಸೆತಗಳಿಂದ 9 ಬೌಂಡರಿ ಮತ್ತು 3 ಸಿಕ್ಸರ್‌ ನೆರವಿನಿಂದ 80 ರನ್‌ ಗಳಿಸಿ ಅರ್ಧಶತಕ ಪೂರ್ತಿಗೊಳಿಸಿದರು.

ಕಳೆದ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಮಂಧಾನ, ಕ್ಯಾಲೆಂಡರ್ ವರ್ಷದಲ್ಲಿ ಮಹಿಳಾ ಏಕದಿನ ಪಂದ್ಯಗಳಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್‌ಮನ್ ಎಂಬ ಹಿಂದಿನ ದಾಖಲೆಯನ್ನು ಮುರಿದ್ದರು. ಇದೀಗ ಸಾವಿರ ರನ್‌ ಪೂರೈಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ʼದಳಪತಿʼ ವಿಜಯ್‌ ಸೆಳೆಯಲು ಬಿಜೆಪಿ ತಂತ್ರ : ಡಿಸಿಎಂ ಸ್ಥಾನದ ಜತೆಗೆ 80 ಸ್ಥಾನದ ಆಫರ್‌!

ಚೆನ್ನೈ : ತಮಿಳುನಾಡು ರಾಜಕಾರಣದಲ್ಲಿ ತಮ್ಮದೇ ಆದ ಕ್ರೇಜ್‌ ಸೃಷ್ಟಿಸಿಕೊಂಡಿರುವ ಟಿವಿಕೆ ಪಕ್ಷದ ಅಧ್ಯಕ್ಷ, ನಟ ʼದಳಪತಿʼ ವಿಜಯ್ ಅವರನ್ನು…

8 hours ago

ತಂಪೆರೆದ ಮಳೆ ; ಕೊಡಗು ಸೇರಿದಂತೆ ರಾಜ್ಯದ ಹಲವೆಡೆ ಮಳೆ

ಮೈಸೂರು : ಜನರು ವಿಪರೀತ ಸೆಕೆಯಿಂದಾಗಿ ತತ್ತರಿಸಿ ಹೋಗಿರುವ ನಡುವೆ ಕೆಲ ಜಿಲ್ಲೆಗಳಲ್ಲಿ ಇಂದು(ಮಾರ್ಚ್.‌15) ಸಂಜೆ ಅಕಾಲಿಕವಾಗಿ ಮಳೆ ಸುರಿದು…

9 hours ago

ಮಂಡ್ಯ | ನಾಲೆ ಅಭಿವೃದ್ಧಿಗೆ 100 ಕೋಟಿ ಅನುದಾನ ; ಶಾಸಕ ರವಿಕುಮಾರ್‌

ಮಂಡ್ಯ : ಮಂಡ್ಯ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಗೆ ಸಮಗ್ರ ಯೋಜನೆ ರೂಪಿಸಲಾಗಿದ್ದು, ಬಸರಾಳು ಭಾಗದ ಹೇಮಾವತಿ ನಾಲೆ ಅಭಿವೃದ್ಧಿಗೆ 350…

9 hours ago

ಆದಿಚುಂಚನಗಿರಿ ಶ್ರೀಗಳ ನಡೆ ದಾರಿ ತಪ್ಪುತ್ತಿದೆ ಹೇಳಿಕೆ : ಕ್ಷೆಮೆಯಾಚಿಸಿದ ಶಾಸಕ ರಮೇಶ್‌ ಬಂಡಿಸಿದ್ದೇಗೌಡ

ಮಂಡ್ಯ : ನಾನು ಯಾವಾಗ ಮಾತನಾಡಿದರೂ ವಿವಾದ ಆಗುತ್ತೆ. ನನ್ನ ಮಾತಿನಿಂದ ನೋವಾಗಿದ್ದರೆ, ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ ಕ್ಷಮೆ ಯಾಚಿಸುತ್ತೇನೆ…

9 hours ago

ಎಚ್‌.ಡಿ.ಕೋಟೆ | ಬೈಕುಗಳ ನಡುವೆ ಡಿಕ್ಕಿ : ಓರ್ವ ಸಾವು

ಎಚ್.ಡಿ.ಕೋಟೆ : ಎರಡು ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸಾವಿಗೀಡಾಗಿರುವ ಘಟನೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ ಹೆರಿಗೆ…

10 hours ago

ಭೀಕರ ಅಪಘಾತ : ಮೂವರು ಪೊಲೀಸ್ ಅಧಿಕಾರಿಗಳು ಸಾವು ; ಸ್ಥಳಕ್ಕೆ ಗೃಹ ಸಚಿವರ ಭೇಟಿ

ಚಿತ್ರದುರ್ಗ : ಚಳ್ಳಕೆರೆ ಸಮೀಪದ ಹೆಗ್ಗೆರೆ ಗೇಟ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಪೊಲೀಸ್ ಅಧಿಕಾರಿಗಳು ಮೃತಪಟ್ಟಿದ್ದಾರೆ. ಇಬ್ಬರು…

10 hours ago