ಕ್ರೀಡೆ

ODI | ದಾಖಲೆ ನಿರ್ಮಿಸಿದ ಸ್ಮೃತಿ ಮಂಧಾನ ; ಸಾವಿರ ರನ್‌ ಪೂರೈಸಿದ ಜಗತ್ತಿನ ಮೊದಲ ಬ್ಯಾಟರ್‌

ಹೊಸದಿಲ್ಲಿ : ಭಾರತ ತಂಡದ ಎಡಗೈ ಆರಂಭಿಕ ಬ್ಯಾಟರ್‌ ಹಾಗೂ ವನಿತೆಯರ ತಂಡದ ಸ್ಟಾರ್ ಬ್ಯಾಟರ್ ಸ್ಮೃತಿ ಮಂಧಾನ ಮಹಿಳಾ ಏಕದಿನ ಕ್ರಿಕೆಟ್‌ ಇತಿಹಾಸದಲ್ಲಿ ವಿಶ್ವದಾಖಲೆಯೊಂದನ್ನು ನಿರ್ಮಿಸಿದ್ದಾರೆ.

ಕ್ಯಾಲೆಂಡರ್ ವರ್ಷದಲ್ಲಿ 1000 ರನ್ ಗಳಿಸಿದ ಮೊದಲ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.  17 ಪಂದ್ಯಗಳಿಂದ 982 ರನ್ ಗಳಿಸಿದ್ದ ಮಂಧಾನ, ಭಾನುವಾರದ ಆಸೀಸ್‌ ವಿರುದ್ಧದ ಏಕದಿನ ವಿಶ್ವಕಪ್‌ ಪಂದ್ಯದಲ್ಲಿ 18 ರನ್‌ ಪೂರ್ತಿಗೊಳಿಸುತ್ತಿದ್ದಂತೆ ಈ ಮೈಲುಗಲ್ಲು ಸಾಧಿಸಿದರು.

ಮಂಧಾನಗೆ ವಿಶ್ವಕಪ್‌ನ ಈವರೆಗಿನ ಪಂದ್ಯಾವಳಿ ಉತ್ತಮವಾಗಿರಲಿಲ್ಲ. ಮೊದಲ ಮೂರು ಪಂದ್ಯಗಳಲ್ಲಿ ಕಳಪೆ ಬ್ಯಾಟಿಂಗ್‌ ಮೂಲಕ ಭಾರೀ ಟೀಕೆಗೆ ಗುರಿಯಾಗಿದ್ದರು. ಶ್ರೀಲಂಕಾ ವಿರುದ್ಧ 8, ಪಾಕಿಸ್ತಾನ ವಿರುದ್ಧ 23, ದಕ್ಷಿಣ ಆಫ್ರಿಕಾ ವಿರುದ್ಧ, 23 ರನ್ ಗಳಿಸಿದ್ದರು. ಆದರೆ ಆಸೀಸ್‌ ವಿರುದ್ಧ ಉತ್ತಮ ಬ್ಯಾಟಿಂಗ್‌ ನಡೆಸಿ ಮತ್ತೆ ಹಳೆಯ ಲಯಕ್ಕೆ ಮರಳಿದ್ದಾರೆ. 66 ಎಸೆತಗಳಿಂದ 9 ಬೌಂಡರಿ ಮತ್ತು 3 ಸಿಕ್ಸರ್‌ ನೆರವಿನಿಂದ 80 ರನ್‌ ಗಳಿಸಿ ಅರ್ಧಶತಕ ಪೂರ್ತಿಗೊಳಿಸಿದರು.

ಕಳೆದ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಮಂಧಾನ, ಕ್ಯಾಲೆಂಡರ್ ವರ್ಷದಲ್ಲಿ ಮಹಿಳಾ ಏಕದಿನ ಪಂದ್ಯಗಳಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್‌ಮನ್ ಎಂಬ ಹಿಂದಿನ ದಾಖಲೆಯನ್ನು ಮುರಿದ್ದರು. ಇದೀಗ ಸಾವಿರ ರನ್‌ ಪೂರೈಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಉತ್ತರ ಪ್ರದೇಶದಲ್ಲಿ ಮಳೆ ಅವಾಂತರ: ಸಾವಿನ ಸಂಖ್ಯೆ 104ಕ್ಕೆ ಏರಿಕೆ

ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…

30 mins ago

PGCET| MBA, MCA ಪ್ರವೇಶ ಪರೀಕ್ಷೆ ಜೂನ್.‌4ಕ್ಕೆ ಮುಂದೂಡಿದ ಕೆಇಎ

ಬೆಂಗಳೂರು: ಇದೇ ತಿಂಗಳ 24 ರಂದು ನಡೆಯಬೇಕಿದ್ದ ಎಂಬಿಎ, ಎಂಸಿಎ ಕೋರ್ಸ್‌ಗಳ ಪ್ರವೇಶ್‌ ಪರೀಕ್ಷೆಯನ್ನು ಜೂನ್.‌14ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು…

1 hour ago

ಹನೂರು| ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿಗೆ ಭತ್ತ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ…

2 hours ago

ಮಾರ್ಟಳ್ಳಿಯಲ್ಲಿ ಮರೀಚಿಕೆಯಾದ ಸ್ವಚ್ಛತೆ: ಗ್ರಾಮಸ್ಥರ ಆಕ್ರೋಶ

ಹನೂರು: ತಾಲ್ಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆ ಹೊಂದಿರುವ ಮಾರ್ಟಳ್ಳಿಯಲ್ಲಿ ಸದ್ಯ ಸ್ವಚ್ಛತೆ ಎಂಬುದು ಮರೀಚಿಕೆಯಾಗಿದೆ. ಗ್ರಾಮದ…

2 hours ago

ಕಿಡ್ನಿ ಮರು ಜೋಡಣೆಗೆ ಸಹಾಯ ಹಸ್ತ ಕೋರಿದ ಬಡ ಕುಟುಂಬ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಸ್ವಂತ ಮಗನಿಗೆ ತಾಯಿ ಕಿಡ್ನಿ ಜೋಡಣೆಗೆ…

2 hours ago

ಹನೂರು| ಭಿಕ್ಷೆ ಬೇಡುತ್ತಿದ್ದ ಬಾಲಕನ ರಕ್ಷಣೆ: ಮಕ್ಕಳ ರಕ್ಷಣಾ ಘಟಕದವರಿಂದ ಬಾಲಮಂದಿರಕ್ಕೆ ಸೇರ್ಪಡೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣ ವ್ಯಾಪ್ತಿಯಲ್ಲಿ ಭಿಕ್ಷೆ ಬೇಡುತ್ತಿದ್ದ ಬಾಲಕನನ್ನು ಮಕ್ಕಳ ರಕ್ಷಣಾ ಘಟಕದ…

2 hours ago