ಕ್ರೀಡೆ

ODI | ದಾಖಲೆ ನಿರ್ಮಿಸಿದ ಸ್ಮೃತಿ ಮಂಧಾನ ; ಸಾವಿರ ರನ್‌ ಪೂರೈಸಿದ ಜಗತ್ತಿನ ಮೊದಲ ಬ್ಯಾಟರ್‌

ಹೊಸದಿಲ್ಲಿ : ಭಾರತ ತಂಡದ ಎಡಗೈ ಆರಂಭಿಕ ಬ್ಯಾಟರ್‌ ಹಾಗೂ ವನಿತೆಯರ ತಂಡದ ಸ್ಟಾರ್ ಬ್ಯಾಟರ್ ಸ್ಮೃತಿ ಮಂಧಾನ ಮಹಿಳಾ ಏಕದಿನ ಕ್ರಿಕೆಟ್‌ ಇತಿಹಾಸದಲ್ಲಿ ವಿಶ್ವದಾಖಲೆಯೊಂದನ್ನು ನಿರ್ಮಿಸಿದ್ದಾರೆ.

ಕ್ಯಾಲೆಂಡರ್ ವರ್ಷದಲ್ಲಿ 1000 ರನ್ ಗಳಿಸಿದ ಮೊದಲ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.  17 ಪಂದ್ಯಗಳಿಂದ 982 ರನ್ ಗಳಿಸಿದ್ದ ಮಂಧಾನ, ಭಾನುವಾರದ ಆಸೀಸ್‌ ವಿರುದ್ಧದ ಏಕದಿನ ವಿಶ್ವಕಪ್‌ ಪಂದ್ಯದಲ್ಲಿ 18 ರನ್‌ ಪೂರ್ತಿಗೊಳಿಸುತ್ತಿದ್ದಂತೆ ಈ ಮೈಲುಗಲ್ಲು ಸಾಧಿಸಿದರು.

ಮಂಧಾನಗೆ ವಿಶ್ವಕಪ್‌ನ ಈವರೆಗಿನ ಪಂದ್ಯಾವಳಿ ಉತ್ತಮವಾಗಿರಲಿಲ್ಲ. ಮೊದಲ ಮೂರು ಪಂದ್ಯಗಳಲ್ಲಿ ಕಳಪೆ ಬ್ಯಾಟಿಂಗ್‌ ಮೂಲಕ ಭಾರೀ ಟೀಕೆಗೆ ಗುರಿಯಾಗಿದ್ದರು. ಶ್ರೀಲಂಕಾ ವಿರುದ್ಧ 8, ಪಾಕಿಸ್ತಾನ ವಿರುದ್ಧ 23, ದಕ್ಷಿಣ ಆಫ್ರಿಕಾ ವಿರುದ್ಧ, 23 ರನ್ ಗಳಿಸಿದ್ದರು. ಆದರೆ ಆಸೀಸ್‌ ವಿರುದ್ಧ ಉತ್ತಮ ಬ್ಯಾಟಿಂಗ್‌ ನಡೆಸಿ ಮತ್ತೆ ಹಳೆಯ ಲಯಕ್ಕೆ ಮರಳಿದ್ದಾರೆ. 66 ಎಸೆತಗಳಿಂದ 9 ಬೌಂಡರಿ ಮತ್ತು 3 ಸಿಕ್ಸರ್‌ ನೆರವಿನಿಂದ 80 ರನ್‌ ಗಳಿಸಿ ಅರ್ಧಶತಕ ಪೂರ್ತಿಗೊಳಿಸಿದರು.

ಕಳೆದ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಮಂಧಾನ, ಕ್ಯಾಲೆಂಡರ್ ವರ್ಷದಲ್ಲಿ ಮಹಿಳಾ ಏಕದಿನ ಪಂದ್ಯಗಳಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್‌ಮನ್ ಎಂಬ ಹಿಂದಿನ ದಾಖಲೆಯನ್ನು ಮುರಿದ್ದರು. ಇದೀಗ ಸಾವಿರ ರನ್‌ ಪೂರೈಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ನಾಗೇಂದ್ರ ರಾಜೀನಾಮೆ; ಅನಿಲ್‌ಗೆ ಸಚಿವ ಸ್ಥಾನ ಸಿಗುವುದೇ?

ಮಂಜು ಕೋಟೆ ಎಚ್.ಡಿ.ಕೋಟೆ: ನಾಯಕ ಸಮುದಾಯದ ಮುಖಂಡರಾದ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಹಿನ್ನೆಲೆಯಲ್ಲಿ ತೆರವಾಗಿರುವ ಆ…

5 hours ago

ಓದುಗರ ಪತ್ರ: ಮದ್ದು ಅರೆಯಲಿ ಆಳುವವರು!

ಮದ್ದು ಅರೆಯಲಿ ಆಳುವವರು! ಬಗೆದಷ್ಟೂ ಬಯಲಾಗುತಿದೆ ಬ್ರಹ್ಮಾಂಡ ಭ್ರಷ್ಟಾಚಾರ ನೆಲದಾಳಕೂ ಬೇರೂರಿದೆ ಕೆಪಿಎಸ್‌ಸಿಯ ಕರ್ಮಕಾಂಡ! ಹಣವಂತರ ಆಡುಂಬಲವಿದು ಹರಣವಾಗುತಿದೆ ಬಡವನ…

5 hours ago

ಓದುಗರ ಪತ್ರ: ಪಾದಚಾರಿ ಮಾರ್ಗಕ್ಕೂ ಅಡ್ಡಗಾಲು

ಮೈಸೂರಿನ ಕುವೆಂಪು ನಗರ ಕಾಂಪ್ಲೆಕ್ಸ್ ಹತ್ತಿರ ಇರುವ ಒಂದನೇ ಹಂತ (ಇಡಬ್ಲ್ಯು ಎಸ್) ೩ನೇ ಕ್ರಾಸ್ ಬಳಿ ರಸ್ತೆಯ ಒಂದು…

5 hours ago

ಓದುಗರ ಪತ್ರ: ಈ ಶೌಚಾಲಯ ಪ್ರಾರಂಭಕ್ಕೆ ಮುಹೂರ್ತ ಬಂದಿಲ್ಲವೇ?

ಹೆಚ್. ಡಿ. ಕೋಟೆ ಮಿನಿ ವಿಧಾನಸೌಧ ಆಡಳಿತ ಕಚೇರಿ ಪಕ್ಕದಲ್ಲಿ ಸಾರ್ವಜನಿಕರಿಗಾಗಿ ಸಾಕಷ್ಟು ಹಣ ಖರ್ಚು ಮಾಡಿ ಶೌಚಾಲಯವನ್ನು ನಿರ್ಮಾಣ…

5 hours ago

ಓದುಗರ ಪತ್ರ: 365 ದಿನಗಳೂ ಸಾರ್ವಜನಿಕ ಗ್ರಂಥಾಲಯಗಳ ಸೇವೆ ಲಭ್ಯವಿರಲಿ

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುವ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಿಕೊಡುವ ಉದ್ದೇಶದಿಂದ ಬೆಂಗಳೂರು, ಮೈಸೂರು ಸೇರಿದಂತೆ ಹಲವು ನಗರಗಳಲ್ಲಿ ಸಾರ್ವಜನಿಕ ಗ್ರಂಥಾಲಯಗಳು…

5 hours ago

ಯುವಜನರ ಕೈಯಲ್ಲಿ ಮೊಬೈಲ್ ಇದೆ; ದಿಕ್ಕು ಇದೆಯೇ?

ಟಿ.ಕೆ.ಹರೀಶ್ ತಕ್ಷಣದ ಯಶಸ್ಸಿನ ಸಂಸ್ಕೃತಿಯಿಂದ ಅಪಾಯಕಾರಿ ; ಯುವಜನರಿಗೆ ಮನವರಿಕೆ ಅಗತ್ಯ ಇಂದು ಒಂದು ಮಗು ಹುಟ್ಟಿದಾಗ ಅದರ ಸುತ್ತಲೂ…

5 hours ago