ಕ್ರೀಡೆ

ಐಸಿಸಿ ವರ್ಷದ ಮಹಿಳಾ ಏಕದಿನ ಕ್ರಿಕೆಟರ್‌ ಪ್ರಶಸ್ತಿ ಪಡೆದ ಸ್ಮೃತಿ

ದುಬೈ: ಅಂತರಾಷ್ಟ್ರೀಯ ಕ್ರಿಕೆಟ್‌ ಮಂಡಳಿಯ (ಐಸಿಸಿ) 2024ನೇ ಸಾಲಿನ ವರ್ಷದ ಮಹಿಳಾ ಏಕದಿನ ಕ್ರಿಕೆಟರ್‌ ಪ್ರಶಸ್ತಿಗೆ ಭಾರತದ ಮಹಿಳಾ ತಂಡದ ಆರಂಭಿಕ ಬ್ಯಾಟರ್‌ ಸ್ಮೃತಿ ಮಂದಾನ ಭಾಜನರಾಗಿದ್ದಾರೆ.

2024ರ ವರ್ಷದ ಏಕದಿನ ಕ್ರಿಕೆಟರ್‌ ಪ್ರಶಸ್ತಿಗೆ ಭಾಜನರಾಗುವ ಮೂಲಕ ತಮ್ಮ ವೃತ್ತಿ ಬದುಕಿನಲ್ಲಿ 4ನೇ ಐಸಿಸಿ ಪ್ರಶಸ್ತಿ ಗೆದ್ದ ಸಾಧನೆ ಮಾಡಿದ್ದಾರೆ.

ಕಳೆದ ವರ್ಷ ಏಕದಿನ ಕ್ರಿಕೆಟ್‌ನಲ್ಲಿ 13 ಇನ್ನಿಂಗ್ಸ್‌ಗಳನ್ನು ಆಡಿದ ಮಂದಾನ 4 ಭರ್ಜರಿ ಶತಕಗಳೊಂದಿಗೆ ಒಟ್ಟು 747 ರನ್‌ ಕಲಾಹಾಕಿದ್ದರು. ಆ ಮೂಲಕ ವರ್ಷದ ಏಕದಿನ ಮಾದರಿಯಲ್ಲಿ ಅತ್ಯಧಿಕ ರನ್‌ ಕಲೆ ಹಾಕಿದ ಮಹಿಳಾ ಕ್ರಿಕೆಟರ್‌ಗಳ ಸಾಲಿನಲ್ಲಿ ಅಗ್ರಸ್ಥಾನ ಪಡೆದುಕೊಂಡಿದ್ದರು.

ಇದಕ್ಕೂ ಮುನ್ನ 2018ರಲ್ಲಿ ಮೊದಲ ಬಾರಿಗೆ ವರ್ಷದ ಏಕದಿನ ಕ್ರಿಕೆಟರ್‌ ಪ್ರಶಸ್ತಿ ಗೆದ್ದಿದ್ದ ಮಂದಾನ, ಅದೇ ವರ್ಷ 2018ರ ಮಹಿಳಾ ಕ್ರಿಕೆಟರ್‌ ಗೌರವಕ್ಕೂ ಭಾಜನರಾಗಿದ್ದರು. ನಂತರ 2021 ಮತ್ತು ಈಗ 2024ರಲ್ಲಿ ವರ್ಷದ ಮಹಿಳಾ ಏಕದಿನ ಕ್ರಿಕೆಟರ್‌ ಪ್ರಶಸ್ತಿ ತಮ್ಮದಾಗಿಸಿಕೊಂಡಿದ್ದಾರೆ.

 

 

ಆಂದೋಲನ ಡೆಸ್ಕ್

Recent Posts

ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂಗೊಂಡಿರುವ…

8 hours ago

ಗುಂಡ್ಲುಪೇಟೆ: ಮದ್ದೂರು ವಲಯದಲ್ಲಿ ಮೃತ ಹುಲಿ ಕಳೇಬರ ಪತ್ತೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ‌ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಗುಡಿ ಬೀಟ್…

8 hours ago

ಭಾರತದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ದೇಶದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ. ಭಾರತವು ಕಚ್ಚಾ ತೈಲಕ್ಕಾಗಿ ಸಾಕಷ್ಟು ಸಂಗ್ರಹಣಾ ಸೌಲಭ್ಯಗಳು ಮತ್ತು ವಿಶ್ವಾಸಾರ್ಹ ಪೂರೈಕೆ…

10 hours ago

ರಸ್ತೆ ಅಪಘಾತಗಳನ್ನು ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ

ಮೈಸೂರು: ರಸ್ತೆ ಅಪಘಾತದಿಂದ ಹಲವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ…

11 hours ago

ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಅನುದಾನ ಒದಗಿಸಿ: ಎಂಎಲ್‌ಸಿ ಕೆ.ಶಿವಕುಮಾರ್‌ ಆಗ್ರಹ

ಬೆಂಗಳೂರು: ಮೈಸೂರು ನಗರ ಸೇರಿದಂತೆ ರಾಜ್ಯದಲ್ಲಿರುವ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಹೆಚ್ಚಿನ ಅನುದಾನ ಒದಗಿಸಬೇಕೆಂದು ಎಂಎಲ್‌ಸಿ ಕೆ.ಶಿವಕುಮಾರ್‌ ಒತ್ತಾಯಿಸಿದ್ದಾರೆ. ಈ…

11 hours ago

ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆ

ಬೆಂಗಳೂರು: ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಮಾಡಿ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿದೆ. ತಿಮರೋಡಿ ಅವರನ್ನು ದಕ್ಷಿಣ…

11 hours ago