ಕ್ರೀಡೆ

ಐಸಿಸಿ ವರ್ಷದ ಮಹಿಳಾ ಏಕದಿನ ಕ್ರಿಕೆಟರ್‌ ಪ್ರಶಸ್ತಿ ಪಡೆದ ಸ್ಮೃತಿ

ದುಬೈ: ಅಂತರಾಷ್ಟ್ರೀಯ ಕ್ರಿಕೆಟ್‌ ಮಂಡಳಿಯ (ಐಸಿಸಿ) 2024ನೇ ಸಾಲಿನ ವರ್ಷದ ಮಹಿಳಾ ಏಕದಿನ ಕ್ರಿಕೆಟರ್‌ ಪ್ರಶಸ್ತಿಗೆ ಭಾರತದ ಮಹಿಳಾ ತಂಡದ ಆರಂಭಿಕ ಬ್ಯಾಟರ್‌ ಸ್ಮೃತಿ ಮಂದಾನ ಭಾಜನರಾಗಿದ್ದಾರೆ.

2024ರ ವರ್ಷದ ಏಕದಿನ ಕ್ರಿಕೆಟರ್‌ ಪ್ರಶಸ್ತಿಗೆ ಭಾಜನರಾಗುವ ಮೂಲಕ ತಮ್ಮ ವೃತ್ತಿ ಬದುಕಿನಲ್ಲಿ 4ನೇ ಐಸಿಸಿ ಪ್ರಶಸ್ತಿ ಗೆದ್ದ ಸಾಧನೆ ಮಾಡಿದ್ದಾರೆ.

ಕಳೆದ ವರ್ಷ ಏಕದಿನ ಕ್ರಿಕೆಟ್‌ನಲ್ಲಿ 13 ಇನ್ನಿಂಗ್ಸ್‌ಗಳನ್ನು ಆಡಿದ ಮಂದಾನ 4 ಭರ್ಜರಿ ಶತಕಗಳೊಂದಿಗೆ ಒಟ್ಟು 747 ರನ್‌ ಕಲಾಹಾಕಿದ್ದರು. ಆ ಮೂಲಕ ವರ್ಷದ ಏಕದಿನ ಮಾದರಿಯಲ್ಲಿ ಅತ್ಯಧಿಕ ರನ್‌ ಕಲೆ ಹಾಕಿದ ಮಹಿಳಾ ಕ್ರಿಕೆಟರ್‌ಗಳ ಸಾಲಿನಲ್ಲಿ ಅಗ್ರಸ್ಥಾನ ಪಡೆದುಕೊಂಡಿದ್ದರು.

ಇದಕ್ಕೂ ಮುನ್ನ 2018ರಲ್ಲಿ ಮೊದಲ ಬಾರಿಗೆ ವರ್ಷದ ಏಕದಿನ ಕ್ರಿಕೆಟರ್‌ ಪ್ರಶಸ್ತಿ ಗೆದ್ದಿದ್ದ ಮಂದಾನ, ಅದೇ ವರ್ಷ 2018ರ ಮಹಿಳಾ ಕ್ರಿಕೆಟರ್‌ ಗೌರವಕ್ಕೂ ಭಾಜನರಾಗಿದ್ದರು. ನಂತರ 2021 ಮತ್ತು ಈಗ 2024ರಲ್ಲಿ ವರ್ಷದ ಮಹಿಳಾ ಏಕದಿನ ಕ್ರಿಕೆಟರ್‌ ಪ್ರಶಸ್ತಿ ತಮ್ಮದಾಗಿಸಿಕೊಂಡಿದ್ದಾರೆ.

 

 

ಆಂದೋಲನ ಡೆಸ್ಕ್

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

5 hours ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

6 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

17 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

17 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

17 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

17 hours ago