ಕ್ರೀಡೆ

ಕೆಲವೊಮ್ಮೆ ಹೆಚ್ಚು ಹಣ ಬಂದರೆ ದುರಹಂಕಾರವೂ ಬರುತ್ತದೆ: ಭಾರತದ ಕ್ರಿಕೆಟಿಗರ ವಿರುದ್ಧ ಕಪಿಲ್ ದೇವ್ ಕಿಡಿ

ನವದೆಹಲಿ : ಕೆಲವೊಮ್ಮೆ ಹೆಚ್ಚು ಹಣ ಬಂದರೆ ದುರಹಂಕಾರವೂ ಬರುತ್ತದೆ. ಈ ಕ್ರಿಕೆಟಿಗರು ತಮಗೆ ಎಲ್ಲವೂ ತಿಳಿದಿದೆ ಎಂದು ಭಾವಿಸುತ್ತಾರೆ. ಸಹಾಯದ ಅಗತ್ಯವಿರುವ ಅನೇಕ ಕ್ರಿಕೆಟಿಗರು ಇದ್ದಾರೆ. ಸುನೀಲ್ ಗವಾಸ್ಕರ್ ಇರುವಾಗ ನೀವು ಏಕೆ ಮಾತನಾಡಬಾರದು? ಎಂದು ಹೇಳಿರುವ ಭಾರತದ ಮಾಜಿ ನಾಯಕ ಕಪಿಲ್ ದೇವ್ ಹಾಲಿ ಕ್ರಿಕೆಟಿಗರ ಕುರಿತು ಬೇಸರ ವ್ಯಕ್ತಪಡಿಸಿದರು. ಈ ಮೂಲಕ ಈ ಹಿಂದೆ ಆಟಗಾರರ ಅಹಂಕಾರದ ಕುರಿತಂತೆ ಹೇಳಿಕೆ ನೀಡಿದ್ದ ಇನ್ನೋರ್ವ ಮಾಜಿ ಕ್ರಿಕೆಟಿಗ ಸುನೀಲ್ ಗವಾಸ್ಕರ್ ಮಾತಿಗೆ ಧ್ವನಿಗೂಡಿಸಿದ್ದಾರೆ.

The Weekಗೆ ನೀಡಿರುವ ಸಂದರ್ಶನದಲ್ಲಿ ಮಾತನಾಡಿದ ಕಪಿಲ್ ದೇವ್, ಈಗಿನ ಹೆಚ್ಚಿನ ಆಟಗಾರರು ತುಂಬಾ ಆತ್ಮವಿಶ್ವಾಸ ಹೊಂದಿದ್ದಾರೆ ಎಂಬುದು ನನ್ನ ಅನಿಸಿಕೆ. ಆದರೆ ಅವರಲ್ಲಿ ನಕಾರಾತ್ಮಕ ಅಂಶವೂ ಇದೆ. ನಮಗೆ ಎಲ್ಲವೂ ತಿಳಿದಿದೆ. ನಾವು ಯಾರಿಂದಲೂ ಸಲಹೆ ಪಡೆಯಬೇಕಾಗಿಲ್ಲ ಎಂದು ಅವರು ಭಾವಿಸುತ್ತಾರೆ. ಅದಕ್ಕಿಂತ ಉತ್ತಮವಾಗಿ ಅದನ್ನು ಹೇಗೆ ಹೇಳಬೇಕೆಂದು ನನಗೆ ತಿಳಿದಿಲ್ಲ. ಅನುಭವಿ ವ್ಯಕ್ತಿ ನಿಮಗೆ ಸಹಾಯ ಮಾಡಬಹುದು ಎಂದು ನಾವು ನಂಬುತ್ತೇವೆ ಎಂದು ಹೇಳಿದರು.

ಕಳೆದ ತಿಂಗಳು ಟೀಮ್ ಇಂಡಿಯಾ ಆಸ್ಟ್ರೇಲಿಯ ವಿರುದ್ಧ ಐಸಿಸಿ ವರ್ಲ್ಡ್ ಟೆಸ್ಟ್ ಚಾಂಪಿಯನ್ಶಿಪ್-2023ರ ಫೈನಲ್ ಪಂದ್ಯವನ್ನು ಸೋತ ನಂತರ ಸುನೀಲ್ ಗವಾಸ್ಕರ್ ಭಾರತ ತಂಡವನ್ನು ಟೀಕಿಸಿದ್ದರು. ರಾಹುಲ್ ದ್ರಾವಿಡ್, ಸಚಿನ್ ತೆಂಡುಲ್ಕರ್, ವಿವಿಎಸ್ ಲಕ್ಷ್ಮಣ್ ಹೊರತುಪಡಿಸಿ ಬೇರ್ಯಾವ ಆಟಗಾರನು ನನ್ನ ಬಳಿ ಸಲಹೆ ಕೇಳಲು ಬಂದಿಲ್ಲ ಎಂದು ಹೇಳಿದ್ದರು.

ಈಗಿನ ಆಟಗಾರರ ಕುರಿತು ಗವಾಸ್ಕರ್ ಹೇಳಿಕೆಯ ಬಗ್ಗೆ ಕಪಿಲ್ ದೇವ್ ಮಾತನಾಡಿದ್ದು, ನನ್ನನ್ನು ಈ ತನಕ ಯಾವುದೇ ವೇಗದ ಬೌಲರ್ ಸಲಹೆ ಕೇಳಿ ಸಂಪರ್ಕಿಸಿಲ್ಲ. ನಾನು ಗವಾಸ್ಕರ್ ರಿಂದ ಒಂದು ವಿಚಾರ ತಿಳಿದುಕೊಂಡಿದ್ದೇನೆ. ಅದೇನೆಂದರೆ, ಆಟಗಾರರಿಗೆ ಅಗತ್ಯವಿರುವ ತನಕ ಸಲಹೆ ನೀಡುವುದು ಬೇಡ. ನಿನ್ನ ಬಳಿ ಸಲಹೆ ಕೇಳುವ ತನಕ ಸಲಹೆ ನೀಡಬೇಡ ಎಂದು ಅವರು ನನಗೆ ಹೇಳಿದ್ದರು ಎಂದರು.

ಬಾರ್ಬಡೋಸ್ ನಲ್ಲಿ ಶನಿವಾರ ನಡೆದ 2ನೇ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಭಾರತವು 40.1 ಓವರ್ಗಳಲ್ಲಿ 181 ರನ್ ಗೆ ಆಲೌಟಾಯಿತು. ಇಶಾನ್ ಕಿಶನ್ ಹಾಗೂ ಶುಭಮನ್ ಗಿಲ್ ಹೊರತುಪಡಿಸಿ ಹೆಚ್ಚಿನ ಎಲ್ಲ ಆಟಗಾರರು ಕಳಪೆ ಪ್ರದರ್ಶನ ನೀಡಿದ್ದರು. ಹೀಗಾಗಿ ಸುಮಾರು 4 ವರ್ಷಗಳ ನಂತರ ಮೊದಲ ಗೆಲುವು ದಾಖಲಿಸಿದ್ದ ವೆಸ್ಟ್ಇಂಡೀಸ್ 3 ಪಂದ್ಯಗಳ ಸರಣಿಯನ್ನು 1-1ರಿಂದ ಸಮಬಲಗೊಳಿಸಿತ್ತು.

andolanait

Recent Posts

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಕದನ ವಿರಾಮ ಮಾತುಕತೆ: ಇರಾನಿನ ಕೆಲ ಬೇಡಿಕೆಗಳಿಗೆ ಅಮೇರಿಕಾ ತಾತ್ವಿಕ ಒಪ್ಪಿಗೆ

ಇಸ್ಲಾಮಾಬಾದ್:‌ ಪಶ್ಚಿಮ ಏಷ್ಯಾ ಯುದ್ಧವನ್ನು ಕೊನೆಗೊಳಿಸಲು ಇಸ್ಲಾಮಾಬಾದ್‌ನಲ್ಲಿ ಅಮೇರಿಕಾ-ಇರಾನ್‌ ನಡುವೆ ಕದನ ವಿರಾಮ ಮಾತುಕತೆ ನಡೆದಿದೆ. ಸಂಸದೀಯ ಸ್ಪೀಕರ್‌ ಮೊಹಮ್ಮದ್‌…

8 hours ago

ಬೆಂಗಳೂರಿನಲ್ಲಿ ದಾಖಲೆ ಪ್ರಮಾಣದ ಉಷ್ಣಾಂಶ: ಜನತೆಗೆ ಆರೋಗ್ಯ ಇಲಾಖೆ ಸೂಚನೆ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಹೀಟ್‌ ವೇವ್‌ ಎಚ್ಚರಿಕೆ…

11 hours ago

ಆರು ಹಸುಗಳ ಸಜೀವ ದಹನ ಪ್ರಕರಣ: ಆರೋಪಿ ಬಂಧನ

ಬೆಂಗಳೂರು: ಇಲ್ಲಿನ ಡಿ.ಜೆ.ಹಳ್ಳಿ ಬಳಿಯ ಶಾಂಪುರ ರಸ್ತೆಯಲ್ಲಿ ಕಿಡಿಗೇಡಿಯೊಬ್ಬ ಬೆಂಕಿ ಹಚ್ಚಿ ಆರು ಹಸುಗಳನ್ನು ಸಜೀವ ದಹನ ಮಾಡಿದ್ದ ಪ್ರಕರಣಕ್ಕೆ…

11 hours ago

ಅಮರನಾಥ ಯಾತ್ರೆಗೆ ಏಪ್ರಿಲ್.15ರಿಂದ ನೋಂದಣಿ‌

ನವದೆಹಲಿ: ಇದೇ ಏಪ್ರಿಲ್.‌15ರಿಂದ ಈ ವರ್ಷದ ಅಮರನಾಥ ಯಾತ್ರೆಗೆ ಮುಂಗಡ ನೋಂದಣಿ ಆರಂಭವಾಗಲಿದೆ. ಭಾರತದಾದ್ಯಂತ ಒಂದೇ ಸಮಯಕ್ಕೆ ಬುಕಿಂಗ್ ಪ್ರಾರಂಭವಾಗಲಿದ್ದು,…

11 hours ago

ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆ

ಕೊಡಗು: ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬೇತ್ರಿ ಗ್ರಾಮದಲ್ಲಿ ನಡೆದಿದೆ.…

11 hours ago

ಪ್ರಧಾನಿ ಮೋದಿ-ರಾಹುಲ್ ಗಾಂಧಿ ಮಾತುಕತೆ: ವಿಡಿಯೋ ವೈರಲ್

ನವದೆಹಲಿ: ಸಂಸತ್ತಿನ ಆವರಣದಲ್ಲಿ ಕಾರಿನಿಂದ ಇಳಿದು ಬಂದ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ಗಾಂಧಿ…

11 hours ago