ಕ್ರೀಡೆ

ಕೆಲವೊಮ್ಮೆ ಹೆಚ್ಚು ಹಣ ಬಂದರೆ ದುರಹಂಕಾರವೂ ಬರುತ್ತದೆ: ಭಾರತದ ಕ್ರಿಕೆಟಿಗರ ವಿರುದ್ಧ ಕಪಿಲ್ ದೇವ್ ಕಿಡಿ

ನವದೆಹಲಿ : ಕೆಲವೊಮ್ಮೆ ಹೆಚ್ಚು ಹಣ ಬಂದರೆ ದುರಹಂಕಾರವೂ ಬರುತ್ತದೆ. ಈ ಕ್ರಿಕೆಟಿಗರು ತಮಗೆ ಎಲ್ಲವೂ ತಿಳಿದಿದೆ ಎಂದು ಭಾವಿಸುತ್ತಾರೆ. ಸಹಾಯದ ಅಗತ್ಯವಿರುವ ಅನೇಕ ಕ್ರಿಕೆಟಿಗರು ಇದ್ದಾರೆ. ಸುನೀಲ್ ಗವಾಸ್ಕರ್ ಇರುವಾಗ ನೀವು ಏಕೆ ಮಾತನಾಡಬಾರದು? ಎಂದು ಹೇಳಿರುವ ಭಾರತದ ಮಾಜಿ ನಾಯಕ ಕಪಿಲ್ ದೇವ್ ಹಾಲಿ ಕ್ರಿಕೆಟಿಗರ ಕುರಿತು ಬೇಸರ ವ್ಯಕ್ತಪಡಿಸಿದರು. ಈ ಮೂಲಕ ಈ ಹಿಂದೆ ಆಟಗಾರರ ಅಹಂಕಾರದ ಕುರಿತಂತೆ ಹೇಳಿಕೆ ನೀಡಿದ್ದ ಇನ್ನೋರ್ವ ಮಾಜಿ ಕ್ರಿಕೆಟಿಗ ಸುನೀಲ್ ಗವಾಸ್ಕರ್ ಮಾತಿಗೆ ಧ್ವನಿಗೂಡಿಸಿದ್ದಾರೆ.

The Weekಗೆ ನೀಡಿರುವ ಸಂದರ್ಶನದಲ್ಲಿ ಮಾತನಾಡಿದ ಕಪಿಲ್ ದೇವ್, ಈಗಿನ ಹೆಚ್ಚಿನ ಆಟಗಾರರು ತುಂಬಾ ಆತ್ಮವಿಶ್ವಾಸ ಹೊಂದಿದ್ದಾರೆ ಎಂಬುದು ನನ್ನ ಅನಿಸಿಕೆ. ಆದರೆ ಅವರಲ್ಲಿ ನಕಾರಾತ್ಮಕ ಅಂಶವೂ ಇದೆ. ನಮಗೆ ಎಲ್ಲವೂ ತಿಳಿದಿದೆ. ನಾವು ಯಾರಿಂದಲೂ ಸಲಹೆ ಪಡೆಯಬೇಕಾಗಿಲ್ಲ ಎಂದು ಅವರು ಭಾವಿಸುತ್ತಾರೆ. ಅದಕ್ಕಿಂತ ಉತ್ತಮವಾಗಿ ಅದನ್ನು ಹೇಗೆ ಹೇಳಬೇಕೆಂದು ನನಗೆ ತಿಳಿದಿಲ್ಲ. ಅನುಭವಿ ವ್ಯಕ್ತಿ ನಿಮಗೆ ಸಹಾಯ ಮಾಡಬಹುದು ಎಂದು ನಾವು ನಂಬುತ್ತೇವೆ ಎಂದು ಹೇಳಿದರು.

ಕಳೆದ ತಿಂಗಳು ಟೀಮ್ ಇಂಡಿಯಾ ಆಸ್ಟ್ರೇಲಿಯ ವಿರುದ್ಧ ಐಸಿಸಿ ವರ್ಲ್ಡ್ ಟೆಸ್ಟ್ ಚಾಂಪಿಯನ್ಶಿಪ್-2023ರ ಫೈನಲ್ ಪಂದ್ಯವನ್ನು ಸೋತ ನಂತರ ಸುನೀಲ್ ಗವಾಸ್ಕರ್ ಭಾರತ ತಂಡವನ್ನು ಟೀಕಿಸಿದ್ದರು. ರಾಹುಲ್ ದ್ರಾವಿಡ್, ಸಚಿನ್ ತೆಂಡುಲ್ಕರ್, ವಿವಿಎಸ್ ಲಕ್ಷ್ಮಣ್ ಹೊರತುಪಡಿಸಿ ಬೇರ್ಯಾವ ಆಟಗಾರನು ನನ್ನ ಬಳಿ ಸಲಹೆ ಕೇಳಲು ಬಂದಿಲ್ಲ ಎಂದು ಹೇಳಿದ್ದರು.

ಈಗಿನ ಆಟಗಾರರ ಕುರಿತು ಗವಾಸ್ಕರ್ ಹೇಳಿಕೆಯ ಬಗ್ಗೆ ಕಪಿಲ್ ದೇವ್ ಮಾತನಾಡಿದ್ದು, ನನ್ನನ್ನು ಈ ತನಕ ಯಾವುದೇ ವೇಗದ ಬೌಲರ್ ಸಲಹೆ ಕೇಳಿ ಸಂಪರ್ಕಿಸಿಲ್ಲ. ನಾನು ಗವಾಸ್ಕರ್ ರಿಂದ ಒಂದು ವಿಚಾರ ತಿಳಿದುಕೊಂಡಿದ್ದೇನೆ. ಅದೇನೆಂದರೆ, ಆಟಗಾರರಿಗೆ ಅಗತ್ಯವಿರುವ ತನಕ ಸಲಹೆ ನೀಡುವುದು ಬೇಡ. ನಿನ್ನ ಬಳಿ ಸಲಹೆ ಕೇಳುವ ತನಕ ಸಲಹೆ ನೀಡಬೇಡ ಎಂದು ಅವರು ನನಗೆ ಹೇಳಿದ್ದರು ಎಂದರು.

ಬಾರ್ಬಡೋಸ್ ನಲ್ಲಿ ಶನಿವಾರ ನಡೆದ 2ನೇ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಭಾರತವು 40.1 ಓವರ್ಗಳಲ್ಲಿ 181 ರನ್ ಗೆ ಆಲೌಟಾಯಿತು. ಇಶಾನ್ ಕಿಶನ್ ಹಾಗೂ ಶುಭಮನ್ ಗಿಲ್ ಹೊರತುಪಡಿಸಿ ಹೆಚ್ಚಿನ ಎಲ್ಲ ಆಟಗಾರರು ಕಳಪೆ ಪ್ರದರ್ಶನ ನೀಡಿದ್ದರು. ಹೀಗಾಗಿ ಸುಮಾರು 4 ವರ್ಷಗಳ ನಂತರ ಮೊದಲ ಗೆಲುವು ದಾಖಲಿಸಿದ್ದ ವೆಸ್ಟ್ಇಂಡೀಸ್ 3 ಪಂದ್ಯಗಳ ಸರಣಿಯನ್ನು 1-1ರಿಂದ ಸಮಬಲಗೊಳಿಸಿತ್ತು.

andolanait

Recent Posts

ಮಹದೇಶ್ವರ ಬೆಟ್ಟ ಮುಖ್ಯರಸ್ತೆ ಬದಿಯಲ್ಲಿ ಒಂಟಿಸಲಗ ದರ್ಶನ: ಭಯಭೀತರಾದ ವಾಹನ ಸವಾರರು

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಬಾಲಕನ…

10 hours ago

ಸೈಬರ್ ಕ್ರೈಂ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ: ಕಳೆದುಹೋಗಿದ್ದ 104 ಮೊಬೈಲ್ ವಶಕ್ಕೆ

ಮಡಿಕೇರಿ: ಕೊಡಗು ಜಿಲ್ಲೆಯ ಸೈಬರ್ ಕ್ರೈಂ ಪೊಲೀಸರು ಒಂದು ತಿಂಗಳ ಕಾಲ ಕ್ಷಿಪ್ರ ಕಾರ್ಯಾಚರಣೆ ಮಾಡುವ ಮೂಲಕ ನಾಗರಿಕರು ಕಳೆದುಕೊಂಡ…

10 hours ago

ಮಕ್ಕಳಿಗೆ ಜಂತುಹುಳು ಮಾತ್ರೆ ನೀಡಿದ ಶಾಸಕ ಅನಿಲ್ ಚಿಕ್ಕಮಾದು

ಎಚ್.ಡಿ.ಕೋಟೆ: ಮಾದಾಪುರ ಗ್ರಾಮದ ಚಂದ್ರಮೌಳೇಶ್ವರ ಮಲ್ಲಿಕಾರ್ಜುನ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಪ್ರಯುಕ್ತ ಅರಣ್ಯ ಮತ್ತು…

10 hours ago

ಕಾಯಕ ಶರಣರ ಆದರ್ಶ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು: ಡಾ.ಬಿ.ವಿ.ನಂದೀಶ್

ಮಂಡ್ಯ: ಕಾಯಕ ಶರಣರು ಸಮಾಜಕ್ಕೆ ವಚನಗಳ ಮೂಲಕ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಯುವ ಜನತೆಯೂ ಕಾಯಕ ಶರಣರ ಆದರ್ಶ, ಮೌಲ್ಯಗಳನ್ನು…

11 hours ago

ಮಕ್ಕಳು ಅಂತರ್ಜಾಲದ ಬಳಕೆ ಕಡಿಮೆ ಮಾಡಬೇಕು: ಬಿ.ಸಿ.ಶಿವಾನಂದ ಮೂರ್ತಿ

ಮಂಡ್ಯ: ಪ್ರಸ್ತುತ ಕಾಲದಲ್ಲಿ ಮಕ್ಕಳು ಅಂತರ್ಜಾಲ ಬಳಕೆಯನ್ನು ಹೆಚ್ಚು ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಮುಳುಗಿ ಹೋಗಿದ್ದಾರೆ ಇದರಿಂದ ಮಕ್ಕಳ ಮನಸ್ಥಿತಿ…

11 hours ago

ಮಂಡ್ಯ ಜಿಲ್ಲೆ ಇ-ಪೌತಿ ಖಾತಾ ಆಂದೋಲನದಲ್ಲಿ ರಾಜ್ಯಕ್ಕೆ ಪ್ರಥಮ

ಮಂಡ್ಯ: ಪೌತಿ ಖಾತೆ ಪ್ರಕ್ರಿಯೆಯನ್ನು ಮಂಡ್ಯ ಜಿಲ್ಲೆಯು ಈ ಪೌತಿ ಖಾತೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ಈ ಪೌತಿ ಖಾತೆಯನ್ನು…

11 hours ago